• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುರುಷ ಟೈಲರ್ ಮಹಿಳೆಯ ಅಳತೆ ತೆಗೆಯುವಂತಿಲ್ಲ – ಯುಪಿ ಮಹಿಳಾ ಆಯೋಗ

Tulunadu News Posted On November 8, 2024
0


0
Shares
  • Share On Facebook
  • Tweet It

ಉತ್ತರ ಪ್ರದೇಶದ ಮಹಿಳಾ ಆಯೋಗ ರಾಜ್ಯದಲ್ಲಿ ಮಹಿಳಾ ಸುರಕ್ಷತೆ ಬಗ್ಗೆ ತೆಗೆದುಕೊಳ್ಳಬಹುದಾದ ಅನೇಕ ಕ್ರಮಗಳ ಬಗ್ಗೆ ವರದಿಯನ್ನು ತಯಾರಿಸಿದೆ. ಅದರಲ್ಲಿ ಪ್ರಮುಖವಾಗಿರುವ ಕೆಲವು ವಿಷಯಗಳು ಇಲ್ಲಿವೆ. ಮೊದಲನೇಯದಾಗಿ ಮಹಿಳೆಯರ ಬಟ್ಟೆಯ ಅಳತೆಯನ್ನು ಪುರುಷರು ತೆಗೆದುಕೊಳ್ಳುವಂತಿಲ್ಲ. ಇನ್ನು ಜಿಮ್ ಗಳಲ್ಲಿ ಮತ್ತು ಯೋಗ ತರಗತಿಗಳಲ್ಲಿ ಮಹಿಳೆಯರಿಗೆ ಮಹಿಳೆಯರೇ ತರಬೇತಿ ನೀಡಬೇಕು. ಮೂರನೇಯದಾಗಿ ಬಸ್ ಗಳಲ್ಲಿ ಮಹಿಳಾ ಸುರಕ್ಷತಾ ಸಿಬ್ಬಂದಿಗಳನ್ನೇ ನೇಮಿಸಬೇಕು. ಇನ್ನು ಮಹಿಳಾ ಉಡುಗೆಗಳ ಮಳಿಗೆಗಳಲ್ಲಿ ಮಹಿಳಾ ಸಿಬ್ಬಂದಿಗಳನ್ನೇ ನೇಮಿಸಬೇಕು.
ಇಂತಹ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಮಹಿಳಾ ಆಯೋಗ ಅಕ್ಟೋಬರ್ 28 ರಂದು ಲಕ್ನೋದಲ್ಲಿ ಸಭೆ ಸೇರಿ ಚಿಂತನೆ ನಡೆಸಿದೆ. ಇದೇ ಸಂದರ್ಭದಲ್ಲಿ ಬೇರೆ ಬೇರೆ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಯುಪಿ ಮಹಿಳಾ ಆಯೋಗದ ಸದಸ್ಯರು ಸಮಾಲೋಚನೆ ನಡೆಸಿದರು.
ಆಯೋಗದ ಸದಸ್ಯೆ ಮನೀಶಾ ಅಹ್ಲಾವಟ್ ಮಾತನಾಡಿ ” ಈ ನಿಯಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸದ್ಯ ಈ ವಿಷಯ ಪ್ರಾಥಮಿಕ ಹಂತದಲ್ಲಿದೆ. ಇದರ ಸಾಧ್ಯಾಸಾಧ್ಯತೆಯ ಬಗ್ಗೆ ಯೋಚಿಸಬೇಕಾಗಿದೆ. ಒಂದು ವೇಳೆ ಅದು ಸಮಂಜಸ ಎಂದು ತಿಳಿದುಬಂದರೆ ಅದರ ಮಸೂದೆ ರಚನೆ ಮಾಡಿ ಸರಕಾರಕ್ಕೆ ಸಲ್ಲಿಸಬೇಕಾಗುವುದು. ನಂತರ ಸರಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ” ಎಂದು ತಿಳಿಸಿದರು. ಇತ್ತ ಈ ಕ್ರಮಗಳು ಯೋಚನಾ ಹಂತದಲ್ಲಿ ಇರುವಾಗಲೇ ಅತ್ತ ಶಾಮ್ಲಿ ಜಿಲ್ಲೆಯ ಜಿಲ್ಲಾ ಪ್ರೊಭೆಶನರಿ ಅಧಿಕಾರಿ ಹಮೀದ್ ಹುಸೇನ್ ಅವರು ಸುತ್ತೋಲೆ ಹೊರಡಿಸಿದ್ದು ಮಹಿಳಾ ತರಬೇತುದಾರರನ್ನೇ ಜಿಮ್, ಯೋಗ ಮತ್ತು ನಾಟಕ ಕಲಿಕಾ ಕೇಂದ್ರಗಳಲ್ಲಿ ಮಹಿಳೆಯರ ತರಬೇತಿಗಾಗಿ ನೇಮಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ. ಇನ್ನು ಇಂತಹ ಕಡೆಗಳಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಇನ್ನು ಹುಸೇನ್ ಅವರು ” ಮಹಿಳಾ ಸುರಕ್ಷಾಕರ್ಮಿ ಮತ್ತು ಶಿಕ್ಷಕಿಯನ್ನು ಶಾಲಾ ಬಸ್ಸುಗಳಲ್ಲಿ ನೇಮಿಸಲು ಮತ್ತು ಮಹಿಳಾ ಬಟ್ಟೆ ಹೊಲಿಗೆ ಕೇಂದ್ರಗಳಲ್ಲಿ ಅಳತೆಗೆ ಮಹಿಳೆಯರನ್ನೇ ನೇಮಿಸಲು ಸೂಚಿಸಿದ್ದಾರೆ. ಯುಪಿಯ ಸಾಮಾಜಿಕ ಕಾರ್ಯಕರ್ತೆ ವೀಣಾ ಅಗರ್ವಾಲ್ ಅವರು ಈ ನಿಯಮಗಳನ್ನು ಸ್ವಾಗತಿಸಿದ್ದು, ಮಹಿಳಾ ಸುರಕ್ಷತೆಗಾಗಿ ಈ ಕ್ರಮಗಳು ಅತ್ಯಗತ್ಯ ಎಂದು ಹೇಳಿದ್ದಾರೆ.
0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search