• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಳಿಗಾಲದಲ್ಲಿ ಬಾಲರಾಮನನ್ನು ಬೆಚ್ಚಗಿಡಲು ಏನಿದೆ ವ್ಯವಸ್ಥೆ!

Tulunadu News Posted On November 11, 2024
0


0
Shares
  • Share On Facebook
  • Tweet It

ಅಯೋಧ್ಯೆಯ ಬಾಲರಾಮನಿಗೆ ಈ ಬಾರಿ ಭವ್ಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಿದ ನಂತರ ಮೊದಲ ಅಧಿಕೃತ ಚಳಿಗಾಲದ ದಿನಗಳು ಆರಂಭಗೊಳ್ಳಲಿವೆ. ಈ ದಿನಗಳಲ್ಲಿ ರಾಮ ಮಂದಿರದಲ್ಲಿ ಬಾಲರಾಮನನ್ನು ಬೆಚ್ಚಗಿಡಲು ತಯಾರಿ ನಡೆಸಲಾಗಿದೆ. ನವೆಂಬರ್ 20 ರಿಂದ ಬರುವ “ಅಘರ್ ಕಿ ಪಂಚಮಿ”ಯಿಂದ ರಾಮಲಲ್ಲಾನಿಗೆ ಚಾದರ, ಪಶ್ಮಿನಾ ಶಾಲು ಹೊದಿಸಿ ಅಲಂಕಾರ ಮಾಡಲಾಗುವುದು, ಹೀಟರ್ ಅಳವಡಿಕೆ ಮಾಡಿ ಮೂರ್ತಿಗೆ ಬಿಸಿ ನೀರಿನ ಅಭಿಷೇಕ ಮಾಡಲಾಗುವುದು. ಬಾಲರಾಮನಿಗೆ ಮೊಸರು ನೈವೇದ್ಯದ ಬದಲು ಹವಾಮಾನ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಒಣಹಣ್ಣುಗಳ ನೈವೇದ್ಯ ಇರುತ್ತದೆ.

ಚಳಿಗಾಲದ ವಿಶೇಷ ಉಡುಗೆಯನ್ನು ಬಾಲರಾಮನಿಗೆ ತೊಡಿಸಲಿದ್ದು, ದೆಹಲಿ ಮೂಲದ ವಿನ್ಯಾಸಕಾರರು ಹೊಲಿಯುತ್ತಿದ್ದಾರೆ. ಅದನ್ನೇ ನವೆಂಬರ್ 20 ರ ಬಳಿಕ ರಾಮಲಲ್ಲಾನಿಗೆ ತೊಡಿಸಲಾಗುವುದು. ರಾಮಲಲ್ಲಾ ಮೂರ್ತಿಗೆ ಉಗುರು ಬೆಚ್ಚನೆಯ ನೀರಿನಿಂದ ಸ್ನಾನ ಮಾಡಲಾಗುವುದು ಮತ್ತು ಗರ್ಬಗುಡಿಯಲ್ಲಿ ಹೀಟರ್ ಗಳನ್ನು ಅಳವಡಿಸಿ ಅದನ್ನು ಬೆಚ್ಚಗಿಡಲಾಗುತ್ತದೆ. ಹವಾಮಾನ ವೈಪರೀತ್ಯದ ಸಮಯದಲ್ಲಿ ಗರ್ಭಗುಡಿಯಲ್ಲಿ ಬ್ಲೋವರ್ ನಿಂದ ಬೆಚ್ಚಗಿನ ಗಾಳಿಯನ್ನು ಸಹ ಒದಗಿಸಲಾಗುವುದು.

ದೇವಾಲಯದ ಟ್ರಸ್ಟ್ ನ ವಕ್ತಾರ ಓಂಕಾರ್ ಸಿಂಗ್, ರಾಮಲಲ್ಲಾ ರಾಮಮಂದಿರದಲ್ಲಿ ರಾಜಕುಮಾರನಾಗಿ ಕುಳಿತಿದ್ದಾನೆ. ಆದ್ದರಿಂದ ಅವನ ಬಟ್ಟೆಗಳು ಅವನ ರಾಜಪ್ರಭುತ್ವಕ್ಕೆ ಹೊಂದಿಕೆಯಾಗಬೇಕು ಎಂದು ಸಿಂಗ್ ತಿಳಿಸಿದರು.
ಒಟ್ಟಿನಲ್ಲಿ ಬಾಲರಾಮನ ಆರೈಕೆಗೆ ಚಳಿಗಾಲದ ಅಯೋಧ್ಯೆ ಸರ್ವಸನ್ನದ್ಧವಾಗಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search