• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಿಸ್, ಅಪ್ಪುಗೆ ಪ್ರೀತಿ, ಪ್ರೇಮದಲ್ಲಿ ಸ್ವಾಭಾವಿಕ -ಎಂದ ಮದ್ರಾಸ್ ನ್ಯಾಯಾಲಯ

Tulunadu News Posted On November 14, 2024


  • Share On Facebook
  • Tweet It

ಪುರುಷನೊಬ್ಬನ ವಿರುದ್ಧ ದಾಖಲಾಗಿದ್ದ ಇಂಡಿಯನ್ ಪೀನಲ್ ಕೋಡ್ ಸೆಕ್ಷನ್ 354 ಎ ಪ್ರಕಾರ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮಾನ್ಯ ಮದ್ರಾಸ್ ಹೈಕೋರ್ಟ್ ಅಸಿಂಧುಗೊಳಿಸಿದೆ. ನ್ಯಾಯಮೂರ್ತಿ ಆನಂದ ವೆಂಕಟೇಶ್ ಅವರು ತಮ್ಮ ತೀರ್ಪಿನಲ್ಲಿ ಲೈಂಗಿಕ ದೌರ್ಜನ್ಯ ಎಂದರೆ ದೈಹಿಕವಾಗಿ ಸಂಬಂಧವನ್ನು ಇಟ್ಟುಕೊಳ್ಳುವುದು ಮತ್ತು ಲೈಂಗಿಕತೆಗಾಗಿ ವಿವಿಧ ರೀತಿಯಲ್ಲಿ ಪೀಡಿಸುವುದು ಆಗಿರುತ್ತದೆ. ಆದರೆ ಪ್ರೀತಿ, ಪ್ರೇಮದ ಸಂಬಂಧ ಇದ್ದಾಗ ಪ್ರೇಮಿಗಳಿಬ್ಬರು ಭೇಟಿಯಾದಾಗ ಅಪ್ಪುಗೆಯೊಂದಿಗೆ ಚುಂಬಿಸಿದರೆ ಅದು ಲೈಂಗಿಕ ದೌರ್ಜನ್ಯದ ವ್ಯಾಪ್ತಿಯಲ್ಲಿ ಬರುವುದಿಲ್ಲ. ಅದು ಪ್ರೀತಿ, ಪ್ರೇಮದಲ್ಲಿ ಸಹಜ ಎಂದು ಹೇಳಿದರು.

ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿರುವುದನ್ನು ರದ್ದುಗೊಳಿಸಬೇಕಾಗಿ ಶಂತನಾಗಣೇಶ್ ಎಂಬುವರು ಸಲ್ಲಿಸಿದ ಮೇಲ್ಮನವಿಯ ಬಗ್ಗೆ ತೀರ್ಪು ನೀಡಿದ ಹೈಕೋರ್ಟ್ ಆತನ ಮೇಲೆ ಶ್ರೀವೈಗುಂಡಂನ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ರದ್ದುಗೊಳಿಸಲು ಆದೇಶ ನೀಡಿತು.

ಅರ್ಜಿದಾರರ ಮನವಿಯ ಬಗ್ಗೆ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯ 2020 ರಿಂದ ದೂರುದಾರ ಯುವತಿಯೊಂದಿಗೆ ಅರ್ಜಿದಾರರಿಗೆ ಪ್ರೇಮವಿತ್ತು. 2022 ರ ನವೆಂಬರ್ 13 ರಂದು ಆಕೆಯನ್ನು ತನ್ನ ಬಳಿ ಕರೆಸಿಕೊಂಡಿದ್ದ ಅರ್ಜಿದಾರರು ಆಕೆಯೊಂದಿಗೆ ಮಾತನಾಡುತ್ತಿದ್ದಾಗ ಆಕೆಯನ್ನು ಚುಂಬಿಸಿದ್ದಾರೆ. ಅದನ್ನು ದೂರುದಾರ ಯುವತಿ ತನ್ನ ಪೋಷಕರಿಗೆ ಹೇಳಿದ್ದಾರೆ. ಅವರು ಶಂತನಾಗಣೇಶ್ ಎನ್ನುವ ವ್ಯಕ್ತಿಯನ್ನು ಭೇಟಿಯಾಗಿ ಅವಳು ಮದುವೆಯಾಗಲು ಒತ್ತಾಯಿಸಿದ್ದಾರೆ. ಆದರೆ ಆ ವ್ಯಕ್ತಿ ಮದುವೆಯಾಗಲು ನಿರಾಕರಿಸಿ ಆಕೆಯಿಂದ ದೂರವಾಗಲು ನಿರ್ಧರಿಸಿದ್ದಾನೆ. ನಂತರ ಆಕೆಯ ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದಾಗ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಮಾನ್ಯ ನ್ಯಾಯಾಲಯ ತನ್ನ ತೀರ್ಪಿನಲ್ಲಿ ” ಪ್ರಥಮ ಮಾಹಿತಿ ವರದಿಯಲ್ಲಿ ಇರುವ ವಿಷಯ ನಿಜ ಎಂದು ನಂಬಿದರೂ ಅದರಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಮುಂದುವರೆದಿರುವುದು ಸಮಂಜಸವಲ್ಲ” ಎಂದು ಹೇಳಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search