• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುರುಷ ಟೈಲರ್ ಮಹಿಳೆಯ ಅಳತೆ ತೆಗೆಯುವಂತಿಲ್ಲ – ಯುಪಿ ಮಹಿಳಾ ಆಯೋಗ

Tulunadu News Posted On November 8, 2024
0


0
Shares
  • Share On Facebook
  • Tweet It

ಉತ್ತರ ಪ್ರದೇಶದ ಮಹಿಳಾ ಆಯೋಗ ರಾಜ್ಯದಲ್ಲಿ ಮಹಿಳಾ ಸುರಕ್ಷತೆ ಬಗ್ಗೆ ತೆಗೆದುಕೊಳ್ಳಬಹುದಾದ ಅನೇಕ ಕ್ರಮಗಳ ಬಗ್ಗೆ ವರದಿಯನ್ನು ತಯಾರಿಸಿದೆ. ಅದರಲ್ಲಿ ಪ್ರಮುಖವಾಗಿರುವ ಕೆಲವು ವಿಷಯಗಳು ಇಲ್ಲಿವೆ. ಮೊದಲನೇಯದಾಗಿ ಮಹಿಳೆಯರ ಬಟ್ಟೆಯ ಅಳತೆಯನ್ನು ಪುರುಷರು ತೆಗೆದುಕೊಳ್ಳುವಂತಿಲ್ಲ. ಇನ್ನು ಜಿಮ್ ಗಳಲ್ಲಿ ಮತ್ತು ಯೋಗ ತರಗತಿಗಳಲ್ಲಿ ಮಹಿಳೆಯರಿಗೆ ಮಹಿಳೆಯರೇ ತರಬೇತಿ ನೀಡಬೇಕು. ಮೂರನೇಯದಾಗಿ ಬಸ್ ಗಳಲ್ಲಿ ಮಹಿಳಾ ಸುರಕ್ಷತಾ ಸಿಬ್ಬಂದಿಗಳನ್ನೇ ನೇಮಿಸಬೇಕು. ಇನ್ನು ಮಹಿಳಾ ಉಡುಗೆಗಳ ಮಳಿಗೆಗಳಲ್ಲಿ ಮಹಿಳಾ ಸಿಬ್ಬಂದಿಗಳನ್ನೇ ನೇಮಿಸಬೇಕು.
ಇಂತಹ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಮಹಿಳಾ ಆಯೋಗ ಅಕ್ಟೋಬರ್ 28 ರಂದು ಲಕ್ನೋದಲ್ಲಿ ಸಭೆ ಸೇರಿ ಚಿಂತನೆ ನಡೆಸಿದೆ. ಇದೇ ಸಂದರ್ಭದಲ್ಲಿ ಬೇರೆ ಬೇರೆ ನಿಯಮಗಳನ್ನು ಜಾರಿಗೆ ತರುವ ಬಗ್ಗೆ ಯುಪಿ ಮಹಿಳಾ ಆಯೋಗದ ಸದಸ್ಯರು ಸಮಾಲೋಚನೆ ನಡೆಸಿದರು.
ಆಯೋಗದ ಸದಸ್ಯೆ ಮನೀಶಾ ಅಹ್ಲಾವಟ್ ಮಾತನಾಡಿ ” ಈ ನಿಯಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸದ್ಯ ಈ ವಿಷಯ ಪ್ರಾಥಮಿಕ ಹಂತದಲ್ಲಿದೆ. ಇದರ ಸಾಧ್ಯಾಸಾಧ್ಯತೆಯ ಬಗ್ಗೆ ಯೋಚಿಸಬೇಕಾಗಿದೆ. ಒಂದು ವೇಳೆ ಅದು ಸಮಂಜಸ ಎಂದು ತಿಳಿದುಬಂದರೆ ಅದರ ಮಸೂದೆ ರಚನೆ ಮಾಡಿ ಸರಕಾರಕ್ಕೆ ಸಲ್ಲಿಸಬೇಕಾಗುವುದು. ನಂತರ ಸರಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ” ಎಂದು ತಿಳಿಸಿದರು. ಇತ್ತ ಈ ಕ್ರಮಗಳು ಯೋಚನಾ ಹಂತದಲ್ಲಿ ಇರುವಾಗಲೇ ಅತ್ತ ಶಾಮ್ಲಿ ಜಿಲ್ಲೆಯ ಜಿಲ್ಲಾ ಪ್ರೊಭೆಶನರಿ ಅಧಿಕಾರಿ ಹಮೀದ್ ಹುಸೇನ್ ಅವರು ಸುತ್ತೋಲೆ ಹೊರಡಿಸಿದ್ದು ಮಹಿಳಾ ತರಬೇತುದಾರರನ್ನೇ ಜಿಮ್, ಯೋಗ ಮತ್ತು ನಾಟಕ ಕಲಿಕಾ ಕೇಂದ್ರಗಳಲ್ಲಿ ಮಹಿಳೆಯರ ತರಬೇತಿಗಾಗಿ ನೇಮಿಸಬೇಕು ಎಂದು ಆದೇಶ ಹೊರಡಿಸಿದ್ದಾರೆ. ಇನ್ನು ಇಂತಹ ಕಡೆಗಳಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಇನ್ನು ಹುಸೇನ್ ಅವರು ” ಮಹಿಳಾ ಸುರಕ್ಷಾಕರ್ಮಿ ಮತ್ತು ಶಿಕ್ಷಕಿಯನ್ನು ಶಾಲಾ ಬಸ್ಸುಗಳಲ್ಲಿ ನೇಮಿಸಲು ಮತ್ತು ಮಹಿಳಾ ಬಟ್ಟೆ ಹೊಲಿಗೆ ಕೇಂದ್ರಗಳಲ್ಲಿ ಅಳತೆಗೆ ಮಹಿಳೆಯರನ್ನೇ ನೇಮಿಸಲು ಸೂಚಿಸಿದ್ದಾರೆ. ಯುಪಿಯ ಸಾಮಾಜಿಕ ಕಾರ್ಯಕರ್ತೆ ವೀಣಾ ಅಗರ್ವಾಲ್ ಅವರು ಈ ನಿಯಮಗಳನ್ನು ಸ್ವಾಗತಿಸಿದ್ದು, ಮಹಿಳಾ ಸುರಕ್ಷತೆಗಾಗಿ ಈ ಕ್ರಮಗಳು ಅತ್ಯಗತ್ಯ ಎಂದು ಹೇಳಿದ್ದಾರೆ.
0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search