• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಉಗ್ರರ ನಾಡಾಗಿದ್ದ ಕಾಶ್ಮೀರ, ಎನ್‌ಡಿಎ ಬಂದ ಬಳಿಕ ಅವರ ಸಂಹಾರ

TNN Correspondent Posted On September 3, 2017
0


0
Shares
  • Share On Facebook
  • Tweet It

ದೆಹಲಿ: ಶನಿವಾರವಷ್ಟೇ ಲಷ್ಕರೆ ತೊಯ್ಬಾ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಆ ಮೂಲಕ ಜಮ್ಮು-ಕಾಶ್ಮೀರ ಗಡಿಯಲ್ಲಿ ನಿರಂತರವಾಗಿ ಉಗ್ರರನ್ನು ಛೂ ಬಿಟ್ಟು ಉಪಟಳ ಮೆರೆಯುತ್ತಿದ್ದ ಪಾಕಿಸ್ತಾನ ಹಾಗೂ ಪಾಕಿಸ್ತಾನದ ಎಂಜಲು ಕಾಸಿಗಾಗಿ ದಾಳಿ ಮಾಡುತ್ತಿದ್ದ ಉಗ್ರರಿಗೆ ಭಾರತೀಯ ಸೇನೆ ದಿಟ್ಟ ಪಾಠ ಕಲಿಸಿದ್ದು, ಪ್ರಸಕ್ತ ವರ್ಷದ ಆರು ತಿಂಗಳಲ್ಲಿ ಅಂದರೆ ಜುಲೈ ವೇಳೆಗೆ 100 ಉಗ್ರರನ್ನು ಹೊಡೆದುರುಳಿಸಿದೆ.ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಈ ಕುರಿತು ಮಾಹಿತಿ ನೀಡಿದ್ದು, ಭಾರತೀಯ ಸೇನೆ, ಕೇಂದ್ರೀಯ ಪಡೆ, ರಾಜ್ಯ ಸರಕಾರ ಹಾಗೂ ಗುಪ್ತಚರ ಇಲಾಖೆಯ ಸಹಕಾರದೊಂದಿಗೆ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡು ಉಗ್ರರನ್ನು ಸದೆಬಡಿಯಲಾಗಿದೆ ಎಂದು ತಿಳಿಸಿದ್ದಾರೆ.ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ಸೇನೆಗೆ ಅಧಿಕ ಸ್ವಾತಂತ್ರ್ಯ ನೀಡಿರುವುದರಿಂದಲೇ ಇಷ್ಟು ಉಗ್ರರನ್ನು ಹತ್ಯೆ ಮಾಡಲು ಸಾಧ್ಯವಾಯಿತು. ಕಳೆದ ವರ್ಷ ಇದೇ ಅವಧಿಯಲ್ಲಿ 79 ಉಗ್ರರನ್ನು ಹೊಡೆದುರುಳಿಸಲಾಗಿತ್ತು ಎಂದು ಹೇಳಿದ್ದಾರೆ. ಉಗ್ರರ ಹತ್ಯೆಯಷ್ಟೇ ಅಲ್ಲ, ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್‌ನನ್ನು ಜಾಗತಿಕ ಉಗ್ರ ಎಂದು ಅಮೆರಿಕ ಘೋಷಿಸುವಂತೆ ಮಾಡುವಲ್ಲೂ ನಾವು ಸಫಲರಾಗಿದ್ದೇವೆ ಎಂದಿದ್ದಾರೆ.

ವರ್ಷ                         ಉಗ್ರರ ಹತ್ಯೆ ಸಂಖ್ಯೆ

2012 (ಯಪಿಎ )                   72

2013  (ಯುಪಿಎ)                 67

2014  (ಎನ್‌ಡಿಎ )                110

2015                                     108

2016                                      150

2017 (ಜುಲೈ ವರೆಗೆ)             100

* ಒಳನುಸುಳುವಿಕೆ ಪ್ರಮಾಣದಲ್ಲೂ ಕುಸಿತ

2016ರಲ್ಲಿ ಪಾಕ್ ಉಗ್ರರು ಸುಮಾರು 371 ಬಾರಿ ಅಕ್ರಮವಾಗಿ ಒಳನುಸುಳಿದ್ದರು.
2017ಪ್ರಸಕ್ತ ವರ್ಷದ ಜುಲೈವರೆಗೆ 124 ಬಾರಿ ಒಳನುಸುಳಲಾಗಿದೆ.

ಕಲ್ಲು ತೂರಾಟಗಾರರಿಗೂ ಬಿಸಿ

ಕಳೆದ ವರ್ಷ ಹಿಜ್ಬುಲ್ ಉಗ್ರ ಬುರ್ಹಾನ್ ವಾನಿಯ ಹತ್ಯೆ ಬಳಿಕ ಕಾಶ್ಮೀರದಲ್ಲಿ ಕಲ್ಲು ತೂರಾಟಗಾರರ ಉಪಟಳ ಜಾಸ್ತಿಯಾಗಿತ್ತು. ಆದರೆ ಈ ಬಾರಿ ಅದನ್ನು ಹತೋಟಿಗೆ ತರಲಾಗಿದ್ದು, ಕಲ್ಲು ತೂರಾಟಗಾರರಿಗೂ ಬಿಸಿ ಮುಟ್ಟಿಸಲಾಗಿದೆ. ಕಳೆದ ವರ್ಷ ಜುಲೈವರೆಗಿನ ಅಂಕಿ-ಅಂಶದ ಪ್ರಕಾರ 820 ಕಲ್ಲು ತೂರಾಟ ಪ್ರಕರಣ ದಾಖಲಾಗಿದ್ದವು. ಆದರೆ ಈ ಬಾರಿ ಆ ಪ್ರಕರಣಗಳು ಕೇವಲ 142ಕ್ಕೆ ಇಳಿದಿದೆ. ಉಗ್ರ ಸಂಬಂಧೀ ಚಟುವಟಿಕೆಗಳನ್ನೂ ತಹಬಂದಿಗೆ ತರಲಾಗಿದ್ದು 2016ರಲ್ಲಿ ಜುಲೈ ವೇಳೆಗೆ 168 ಉಗ್ರ ಸಂಬಂಧಿ ಚಟುವಟಿಕೆ ದಾಖಲಾಗಿದ್ದರೆ, ಪ್ರಸಕ್ತ ವರ್ಷದಲ್ಲಿ ಆ ಸಂಖ್ಯೆೆ 120ಕ್ಕೆ ಕುಸಿಯುತ್ತಿಿದೆ.

460

ಎನ್‌ಡಿಎ ಸರಕಾರಕ್ಕೆೆ ಅಸ್ತಿತ್ವಕ್ಕೆ ಬಂದ ಮೇಲೆ ಹತ್ಯೆೆ ಮಾಡಲಾಗಿರುವ ಉಗ್ರರ ಸಂಖ್ಯೆ.

ಪ್ರಸಕ್ತ ವರ್ಷ ಹತ್ಯೆಯಾದ ಪ್ರಮುಖ ಉಗ್ರರು

– ಸಬ್ಜಾರ್ ಅಹ್ಮದ್ ಭಟ್ (ಹಿಜ್ಬುಲ್ ಉಗ್ರ. ಹತ್ಯೆ- ಮೇ 27)
-ಬಷೀರ್ ಲಷ್ಕರಿ(ಲಷ್ಕರೆ ತಯ್ಯಬಾ ಉಗ್ರ. ಹತ್ಯೆ- ಜೂನ್ 1)

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search