• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರ ಅಸೆಂಬ್ಲಿಯಲ್ಲಿ ಆರ್ಟಿಕಲ್ 370 ಮರುಸ್ಥಾಪನೆಗೆ ಒತ್ತಾಯ!

Tulunadu News Posted On November 5, 2024
0


0
Shares
  • Share On Facebook
  • Tweet It

ಹತ್ತು ವರುಷಗಳ ಬಳಿಕ ಚುನಾವಣೆಯನ್ನು ಕಂಡಿರುವ ಕಣಿವೆ ರಾಜ್ಯ ಜಮ್ಮು – ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಅಧಿಕಾರವನ್ನು ಹಿಡಿದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ತಾವು ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370 ಮರುಸ್ಥಾಪಿಸುವುದಾಗಿ ಭಾರತೀಯ ಜನತಾ ಪಾರ್ಟಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದವು.

ಈಗ ಚುನಾವಣೆ ಮುಗಿದು ಮೊದಲ ಅಧಿವೇಶನ ನಡೆಯುತ್ತಿರುವ ಈ ಕಾಲಘಟ್ಟದಲ್ಲಿ ಮೊದಲ ದಿನವೇ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ಮರುಸ್ಥಾಪಿಸಬೇಕಾಗಿ ಒತ್ತಾಯ ಪಿಡಿಪಿ ಶಾಸಕರಿಂದ ಕೇಳಿಬಂದಿದೆ. ಪಿಡಿಪಿ ಶಾಸಕ ವಾಹಿದ್ ಪರ್ಯಾ 370 ನೇ ವಿಧಿ ಮರುಸ್ಥಾಪನೆಗೆ ನಿರ್ಣಯ ಮಂಡಿಸಿದರು. ಈ ಗೊತ್ತುವಳಿಯನ್ನು ಬಿಜೆಪಿ ಶಾಸಕರು ವಿರೋಧಿಸಿ ಪರ್ಯಾ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ ಘಟನೆಯೂ ನಡೆದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ರಹೀಮ್ ರಾಥರ್ ಈ ಗೊತ್ತುವಳಿಯನ್ನು ಚರ್ಚೆಗೆ ಅಂಗೀಕರಿಸಿಲ್ಲ ಎಂದರು. ಬಳಿಕ ಮಾತನಾಡಿದ ಸಿಎಂ ಒಮರ್ ಅಬ್ದುಲ್ಲಾ ” 370 ನೇ ವಿಧಿ ರದ್ದತಿಯನ್ನು ಜನ ಒಪ್ಪಿಲ್ಲ ಎಂಬುದು ಚುನಾವಣಾ ಫಲಿತಾಂಶದಿಂದ ತಿಳಿದುಬಂದಿದೆ. ಆದರೆ ಪಿಡಿಪಿ ಮಂಡಿಸಿದ ಗೊತ್ತುವಳಿಗೆ ಅರ್ಥವಿಲ್ಲ. ಆ ಪಕ್ಷ ಕೇವಲ ಪ್ರಚಾರಕ್ಕೋಸ್ಕರ ನಿರ್ಣಯ ಮಂಡಿಸಿದೆ. ಮಂಡಿಸುವ ಉದ್ದೇಶ ಇದ್ದರೆ ನಮ್ಮ ಜತೆ ಚರ್ಚಿಸಬೇಕಿತ್ತು ಎಂದರು. ಒಟ್ಟಿನಲ್ಲಿ ನಿರೀಕ್ಷೆಯಂತೆ 370 ನೇ ವಿಧಿ ಮತ್ತೆ ಜಾರಿಗೆ ತರುವ ವಿಷಯದಲ್ಲಿ ಮೈಲೇಜ್ ತೆಗೆದುಕೊಳ್ಳಲು ಪಿಡಿಪಿ ಪ್ರಯತ್ನಪಡುತ್ತಿದ್ದರೆ, ಇತ್ತ ಬೂದಿ ಮುಚ್ಚಿದ ಕೆಂಡವನ್ನು ಕೈಯಲ್ಲಿ ಹಿಡಿಯಲು ಆಡಳಿತರೂಢ ನ್ಯಾಶನಲ್ ಕಾನ್ಪರೆನ್ಸ್ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search