• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುರುಷ ಟೈಲರ್ ಮಹಿಳೆಯ ಅಳತೆ ತೆಗೆಯುವಂತಿಲ್ಲ – ಯುಪಿ ಮಹಿಳಾ ಆಯೋಗ

Tulunadu News Posted On November 8, 2024
0


0
Shares
  • Share On Facebook
  • Tweet It

ಉತ್ತರ ಪ್ರದೇಶದ ಮಹಿಳಾ ಆಯೋಗ ರಾಜ್ಯದಲ್ಲಿ ಮಹಿಳಾ ಸುರಕ್ಷತೆ ಬಗ್ಗೆ ತೆಗೆದುಕೊಳ್ಳಬಹುದಾದ ಅನೇಕ ಕ್ರಮಗಳ ಬಗ್ಗೆ ವರದಿಯನ್ನು ತಯಾರಿಸಿದೆ. ಅದರಲ್ಲಿ ಪ್ರಮುಖವಾಗಿರುವ ಕೆಲವು ವಿಷಯಗಳು ಇಲ್ಲಿವೆ. ಮೊದಲನೇಯದಾಗಿ ಮಹಿಳೆಯರ ಬಟ್ಟೆಯ ಅಳತೆಯನ್ನು ಪುರುಷರು ತೆಗೆದುಕೊಳ್ಳುವಂತಿಲ್ಲ. ಇನ್ನು ಜಿಮ್ ಗಳಲ್ಲಿ ಮತ್ತು ಯೋಗ ತರಗತಿಗಳಲ್ಲಿ ಮಹಿಳೆಯರಿಗೆ ಮಹಿಳೆಯರೇ ತರಬೇತಿ ನೀಡಬೇಕು. ಮೂರನೇಯದಾಗಿ ಬಸ್ ಗಳಲ್ಲಿ ಮಹಿಳಾ ಸುರಕ್ಷತಾ ಸಿಬ್ಬಂದಿಗಳನ್ನೇ ನೇಮಿಸಬೇಕು. ಇನ್ನು ಮಹಿಳಾ ಉಡುಗೆಗಳ ಮಳಿಗೆಗಳಲ್ಲಿ ಮಹಿಳಾ ಸಿಬ್ಬಂದಿಗಳನ್ನೇ ನೇಮಿಸಬೇಕು.
ಇಂತಹ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಮಹಿಳಾ ಆಯೋಗ ಅಕ್ಟೋಬರ್ 28 ರಂದು ಲಕ್ನೋದಲ್ಲಿ ಸಭೆ ಸೇರಿ ಚಿಂತನೆ ನಡೆಸಿದೆ. ಇದೇ ಸಂದರ್ಭದಲ್ಲಿ ಬೇರೆ ಬೇರೆ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಯುಪಿ ಮಹಿಳಾ ಆಯೋಗದ ಸದಸ್ಯರು ಸಮಾಲೋಚನೆ ನಡೆಸಿದರು.
ಆಯೋಗದ ಸದಸ್ಯೆ ಮನೀಶಾ ಅಹ್ಲಾವಟ್ ಮಾತನಾಡಿ ” ಈ ನಿಯಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸದ್ಯ ಈ ವಿಷಯ ಪ್ರಾಥಮಿಕ ಹಂತದಲ್ಲಿದೆ. ಇದರ ಸಾಧ್ಯಾಸಾಧ್ಯತೆಯ ಬಗ್ಗೆ ಯೋಚಿಸಬೇಕಾಗಿದೆ. ಒಂದು ವೇಳೆ ಅದು ಸಮಂಜಸ ಎಂದು ತಿಳಿದುಬಂದರೆ ಅದರ ಮಸೂದೆ ರಚನೆ ಮಾಡಿ ಸರಕಾರಕ್ಕೆ ಸಲ್ಲಿಸಬೇಕಾಗುವುದು. ನಂತರ ಸರಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ” ಎಂದು ತಿಳಿಸಿದರು. ಇತ್ತ ಈ ಕ್ರಮಗಳು ಯೋಚನಾ ಹಂತದಲ್ಲಿ ಇರುವಾಗಲೇ ಅತ್ತ ಶಾಮ್ಲಿ ಜಿಲ್ಲೆಯ ಜಿಲ್ಲಾ ಪ್ರೊಭೆಶನರಿ ಅಧಿಕಾರಿ ಹಮೀದ್ ಹುಸೇನ್ ಅವರು ಸುತ್ತೋಲೆ ಹೊರಡಿಸಿದ್ದು ಮಹಿಳಾ ತರಬೇತುದಾರರನ್ನೇ ಜಿಮ್, ಯೋಗ ಮತ್ತು ನಾಟಕ ಕಲಿಕಾ ಕೇಂದ್ರಗಳಲ್ಲಿ ಮಹಿಳೆಯರ ತರಬೇತಿಗಾಗಿ ನೇಮಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ. ಇನ್ನು ಇಂತಹ ಕಡೆಗಳಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಇನ್ನು ಹುಸೇನ್ ಅವರು ” ಮಹಿಳಾ ಸುರಕ್ಷಾಕರ್ಮಿ ಮತ್ತು ಶಿಕ್ಷಕಿಯನ್ನು ಶಾಲಾ ಬಸ್ಸುಗಳಲ್ಲಿ ನೇಮಿಸಲು ಮತ್ತು ಮಹಿಳಾ ಬಟ್ಟೆ ಹೊಲಿಗೆ ಕೇಂದ್ರಗಳಲ್ಲಿ ಅಳತೆಗೆ ಮಹಿಳೆಯರನ್ನೇ ನೇಮಿಸಲು ಸೂಚಿಸಿದ್ದಾರೆ. ಯುಪಿಯ ಸಾಮಾಜಿಕ ಕಾರ್ಯಕರ್ತೆ ವೀಣಾ ಅಗರ್ವಾಲ್ ಅವರು ಈ ನಿಯಮಗಳನ್ನು ಸ್ವಾಗತಿಸಿದ್ದು, ಮಹಿಳಾ ಸುರಕ್ಷತೆಗಾಗಿ ಈ ಕ್ರಮಗಳು ಅತ್ಯಗತ್ಯ ಎಂದು ಹೇಳಿದ್ದಾರೆ.
0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search