• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರ ಅಸೆಂಬ್ಲಿಯಲ್ಲಿ ಆರ್ಟಿಕಲ್ 370 ಮರುಸ್ಥಾಪನೆಗೆ ಒತ್ತಾಯ!

Tulunadu News Posted On November 5, 2024
0


0
Shares
  • Share On Facebook
  • Tweet It

ಹತ್ತು ವರುಷಗಳ ಬಳಿಕ ಚುನಾವಣೆಯನ್ನು ಕಂಡಿರುವ ಕಣಿವೆ ರಾಜ್ಯ ಜಮ್ಮು – ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಅಧಿಕಾರವನ್ನು ಹಿಡಿದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ತಾವು ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370 ಮರುಸ್ಥಾಪಿಸುವುದಾಗಿ ಭಾರತೀಯ ಜನತಾ ಪಾರ್ಟಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದವು.

ಈಗ ಚುನಾವಣೆ ಮುಗಿದು ಮೊದಲ ಅಧಿವೇಶನ ನಡೆಯುತ್ತಿರುವ ಈ ಕಾಲಘಟ್ಟದಲ್ಲಿ ಮೊದಲ ದಿನವೇ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ಮರುಸ್ಥಾಪಿಸಬೇಕಾಗಿ ಒತ್ತಾಯ ಪಿಡಿಪಿ ಶಾಸಕರಿಂದ ಕೇಳಿಬಂದಿದೆ. ಪಿಡಿಪಿ ಶಾಸಕ ವಾಹಿದ್ ಪರ್ಯಾ 370 ನೇ ವಿಧಿ ಮರುಸ್ಥಾಪನೆಗೆ ನಿರ್ಣಯ ಮಂಡಿಸಿದರು. ಈ ಗೊತ್ತುವಳಿಯನ್ನು ಬಿಜೆಪಿ ಶಾಸಕರು ವಿರೋಧಿಸಿ ಪರ್ಯಾ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ ಘಟನೆಯೂ ನಡೆದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ರಹೀಮ್ ರಾಥರ್ ಈ ಗೊತ್ತುವಳಿಯನ್ನು ಚರ್ಚೆಗೆ ಅಂಗೀಕರಿಸಿಲ್ಲ ಎಂದರು. ಬಳಿಕ ಮಾತನಾಡಿದ ಸಿಎಂ ಒಮರ್ ಅಬ್ದುಲ್ಲಾ ” 370 ನೇ ವಿಧಿ ರದ್ದತಿಯನ್ನು ಜನ ಒಪ್ಪಿಲ್ಲ ಎಂಬುದು ಚುನಾವಣಾ ಫಲಿತಾಂಶದಿಂದ ತಿಳಿದುಬಂದಿದೆ. ಆದರೆ ಪಿಡಿಪಿ ಮಂಡಿಸಿದ ಗೊತ್ತುವಳಿಗೆ ಅರ್ಥವಿಲ್ಲ. ಆ ಪಕ್ಷ ಕೇವಲ ಪ್ರಚಾರಕ್ಕೋಸ್ಕರ ನಿರ್ಣಯ ಮಂಡಿಸಿದೆ. ಮಂಡಿಸುವ ಉದ್ದೇಶ ಇದ್ದರೆ ನಮ್ಮ ಜತೆ ಚರ್ಚಿಸಬೇಕಿತ್ತು ಎಂದರು. ಒಟ್ಟಿನಲ್ಲಿ ನಿರೀಕ್ಷೆಯಂತೆ 370 ನೇ ವಿಧಿ ಮತ್ತೆ ಜಾರಿಗೆ ತರುವ ವಿಷಯದಲ್ಲಿ ಮೈಲೇಜ್ ತೆಗೆದುಕೊಳ್ಳಲು ಪಿಡಿಪಿ ಪ್ರಯತ್ನಪಡುತ್ತಿದ್ದರೆ, ಇತ್ತ ಬೂದಿ ಮುಚ್ಚಿದ ಕೆಂಡವನ್ನು ಕೈಯಲ್ಲಿ ಹಿಡಿಯಲು ಆಡಳಿತರೂಢ ನ್ಯಾಶನಲ್ ಕಾನ್ಪರೆನ್ಸ್ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.

0
Shares
  • Share On Facebook
  • Tweet It




Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
Tulunadu News October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
  • Popular Posts

    • 1
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 2
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 3
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search