• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪುರುಷ ಟೈಲರ್ ಮಹಿಳೆಯ ಅಳತೆ ತೆಗೆಯುವಂತಿಲ್ಲ – ಯುಪಿ ಮಹಿಳಾ ಆಯೋಗ

Tulunadu News Posted On November 8, 2024


  • Share On Facebook
  • Tweet It

ಉತ್ತರ ಪ್ರದೇಶದ ಮಹಿಳಾ ಆಯೋಗ ರಾಜ್ಯದಲ್ಲಿ ಮಹಿಳಾ ಸುರಕ್ಷತೆ ಬಗ್ಗೆ ತೆಗೆದುಕೊಳ್ಳಬಹುದಾದ ಅನೇಕ ಕ್ರಮಗಳ ಬಗ್ಗೆ ವರದಿಯನ್ನು ತಯಾರಿಸಿದೆ. ಅದರಲ್ಲಿ ಪ್ರಮುಖವಾಗಿರುವ ಕೆಲವು ವಿಷಯಗಳು ಇಲ್ಲಿವೆ. ಮೊದಲನೇಯದಾಗಿ ಮಹಿಳೆಯರ ಬಟ್ಟೆಯ ಅಳತೆಯನ್ನು ಪುರುಷರು ತೆಗೆದುಕೊಳ್ಳುವಂತಿಲ್ಲ. ಇನ್ನು ಜಿಮ್ ಗಳಲ್ಲಿ ಮತ್ತು ಯೋಗ ತರಗತಿಗಳಲ್ಲಿ ಮಹಿಳೆಯರಿಗೆ ಮಹಿಳೆಯರೇ ತರಬೇತಿ ನೀಡಬೇಕು. ಮೂರನೇಯದಾಗಿ ಬಸ್ ಗಳಲ್ಲಿ ಮಹಿಳಾ ಸುರಕ್ಷತಾ ಸಿಬ್ಬಂದಿಗಳನ್ನೇ ನೇಮಿಸಬೇಕು. ಇನ್ನು ಮಹಿಳಾ ಉಡುಗೆಗಳ ಮಳಿಗೆಗಳಲ್ಲಿ ಮಹಿಳಾ ಸಿಬ್ಬಂದಿಗಳನ್ನೇ ನೇಮಿಸಬೇಕು.
ಇಂತಹ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಮಹಿಳಾ ಆಯೋಗ ಅಕ್ಟೋಬರ್ 28 ರಂದು ಲಕ್ನೋದಲ್ಲಿ ಸಭೆ ಸೇರಿ ಚಿಂತನೆ ನಡೆಸಿದೆ. ಇದೇ ಸಂದರ್ಭದಲ್ಲಿ ಬೇರೆ ಬೇರೆ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಯುಪಿ ಮಹಿಳಾ ಆಯೋಗದ ಸದಸ್ಯರು ಸಮಾಲೋಚನೆ ನಡೆಸಿದರು.
ಆಯೋಗದ ಸದಸ್ಯೆ ಮನೀಶಾ ಅಹ್ಲಾವಟ್ ಮಾತನಾಡಿ ” ಈ ನಿಯಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸದ್ಯ ಈ ವಿಷಯ ಪ್ರಾಥಮಿಕ ಹಂತದಲ್ಲಿದೆ. ಇದರ ಸಾಧ್ಯಾಸಾಧ್ಯತೆಯ ಬಗ್ಗೆ ಯೋಚಿಸಬೇಕಾಗಿದೆ. ಒಂದು ವೇಳೆ ಅದು ಸಮಂಜಸ ಎಂದು ತಿಳಿದುಬಂದರೆ ಅದರ ಮಸೂದೆ ರಚನೆ ಮಾಡಿ ಸರಕಾರಕ್ಕೆ ಸಲ್ಲಿಸಬೇಕಾಗುವುದು. ನಂತರ ಸರಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ” ಎಂದು ತಿಳಿಸಿದರು. ಇತ್ತ ಈ ಕ್ರಮಗಳು ಯೋಚನಾ ಹಂತದಲ್ಲಿ ಇರುವಾಗಲೇ ಅತ್ತ ಶಾಮ್ಲಿ ಜಿಲ್ಲೆಯ ಜಿಲ್ಲಾ ಪ್ರೊಭೆಶನರಿ ಅಧಿಕಾರಿ ಹಮೀದ್ ಹುಸೇನ್ ಅವರು ಸುತ್ತೋಲೆ ಹೊರಡಿಸಿದ್ದು ಮಹಿಳಾ ತರಬೇತುದಾರರನ್ನೇ ಜಿಮ್, ಯೋಗ ಮತ್ತು ನಾಟಕ ಕಲಿಕಾ ಕೇಂದ್ರಗಳಲ್ಲಿ ಮಹಿಳೆಯರ ತರಬೇತಿಗಾಗಿ ನೇಮಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ. ಇನ್ನು ಇಂತಹ ಕಡೆಗಳಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಇನ್ನು ಹುಸೇನ್ ಅವರು ” ಮಹಿಳಾ ಸುರಕ್ಷಾಕರ್ಮಿ ಮತ್ತು ಶಿಕ್ಷಕಿಯನ್ನು ಶಾಲಾ ಬಸ್ಸುಗಳಲ್ಲಿ ನೇಮಿಸಲು ಮತ್ತು ಮಹಿಳಾ ಬಟ್ಟೆ ಹೊಲಿಗೆ ಕೇಂದ್ರಗಳಲ್ಲಿ ಅಳತೆಗೆ ಮಹಿಳೆಯರನ್ನೇ ನೇಮಿಸಲು ಸೂಚಿಸಿದ್ದಾರೆ. ಯುಪಿಯ ಸಾಮಾಜಿಕ ಕಾರ್ಯಕರ್ತೆ ವೀಣಾ ಅಗರ್ವಾಲ್ ಅವರು ಈ ನಿಯಮಗಳನ್ನು ಸ್ವಾಗತಿಸಿದ್ದು, ಮಹಿಳಾ ಸುರಕ್ಷತೆಗಾಗಿ ಈ ಕ್ರಮಗಳು ಅತ್ಯಗತ್ಯ ಎಂದು ಹೇಳಿದ್ದಾರೆ.
  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search