• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಿಸ್, ಅಪ್ಪುಗೆ ಪ್ರೀತಿ, ಪ್ರೇಮದಲ್ಲಿ ಸ್ವಾಭಾವಿಕ -ಎಂದ ಮದ್ರಾಸ್ ನ್ಯಾಯಾಲಯ

Tulunadu News Posted On November 14, 2024
0


0
Shares
  • Share On Facebook
  • Tweet It

ಪುರುಷನೊಬ್ಬನ ವಿರುದ್ಧ ದಾಖಲಾಗಿದ್ದ ಇಂಡಿಯನ್ ಪೀನಲ್ ಕೋಡ್ ಸೆಕ್ಷನ್ 354 ಎ ಪ್ರಕಾರ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮಾನ್ಯ ಮದ್ರಾಸ್ ಹೈಕೋರ್ಟ್ ಅಸಿಂಧುಗೊಳಿಸಿದೆ. ನ್ಯಾಯಮೂರ್ತಿ ಆನಂದ ವೆಂಕಟೇಶ್ ಅವರು ತಮ್ಮ ತೀರ್ಪಿನಲ್ಲಿ ಲೈಂಗಿಕ ದೌರ್ಜನ್ಯ ಎಂದರೆ ದೈಹಿಕವಾಗಿ ಸಂಬಂಧವನ್ನು ಇಟ್ಟುಕೊಳ್ಳುವುದು ಮತ್ತು ಲೈಂಗಿಕತೆಗಾಗಿ ವಿವಿಧ ರೀತಿಯಲ್ಲಿ ಪೀಡಿಸುವುದು ಆಗಿರುತ್ತದೆ. ಆದರೆ ಪ್ರೀತಿ, ಪ್ರೇಮದ ಸಂಬಂಧ ಇದ್ದಾಗ ಪ್ರೇಮಿಗಳಿಬ್ಬರು ಭೇಟಿಯಾದಾಗ ಅಪ್ಪುಗೆಯೊಂದಿಗೆ ಚುಂಬಿಸಿದರೆ ಅದು ಲೈಂಗಿಕ ದೌರ್ಜನ್ಯದ ವ್ಯಾಪ್ತಿಯಲ್ಲಿ ಬರುವುದಿಲ್ಲ. ಅದು ಪ್ರೀತಿ, ಪ್ರೇಮದಲ್ಲಿ ಸಹಜ ಎಂದು ಹೇಳಿದರು.

ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿರುವುದನ್ನು ರದ್ದುಗೊಳಿಸಬೇಕಾಗಿ ಶಂತನಾಗಣೇಶ್ ಎಂಬುವರು ಸಲ್ಲಿಸಿದ ಮೇಲ್ಮನವಿಯ ಬಗ್ಗೆ ತೀರ್ಪು ನೀಡಿದ ಹೈಕೋರ್ಟ್ ಆತನ ಮೇಲೆ ಶ್ರೀವೈಗುಂಡಂನ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ರದ್ದುಗೊಳಿಸಲು ಆದೇಶ ನೀಡಿತು.

ಅರ್ಜಿದಾರರ ಮನವಿಯ ಬಗ್ಗೆ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯ 2020 ರಿಂದ ದೂರುದಾರ ಯುವತಿಯೊಂದಿಗೆ ಅರ್ಜಿದಾರರಿಗೆ ಪ್ರೇಮವಿತ್ತು. 2022 ರ ನವೆಂಬರ್ 13 ರಂದು ಆಕೆಯನ್ನು ತನ್ನ ಬಳಿ ಕರೆಸಿಕೊಂಡಿದ್ದ ಅರ್ಜಿದಾರರು ಆಕೆಯೊಂದಿಗೆ ಮಾತನಾಡುತ್ತಿದ್ದಾಗ ಆಕೆಯನ್ನು ಚುಂಬಿಸಿದ್ದಾರೆ. ಅದನ್ನು ದೂರುದಾರ ಯುವತಿ ತನ್ನ ಪೋಷಕರಿಗೆ ಹೇಳಿದ್ದಾರೆ. ಅವರು ಶಂತನಾಗಣೇಶ್ ಎನ್ನುವ ವ್ಯಕ್ತಿಯನ್ನು ಭೇಟಿಯಾಗಿ ಅವಳು ಮದುವೆಯಾಗಲು ಒತ್ತಾಯಿಸಿದ್ದಾರೆ. ಆದರೆ ಆ ವ್ಯಕ್ತಿ ಮದುವೆಯಾಗಲು ನಿರಾಕರಿಸಿ ಆಕೆಯಿಂದ ದೂರವಾಗಲು ನಿರ್ಧರಿಸಿದ್ದಾನೆ. ನಂತರ ಆಕೆಯ ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದಾಗ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಮಾನ್ಯ ನ್ಯಾಯಾಲಯ ತನ್ನ ತೀರ್ಪಿನಲ್ಲಿ ” ಪ್ರಥಮ ಮಾಹಿತಿ ವರದಿಯಲ್ಲಿ ಇರುವ ವಿಷಯ ನಿಜ ಎಂದು ನಂಬಿದರೂ ಅದರಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಮುಂದುವರೆದಿರುವುದು ಸಮಂಜಸವಲ್ಲ” ಎಂದು ಹೇಳಿದೆ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search