• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರ ಅಸೆಂಬ್ಲಿಯಲ್ಲಿ ಆರ್ಟಿಕಲ್ 370 ಮರುಸ್ಥಾಪನೆಗೆ ಒತ್ತಾಯ!

Tulunadu News Posted On November 5, 2024
0


0
Shares
  • Share On Facebook
  • Tweet It

ಹತ್ತು ವರುಷಗಳ ಬಳಿಕ ಚುನಾವಣೆಯನ್ನು ಕಂಡಿರುವ ಕಣಿವೆ ರಾಜ್ಯ ಜಮ್ಮು – ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಅಧಿಕಾರವನ್ನು ಹಿಡಿದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ತಾವು ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370 ಮರುಸ್ಥಾಪಿಸುವುದಾಗಿ ಭಾರತೀಯ ಜನತಾ ಪಾರ್ಟಿ ಹೊರತುಪಡಿಸಿ ಉಳಿದ ಎಲ್ಲಾ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದವು.

ಈಗ ಚುನಾವಣೆ ಮುಗಿದು ಮೊದಲ ಅಧಿವೇಶನ ನಡೆಯುತ್ತಿರುವ ಈ ಕಾಲಘಟ್ಟದಲ್ಲಿ ಮೊದಲ ದಿನವೇ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ಮರುಸ್ಥಾಪಿಸಬೇಕಾಗಿ ಒತ್ತಾಯ ಪಿಡಿಪಿ ಶಾಸಕರಿಂದ ಕೇಳಿಬಂದಿದೆ. ಪಿಡಿಪಿ ಶಾಸಕ ವಾಹಿದ್ ಪರ್ಯಾ 370 ನೇ ವಿಧಿ ಮರುಸ್ಥಾಪನೆಗೆ ನಿರ್ಣಯ ಮಂಡಿಸಿದರು. ಈ ಗೊತ್ತುವಳಿಯನ್ನು ಬಿಜೆಪಿ ಶಾಸಕರು ವಿರೋಧಿಸಿ ಪರ್ಯಾ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದ ಘಟನೆಯೂ ನಡೆದಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ರಹೀಮ್ ರಾಥರ್ ಈ ಗೊತ್ತುವಳಿಯನ್ನು ಚರ್ಚೆಗೆ ಅಂಗೀಕರಿಸಿಲ್ಲ ಎಂದರು. ಬಳಿಕ ಮಾತನಾಡಿದ ಸಿಎಂ ಒಮರ್ ಅಬ್ದುಲ್ಲಾ ” 370 ನೇ ವಿಧಿ ರದ್ದತಿಯನ್ನು ಜನ ಒಪ್ಪಿಲ್ಲ ಎಂಬುದು ಚುನಾವಣಾ ಫಲಿತಾಂಶದಿಂದ ತಿಳಿದುಬಂದಿದೆ. ಆದರೆ ಪಿಡಿಪಿ ಮಂಡಿಸಿದ ಗೊತ್ತುವಳಿಗೆ ಅರ್ಥವಿಲ್ಲ. ಆ ಪಕ್ಷ ಕೇವಲ ಪ್ರಚಾರಕ್ಕೋಸ್ಕರ ನಿರ್ಣಯ ಮಂಡಿಸಿದೆ. ಮಂಡಿಸುವ ಉದ್ದೇಶ ಇದ್ದರೆ ನಮ್ಮ ಜತೆ ಚರ್ಚಿಸಬೇಕಿತ್ತು ಎಂದರು. ಒಟ್ಟಿನಲ್ಲಿ ನಿರೀಕ್ಷೆಯಂತೆ 370 ನೇ ವಿಧಿ ಮತ್ತೆ ಜಾರಿಗೆ ತರುವ ವಿಷಯದಲ್ಲಿ ಮೈಲೇಜ್ ತೆಗೆದುಕೊಳ್ಳಲು ಪಿಡಿಪಿ ಪ್ರಯತ್ನಪಡುತ್ತಿದ್ದರೆ, ಇತ್ತ ಬೂದಿ ಮುಚ್ಚಿದ ಕೆಂಡವನ್ನು ಕೈಯಲ್ಲಿ ಹಿಡಿಯಲು ಆಡಳಿತರೂಢ ನ್ಯಾಶನಲ್ ಕಾನ್ಪರೆನ್ಸ್ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search