• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಿಸ್, ಅಪ್ಪುಗೆ ಪ್ರೀತಿ, ಪ್ರೇಮದಲ್ಲಿ ಸ್ವಾಭಾವಿಕ -ಎಂದ ಮದ್ರಾಸ್ ನ್ಯಾಯಾಲಯ

Tulunadu News Posted On November 14, 2024
0


0
Shares
  • Share On Facebook
  • Tweet It

ಪುರುಷನೊಬ್ಬನ ವಿರುದ್ಧ ದಾಖಲಾಗಿದ್ದ ಇಂಡಿಯನ್ ಪೀನಲ್ ಕೋಡ್ ಸೆಕ್ಷನ್ 354 ಎ ಪ್ರಕಾರ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮಾನ್ಯ ಮದ್ರಾಸ್ ಹೈಕೋರ್ಟ್ ಅಸಿಂಧುಗೊಳಿಸಿದೆ. ನ್ಯಾಯಮೂರ್ತಿ ಆನಂದ ವೆಂಕಟೇಶ್ ಅವರು ತಮ್ಮ ತೀರ್ಪಿನಲ್ಲಿ ಲೈಂಗಿಕ ದೌರ್ಜನ್ಯ ಎಂದರೆ ದೈಹಿಕವಾಗಿ ಸಂಬಂಧವನ್ನು ಇಟ್ಟುಕೊಳ್ಳುವುದು ಮತ್ತು ಲೈಂಗಿಕತೆಗಾಗಿ ವಿವಿಧ ರೀತಿಯಲ್ಲಿ ಪೀಡಿಸುವುದು ಆಗಿರುತ್ತದೆ. ಆದರೆ ಪ್ರೀತಿ, ಪ್ರೇಮದ ಸಂಬಂಧ ಇದ್ದಾಗ ಪ್ರೇಮಿಗಳಿಬ್ಬರು ಭೇಟಿಯಾದಾಗ ಅಪ್ಪುಗೆಯೊಂದಿಗೆ ಚುಂಬಿಸಿದರೆ ಅದು ಲೈಂಗಿಕ ದೌರ್ಜನ್ಯದ ವ್ಯಾಪ್ತಿಯಲ್ಲಿ ಬರುವುದಿಲ್ಲ. ಅದು ಪ್ರೀತಿ, ಪ್ರೇಮದಲ್ಲಿ ಸಹಜ ಎಂದು ಹೇಳಿದರು.

ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿರುವುದನ್ನು ರದ್ದುಗೊಳಿಸಬೇಕಾಗಿ ಶಂತನಾಗಣೇಶ್ ಎಂಬುವರು ಸಲ್ಲಿಸಿದ ಮೇಲ್ಮನವಿಯ ಬಗ್ಗೆ ತೀರ್ಪು ನೀಡಿದ ಹೈಕೋರ್ಟ್ ಆತನ ಮೇಲೆ ಶ್ರೀವೈಗುಂಡಂನ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ರದ್ದುಗೊಳಿಸಲು ಆದೇಶ ನೀಡಿತು.

ಅರ್ಜಿದಾರರ ಮನವಿಯ ಬಗ್ಗೆ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯ 2020 ರಿಂದ ದೂರುದಾರ ಯುವತಿಯೊಂದಿಗೆ ಅರ್ಜಿದಾರರಿಗೆ ಪ್ರೇಮವಿತ್ತು. 2022 ರ ನವೆಂಬರ್ 13 ರಂದು ಆಕೆಯನ್ನು ತನ್ನ ಬಳಿ ಕರೆಸಿಕೊಂಡಿದ್ದ ಅರ್ಜಿದಾರರು ಆಕೆಯೊಂದಿಗೆ ಮಾತನಾಡುತ್ತಿದ್ದಾಗ ಆಕೆಯನ್ನು ಚುಂಬಿಸಿದ್ದಾರೆ. ಅದನ್ನು ದೂರುದಾರ ಯುವತಿ ತನ್ನ ಪೋಷಕರಿಗೆ ಹೇಳಿದ್ದಾರೆ. ಅವರು ಶಂತನಾಗಣೇಶ್ ಎನ್ನುವ ವ್ಯಕ್ತಿಯನ್ನು ಭೇಟಿಯಾಗಿ ಅವಳು ಮದುವೆಯಾಗಲು ಒತ್ತಾಯಿಸಿದ್ದಾರೆ. ಆದರೆ ಆ ವ್ಯಕ್ತಿ ಮದುವೆಯಾಗಲು ನಿರಾಕರಿಸಿ ಆಕೆಯಿಂದ ದೂರವಾಗಲು ನಿರ್ಧರಿಸಿದ್ದಾನೆ. ನಂತರ ಆಕೆಯ ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದಾಗ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಮಾನ್ಯ ನ್ಯಾಯಾಲಯ ತನ್ನ ತೀರ್ಪಿನಲ್ಲಿ ” ಪ್ರಥಮ ಮಾಹಿತಿ ವರದಿಯಲ್ಲಿ ಇರುವ ವಿಷಯ ನಿಜ ಎಂದು ನಂಬಿದರೂ ಅದರಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಮುಂದುವರೆದಿರುವುದು ಸಮಂಜಸವಲ್ಲ” ಎಂದು ಹೇಳಿದೆ.

0
Shares
  • Share On Facebook
  • Tweet It




Trending Now
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
  • Popular Posts

    • 1
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 2
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 3
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 4
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 5
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ

  • Privacy Policy
  • Contact
© Tulunadu Infomedia.

Press enter/return to begin your search