• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಳಿಗಾಲದಲ್ಲಿ ಬಾಲರಾಮನನ್ನು ಬೆಚ್ಚಗಿಡಲು ಏನಿದೆ ವ್ಯವಸ್ಥೆ!

Tulunadu News Posted On November 11, 2024
0


0
Shares
  • Share On Facebook
  • Tweet It

ಅಯೋಧ್ಯೆಯ ಬಾಲರಾಮನಿಗೆ ಈ ಬಾರಿ ಭವ್ಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಿದ ನಂತರ ಮೊದಲ ಅಧಿಕೃತ ಚಳಿಗಾಲದ ದಿನಗಳು ಆರಂಭಗೊಳ್ಳಲಿವೆ. ಈ ದಿನಗಳಲ್ಲಿ ರಾಮ ಮಂದಿರದಲ್ಲಿ ಬಾಲರಾಮನನ್ನು ಬೆಚ್ಚಗಿಡಲು ತಯಾರಿ ನಡೆಸಲಾಗಿದೆ. ನವೆಂಬರ್ 20 ರಿಂದ ಬರುವ “ಅಘರ್ ಕಿ ಪಂಚಮಿ”ಯಿಂದ ರಾಮಲಲ್ಲಾನಿಗೆ ಚಾದರ, ಪಶ್ಮಿನಾ ಶಾಲು ಹೊದಿಸಿ ಅಲಂಕಾರ ಮಾಡಲಾಗುವುದು, ಹೀಟರ್ ಅಳವಡಿಕೆ ಮಾಡಿ ಮೂರ್ತಿಗೆ ಬಿಸಿ ನೀರಿನ ಅಭಿಷೇಕ ಮಾಡಲಾಗುವುದು. ಬಾಲರಾಮನಿಗೆ ಮೊಸರು ನೈವೇದ್ಯದ ಬದಲು ಹವಾಮಾನ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಒಣಹಣ್ಣುಗಳ ನೈವೇದ್ಯ ಇರುತ್ತದೆ.

ಚಳಿಗಾಲದ ವಿಶೇಷ ಉಡುಗೆಯನ್ನು ಬಾಲರಾಮನಿಗೆ ತೊಡಿಸಲಿದ್ದು, ದೆಹಲಿ ಮೂಲದ ವಿನ್ಯಾಸಕಾರರು ಹೊಲಿಯುತ್ತಿದ್ದಾರೆ. ಅದನ್ನೇ ನವೆಂಬರ್ 20 ರ ಬಳಿಕ ರಾಮಲಲ್ಲಾನಿಗೆ ತೊಡಿಸಲಾಗುವುದು. ರಾಮಲಲ್ಲಾ ಮೂರ್ತಿಗೆ ಉಗುರು ಬೆಚ್ಚನೆಯ ನೀರಿನಿಂದ ಸ್ನಾನ ಮಾಡಲಾಗುವುದು ಮತ್ತು ಗರ್ಬಗುಡಿಯಲ್ಲಿ ಹೀಟರ್ ಗಳನ್ನು ಅಳವಡಿಸಿ ಅದನ್ನು ಬೆಚ್ಚಗಿಡಲಾಗುತ್ತದೆ. ಹವಾಮಾನ ವೈಪರೀತ್ಯದ ಸಮಯದಲ್ಲಿ ಗರ್ಭಗುಡಿಯಲ್ಲಿ ಬ್ಲೋವರ್ ನಿಂದ ಬೆಚ್ಚಗಿನ ಗಾಳಿಯನ್ನು ಸಹ ಒದಗಿಸಲಾಗುವುದು.

ದೇವಾಲಯದ ಟ್ರಸ್ಟ್ ನ ವಕ್ತಾರ ಓಂಕಾರ್ ಸಿಂಗ್, ರಾಮಲಲ್ಲಾ ರಾಮಮಂದಿರದಲ್ಲಿ ರಾಜಕುಮಾರನಾಗಿ ಕುಳಿತಿದ್ದಾನೆ. ಆದ್ದರಿಂದ ಅವನ ಬಟ್ಟೆಗಳು ಅವನ ರಾಜಪ್ರಭುತ್ವಕ್ಕೆ ಹೊಂದಿಕೆಯಾಗಬೇಕು ಎಂದು ಸಿಂಗ್ ತಿಳಿಸಿದರು.
ಒಟ್ಟಿನಲ್ಲಿ ಬಾಲರಾಮನ ಆರೈಕೆಗೆ ಚಳಿಗಾಲದ ಅಯೋಧ್ಯೆ ಸರ್ವಸನ್ನದ್ಧವಾಗಿದೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search