• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಔಷಧದ ಕೊರತೆಗೆ ಕಾರಣ ಏನು?

Tulunadu News Posted On November 19, 2024
0


0
Shares
  • Share On Facebook
  • Tweet It

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಅಂದಾಜು 250 ರೀತಿಯ ಔಷಧಗಳ ಪೂರೈಕೆ ಸ್ಥಗಿತಗೊಂಡಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಮುಂದುವರೆದಿದೆ. ಇದಕ್ಕೆ ಮುಖ್ಯ ಕಾರಭ ಟೆಂಡರ್ ಕರೆದಿರುವುದರಲ್ಲಿ ವಿಳಂಬ ಎಂದೇ ಹೇಳಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಅಸ್ಟೊಪೈನ್, ಸಬ್ಲೋಟೊಮಲ್, ನ್ಯುಸ್ಟೊಜಿಮೈನ್, ಪ್ಯಾರಸಿಟಮಲ್, ವಿಲ್ಡ್ ಗ್ಲೀಪ್ಟನ್, ಲೆವೋಥೈರಾಕ್ಸಿನ್, ಆಂಪ್ಸಿಲಿನ್, ಅಲ್ಬುಮಿನಿ ಸೇರಿದಂತೆ ವಿವಿಧ ಔಷಧಗಳ ಪೂರೈಕೆ ಟೆಂಡರ್ ವಿಳಂಬದಿಂದ ಸಮಸ್ಯೆಯಾಗಿದೆ ಎನ್ನುವುದು ಗೊತ್ತಾಗಿದೆ.
ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ಇದನ್ನು ನಿರಾಕರಿಸಿದ್ದು, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಔಷಧ ಖರೀದಿಗೆ ಟೆಂಡರ್ ಕರೆಯಲು ವಿಳಂಬವಾಗಿದೆ. ಆದರೆ 44 ರೀತಿಯ ಅಗತ್ಯ ಔಷಧ ಸೇರಿ ಹಲವು ಔಷಧಗಳನ್ನು ಸ್ಥಳೀಯವಾಗಿ ಖರೀದಿ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಜಿಲ್ಲಾ ಮಟ್ಟದ ಸಮಿತಿಗಳಿಂದಲೇ ಖರೀದಿ ಮಾಡಲಾಗುತ್ತಿದೆ. ಉಳಿದಂತೆ ತುರ್ತು ಔಷಧಗಳ ದಾಸ್ತಾನು ಕೂಡ ಲಭ್ಯವಿದ್ದು, ಶೇಕಡಾ 70 ರಷ್ಟು ಔಷಧಗಳು ದೊರಕುತ್ತಿವೆ ಎಂದು ಹೇಳಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆ ಇಲ್ಲ. ನಮ್ಮ ಸರಕಾರ ಬಂದ ಆರಂಭ ದಿನಗಳಲ್ಲಿ ಕೇವಲ 40% ರಷ್ಟು ಔಷಧ ಸಿಗುತ್ತಿತ್ತು. ಉಳಿದ ಔಷಧಗಳನ್ನು ಆಸ್ಪತ್ರೆಗಳಲ್ಲೇ ಖರೀದಿ ಮಾಡಲಾಗುತ್ತಿತ್ತು. ಈಗ ಶೇ 75% ರಷ್ಟು ಔಷಧ ವೈದ್ಯಕೀಯ ಸರಬರಾಜು ನಿಗಮದಿಂದಲೇ ಪೂರೈಕೆ ಆಗುತ್ತಿದೆ ಎಂದಿದ್ದಾರೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search