• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಟ್ಟೂರಿನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಅಂತ್ಯಸಂಸ್ಕಾರ

Tulunadu News Posted On November 20, 2024
0


0
Shares
  • Share On Facebook
  • Tweet It

ನಕ್ಸಲ್ ನಾಯಕ ವಿಕ್ರಂ ಗೌಡನ ಅಂತಿಮ ವಿಧಿವಿಧಾನ ಮತ್ತು ಅಂತ್ಯಸಂಸ್ಕಾರ ಅವನ ಹುಟ್ಟೂರಾದ ಹೆಬ್ರಿ ತಾಲೂಕಿನ ಕೂಡ್ಲೂವಿನಲ್ಲಿ ನೆರವೇರಿತು. ಪೀತಬೈಲ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಸೋಮವಾರ ರಾತ್ರಿ ವಿಕ್ರಂ ಗೌಡ ಹತನಾಗಿದ್ದ. ಸತ್ತಿರುವ ನಕ್ಸಲ್ ವಿಕ್ರಂ ಗೌಡ ಎಂದು ಪೊಲೀಸರು ಖಚಿತಪಡಿಸಿದ್ದರು.

ಅದಾದ ನಂತರ ಆರಂಭದಲ್ಲಿ ವಿಕ್ರಂ ಗೌಡನ ಮನೆಯವರು ಆತನ ಮೃತದೇಹವನ್ನು ಸ್ವೀಕರಿಸಲು ಹಿಂದೇಟು ಹಾಕಿದರು. ಏಕೆಂದರೆ ಆತ ನಕ್ಸಲ್ ಮುಖಂಡನಾಗಿದ್ದ ಕಾರಣ ಮತ್ತು ತಾವು ಮೃತದೇಹವನ್ನು ಸ್ವೀಕರಿಸಿ ಅಂತ್ಯ ಸಂಸ್ಕಾರ ಮಾಡಿದರೆ ಕಾನೂನಿನ ಕುಣಿಕೆ ತಮ್ಮನ್ನು ಹಿಂಬಾಲಿಸಬಹುದು ಎನ್ನುವ ಆತಂಕ ಇದ್ದಿರಲಿಕ್ಕೂ ಸಾಕು. ಕೊನೆಗೆ ಪೊಲೀಸರ ಮನವೊಲಿಕೆಯ ಬಳಿಕ ಮನೆಯವರು ಮೃತದೇಹವನ್ನು ಪಡೆದಿದ್ದರು. ತಂದೆ, ತಾಯಿ ತೀರಿಕೊಂಡಿರುವುದರಿಂದ ವಿಕ್ರಂ ಗೌಡನಿಗೆ ಅವನ ಕಡೆಯವರು ಎಂದು ಇರುವುದು ಸಹೋದರಿ ಹಾಗೂ ಸಹೋದರ ಮಾತ್ರ. ಅಂತ್ಯ ಸಂಸ್ಕಾರದ ವೇಳೆಯಲ್ಲಿ ಸಮೀಪದ ಬಂಧುಗಳು, ಪೊಲೀಸರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಹೆಬ್ರಿ ತಾಲ್ಲೂಕಿನ ಸೋಮೇಶ್ವರ ನಾಡ್ಪಾಲು ಗ್ರಾಮದ ಕೂಡ್ಲು ನಿವಾಸಿ ವಿಕ್ರಂ ಗೌಡ ಎರಡು ದಶಕಗಳಿಗಿಂತಲೂ ಹಲವು ವರ್ಷಗಳಿಂದ ನಕ್ಸಲ ತಂಡದಲ್ಲಿದ್ದ. ಹಲವು ಪ್ರಕರಣಗಳಲ್ಲಿ ಅವನ ಹೆಸರಿತ್ತು. ಸೋಮವಾರ ರಾತ್ರಿ ಸುಮಾರು ನಾಲ್ಕರಿಂದ ಆರು ಮಂದಿ ನಕ್ಸಲರ ತಂಡ ಪೀತಬೈಲಿನ ಮನೆಯೊಂದರ ಸಮೀಪ ಬಂದಿತ್ತು. ಈ ವೇಳೆ ಅವರು ಹಾಗೂ ಎಎನ್ ಎಫ್ ತಂಡದ ನಡುವೆ ಗುಂಡಿನ ಚಕಮಕಿಯಲ್ಲಿ ವಿಕ್ರಂ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
  • Popular Posts

    • 1
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 2
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search