• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಳಿಗಾಲದಲ್ಲಿ ಬಾಲರಾಮನನ್ನು ಬೆಚ್ಚಗಿಡಲು ಏನಿದೆ ವ್ಯವಸ್ಥೆ!

Tulunadu News Posted On November 11, 2024
0


0
Shares
  • Share On Facebook
  • Tweet It

ಅಯೋಧ್ಯೆಯ ಬಾಲರಾಮನಿಗೆ ಈ ಬಾರಿ ಭವ್ಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಿದ ನಂತರ ಮೊದಲ ಅಧಿಕೃತ ಚಳಿಗಾಲದ ದಿನಗಳು ಆರಂಭಗೊಳ್ಳಲಿವೆ. ಈ ದಿನಗಳಲ್ಲಿ ರಾಮ ಮಂದಿರದಲ್ಲಿ ಬಾಲರಾಮನನ್ನು ಬೆಚ್ಚಗಿಡಲು ತಯಾರಿ ನಡೆಸಲಾಗಿದೆ. ನವೆಂಬರ್ 20 ರಿಂದ ಬರುವ “ಅಘರ್ ಕಿ ಪಂಚಮಿ”ಯಿಂದ ರಾಮಲಲ್ಲಾನಿಗೆ ಚಾದರ, ಪಶ್ಮಿನಾ ಶಾಲು ಹೊದಿಸಿ ಅಲಂಕಾರ ಮಾಡಲಾಗುವುದು, ಹೀಟರ್ ಅಳವಡಿಕೆ ಮಾಡಿ ಮೂರ್ತಿಗೆ ಬಿಸಿ ನೀರಿನ ಅಭಿಷೇಕ ಮಾಡಲಾಗುವುದು. ಬಾಲರಾಮನಿಗೆ ಮೊಸರು ನೈವೇದ್ಯದ ಬದಲು ಹವಾಮಾನ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಒಣಹಣ್ಣುಗಳ ನೈವೇದ್ಯ ಇರುತ್ತದೆ.

ಚಳಿಗಾಲದ ವಿಶೇಷ ಉಡುಗೆಯನ್ನು ಬಾಲರಾಮನಿಗೆ ತೊಡಿಸಲಿದ್ದು, ದೆಹಲಿ ಮೂಲದ ವಿನ್ಯಾಸಕಾರರು ಹೊಲಿಯುತ್ತಿದ್ದಾರೆ. ಅದನ್ನೇ ನವೆಂಬರ್ 20 ರ ಬಳಿಕ ರಾಮಲಲ್ಲಾನಿಗೆ ತೊಡಿಸಲಾಗುವುದು. ರಾಮಲಲ್ಲಾ ಮೂರ್ತಿಗೆ ಉಗುರು ಬೆಚ್ಚನೆಯ ನೀರಿನಿಂದ ಸ್ನಾನ ಮಾಡಲಾಗುವುದು ಮತ್ತು ಗರ್ಬಗುಡಿಯಲ್ಲಿ ಹೀಟರ್ ಗಳನ್ನು ಅಳವಡಿಸಿ ಅದನ್ನು ಬೆಚ್ಚಗಿಡಲಾಗುತ್ತದೆ. ಹವಾಮಾನ ವೈಪರೀತ್ಯದ ಸಮಯದಲ್ಲಿ ಗರ್ಭಗುಡಿಯಲ್ಲಿ ಬ್ಲೋವರ್ ನಿಂದ ಬೆಚ್ಚಗಿನ ಗಾಳಿಯನ್ನು ಸಹ ಒದಗಿಸಲಾಗುವುದು.

ದೇವಾಲಯದ ಟ್ರಸ್ಟ್ ನ ವಕ್ತಾರ ಓಂಕಾರ್ ಸಿಂಗ್, ರಾಮಲಲ್ಲಾ ರಾಮಮಂದಿರದಲ್ಲಿ ರಾಜಕುಮಾರನಾಗಿ ಕುಳಿತಿದ್ದಾನೆ. ಆದ್ದರಿಂದ ಅವನ ಬಟ್ಟೆಗಳು ಅವನ ರಾಜಪ್ರಭುತ್ವಕ್ಕೆ ಹೊಂದಿಕೆಯಾಗಬೇಕು ಎಂದು ಸಿಂಗ್ ತಿಳಿಸಿದರು.
ಒಟ್ಟಿನಲ್ಲಿ ಬಾಲರಾಮನ ಆರೈಕೆಗೆ ಚಳಿಗಾಲದ ಅಯೋಧ್ಯೆ ಸರ್ವಸನ್ನದ್ಧವಾಗಿದೆ.

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search