• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಟ್ಟೂರಿನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಅಂತ್ಯಸಂಸ್ಕಾರ

Tulunadu News Posted On November 20, 2024
0


0
Shares
  • Share On Facebook
  • Tweet It

ನಕ್ಸಲ್ ನಾಯಕ ವಿಕ್ರಂ ಗೌಡನ ಅಂತಿಮ ವಿಧಿವಿಧಾನ ಮತ್ತು ಅಂತ್ಯಸಂಸ್ಕಾರ ಅವನ ಹುಟ್ಟೂರಾದ ಹೆಬ್ರಿ ತಾಲೂಕಿನ ಕೂಡ್ಲೂವಿನಲ್ಲಿ ನೆರವೇರಿತು. ಪೀತಬೈಲ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಸೋಮವಾರ ರಾತ್ರಿ ವಿಕ್ರಂ ಗೌಡ ಹತನಾಗಿದ್ದ. ಸತ್ತಿರುವ ನಕ್ಸಲ್ ವಿಕ್ರಂ ಗೌಡ ಎಂದು ಪೊಲೀಸರು ಖಚಿತಪಡಿಸಿದ್ದರು.

ಅದಾದ ನಂತರ ಆರಂಭದಲ್ಲಿ ವಿಕ್ರಂ ಗೌಡನ ಮನೆಯವರು ಆತನ ಮೃತದೇಹವನ್ನು ಸ್ವೀಕರಿಸಲು ಹಿಂದೇಟು ಹಾಕಿದರು. ಏಕೆಂದರೆ ಆತ ನಕ್ಸಲ್ ಮುಖಂಡನಾಗಿದ್ದ ಕಾರಣ ಮತ್ತು ತಾವು ಮೃತದೇಹವನ್ನು ಸ್ವೀಕರಿಸಿ ಅಂತ್ಯ ಸಂಸ್ಕಾರ ಮಾಡಿದರೆ ಕಾನೂನಿನ ಕುಣಿಕೆ ತಮ್ಮನ್ನು ಹಿಂಬಾಲಿಸಬಹುದು ಎನ್ನುವ ಆತಂಕ ಇದ್ದಿರಲಿಕ್ಕೂ ಸಾಕು. ಕೊನೆಗೆ ಪೊಲೀಸರ ಮನವೊಲಿಕೆಯ ಬಳಿಕ ಮನೆಯವರು ಮೃತದೇಹವನ್ನು ಪಡೆದಿದ್ದರು. ತಂದೆ, ತಾಯಿ ತೀರಿಕೊಂಡಿರುವುದರಿಂದ ವಿಕ್ರಂ ಗೌಡನಿಗೆ ಅವನ ಕಡೆಯವರು ಎಂದು ಇರುವುದು ಸಹೋದರಿ ಹಾಗೂ ಸಹೋದರ ಮಾತ್ರ. ಅಂತ್ಯ ಸಂಸ್ಕಾರದ ವೇಳೆಯಲ್ಲಿ ಸಮೀಪದ ಬಂಧುಗಳು, ಪೊಲೀಸರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಹೆಬ್ರಿ ತಾಲ್ಲೂಕಿನ ಸೋಮೇಶ್ವರ ನಾಡ್ಪಾಲು ಗ್ರಾಮದ ಕೂಡ್ಲು ನಿವಾಸಿ ವಿಕ್ರಂ ಗೌಡ ಎರಡು ದಶಕಗಳಿಗಿಂತಲೂ ಹಲವು ವರ್ಷಗಳಿಂದ ನಕ್ಸಲ ತಂಡದಲ್ಲಿದ್ದ. ಹಲವು ಪ್ರಕರಣಗಳಲ್ಲಿ ಅವನ ಹೆಸರಿತ್ತು. ಸೋಮವಾರ ರಾತ್ರಿ ಸುಮಾರು ನಾಲ್ಕರಿಂದ ಆರು ಮಂದಿ ನಕ್ಸಲರ ತಂಡ ಪೀತಬೈಲಿನ ಮನೆಯೊಂದರ ಸಮೀಪ ಬಂದಿತ್ತು. ಈ ವೇಳೆ ಅವರು ಹಾಗೂ ಎಎನ್ ಎಫ್ ತಂಡದ ನಡುವೆ ಗುಂಡಿನ ಚಕಮಕಿಯಲ್ಲಿ ವಿಕ್ರಂ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search