• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಶ್ಮೀರ ಅಸೆಂಬ್ಲಿಯಲ್ಲಿ ಆರ್ಟಿಕಲ್ 370 ಮರುಸ್ಥಾಪನೆಗೆ ಒತ್ತಾಯ!

Tulunadu News Posted On November 5, 2024


  • Share On Facebook
  • Tweet It

ಹತ್ತು ವರುಷಗಳ ಬಳಿಕ ಚುನಾವಣೆಯನ್ನು ಕಂಡಿರುವ ಕಣಿವೆ ರಾಜ್ಯ ಜಮ್ಮು – ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಅಧಿಕಾರವನ್ನು ಹಿಡಿದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ತಾವು ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370 ಮರುಸ್ಥಾಪಿಸುವುದಾಗಿ ಭಾರತೀಯ ಜನತಾ ಪಾರ್ಟಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದವು.

ಈಗ ಚುನಾವಣೆ ಮುಗಿದು ಮೊದಲ ಅಧಿವೇಶನ ನಡೆಯುತ್ತಿರುವ ಈ ಕಾಲಘಟ್ಟದಲ್ಲಿ ಮೊದಲ ದಿನವೇ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ಮರುಸ್ಥಾಪಿಸಬೇಕಾಗಿ ಒತ್ತಾಯ ಪಿಡಿಪಿ ಶಾಸಕರಿಂದ ಕೇಳಿಬಂದಿದೆ. ಪಿಡಿಪಿ ಶಾಸಕ ವಾಹಿದ್ ಪರ್ಯಾ 370 ನೇ ವಿಧಿ ಮರುಸ್ಥಾಪನೆಗೆ ನಿರ್ಣಯ ಮಂಡಿಸಿದರು. ಈ ಗೊತ್ತುವಳಿಯನ್ನು ಬಿಜೆಪಿ ಶಾಸಕರು ವಿರೋಧಿಸಿ ಪರ್ಯಾ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ ಘಟನೆಯೂ ನಡೆದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ರಹೀಮ್ ರಾಥರ್ ಈ ಗೊತ್ತುವಳಿಯನ್ನು ಚರ್ಚೆಗೆ ಅಂಗೀಕರಿಸಿಲ್ಲ ಎಂದರು. ಬಳಿಕ ಮಾತನಾಡಿದ ಸಿಎಂ ಒಮರ್ ಅಬ್ದುಲ್ಲಾ ” 370 ನೇ ವಿಧಿ ರದ್ದತಿಯನ್ನು ಜನ ಒಪ್ಪಿಲ್ಲ ಎಂಬುದು ಚುನಾವಣಾ ಫಲಿತಾಂಶದಿಂದ ತಿಳಿದುಬಂದಿದೆ. ಆದರೆ ಪಿಡಿಪಿ ಮಂಡಿಸಿದ ಗೊತ್ತುವಳಿಗೆ ಅರ್ಥವಿಲ್ಲ. ಆ ಪಕ್ಷ ಕೇವಲ ಪ್ರಚಾರಕ್ಕೋಸ್ಕರ ನಿರ್ಣಯ ಮಂಡಿಸಿದೆ. ಮಂಡಿಸುವ ಉದ್ದೇಶ ಇದ್ದರೆ ನಮ್ಮ ಜತೆ ಚರ್ಚಿಸಬೇಕಿತ್ತು ಎಂದರು. ಒಟ್ಟಿನಲ್ಲಿ ನಿರೀಕ್ಷೆಯಂತೆ 370 ನೇ ವಿಧಿ ಮತ್ತೆ ಜಾರಿಗೆ ತರುವ ವಿಷಯದಲ್ಲಿ ಮೈಲೇಜ್ ತೆಗೆದುಕೊಳ್ಳಲು ಪಿಡಿಪಿ ಪ್ರಯತ್ನಪಡುತ್ತಿದ್ದರೆ, ಇತ್ತ ಬೂದಿ ಮುಚ್ಚಿದ ಕೆಂಡವನ್ನು ಕೈಯಲ್ಲಿ ಹಿಡಿಯಲು ಆಡಳಿತರೂಢ ನ್ಯಾಶನಲ್ ಕಾನ್ಪರೆನ್ಸ್ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search