• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹುಟ್ಟೂರಿನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಅಂತ್ಯಸಂಸ್ಕಾರ

Tulunadu News Posted On November 20, 2024
0


0
Shares
  • Share On Facebook
  • Tweet It

ನಕ್ಸಲ್ ನಾಯಕ ವಿಕ್ರಂ ಗೌಡನ ಅಂತಿಮ ವಿಧಿವಿಧಾನ ಮತ್ತು ಅಂತ್ಯಸಂಸ್ಕಾರ ಅವನ ಹುಟ್ಟೂರಾದ ಹೆಬ್ರಿ ತಾಲೂಕಿನ ಕೂಡ್ಲೂವಿನಲ್ಲಿ ನೆರವೇರಿತು. ಪೀತಬೈಲ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಸೋಮವಾರ ರಾತ್ರಿ ವಿಕ್ರಂ ಗೌಡ ಹತನಾಗಿದ್ದ. ಸತ್ತಿರುವ ನಕ್ಸಲ್ ವಿಕ್ರಂ ಗೌಡ ಎಂದು ಪೊಲೀಸರು ಖಚಿತಪಡಿಸಿದ್ದರು.

ಅದಾದ ನಂತರ ಆರಂಭದಲ್ಲಿ ವಿಕ್ರಂ ಗೌಡನ ಮನೆಯವರು ಆತನ ಮೃತದೇಹವನ್ನು ಸ್ವೀಕರಿಸಲು ಹಿಂದೇಟು ಹಾಕಿದರು. ಏಕೆಂದರೆ ಆತ ನಕ್ಸಲ್ ಮುಖಂಡನಾಗಿದ್ದ ಕಾರಣ ಮತ್ತು ತಾವು ಮೃತದೇಹವನ್ನು ಸ್ವೀಕರಿಸಿ ಅಂತ್ಯ ಸಂಸ್ಕಾರ ಮಾಡಿದರೆ ಕಾನೂನಿನ ಕುಣಿಕೆ ತಮ್ಮನ್ನು ಹಿಂಬಾಲಿಸಬಹುದು ಎನ್ನುವ ಆತಂಕ ಇದ್ದಿರಲಿಕ್ಕೂ ಸಾಕು. ಕೊನೆಗೆ ಪೊಲೀಸರ ಮನವೊಲಿಕೆಯ ಬಳಿಕ ಮನೆಯವರು ಮೃತದೇಹವನ್ನು ಪಡೆದಿದ್ದರು. ತಂದೆ, ತಾಯಿ ತೀರಿಕೊಂಡಿರುವುದರಿಂದ ವಿಕ್ರಂ ಗೌಡನಿಗೆ ಅವನ ಕಡೆಯವರು ಎಂದು ಇರುವುದು ಸಹೋದರಿ ಹಾಗೂ ಸಹೋದರ ಮಾತ್ರ. ಅಂತ್ಯ ಸಂಸ್ಕಾರದ ವೇಳೆಯಲ್ಲಿ ಸಮೀಪದ ಬಂಧುಗಳು, ಪೊಲೀಸರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಹೆಬ್ರಿ ತಾಲ್ಲೂಕಿನ ಸೋಮೇಶ್ವರ ನಾಡ್ಪಾಲು ಗ್ರಾಮದ ಕೂಡ್ಲು ನಿವಾಸಿ ವಿಕ್ರಂ ಗೌಡ ಎರಡು ದಶಕಗಳಿಗಿಂತಲೂ ಹಲವು ವರ್ಷಗಳಿಂದ ನಕ್ಸಲ ತಂಡದಲ್ಲಿದ್ದ. ಹಲವು ಪ್ರಕರಣಗಳಲ್ಲಿ ಅವನ ಹೆಸರಿತ್ತು. ಸೋಮವಾರ ರಾತ್ರಿ ಸುಮಾರು ನಾಲ್ಕರಿಂದ ಆರು ಮಂದಿ ನಕ್ಸಲರ ತಂಡ ಪೀತಬೈಲಿನ ಮನೆಯೊಂದರ ಸಮೀಪ ಬಂದಿತ್ತು. ಈ ವೇಳೆ ಅವರು ಹಾಗೂ ಎಎನ್ ಎಫ್ ತಂಡದ ನಡುವೆ ಗುಂಡಿನ ಚಕಮಕಿಯಲ್ಲಿ ವಿಕ್ರಂ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search