• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೂದಲೆಳೆ ಎಂದವರು ಈಗ 15 ಸಾವಿರ ಅಂತರದ ಗೆಲುವು ಎನ್ನುತ್ತಿರುವುದೇಕೆ?

Tulunadu News Posted On November 20, 2024
0


0
Shares
  • Share On Facebook
  • Tweet It

ರಾಜ್ಯದಲ್ಲಿ ಮೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಅತೀ ಹೆಚ್ಚು ಕುತೂಹಲ ಎಲ್ಲಾ ಕಡೆ ಕಾಣುತ್ತಿರುವುದು ಚೆನ್ನಪಟ್ಟಣದ ಬಗ್ಗೆ. ಸಂಡೂರು ಮತ್ತು ಶಿಗ್ಗಾವಿಯಲ್ಲಿ ಉಪಚುನಾವಣೆ ಆಗಿದೆಯೇ ಇಲ್ವೋ ಎನ್ನುವ ಮಟ್ಟಿಗೆ ಚನ್ನಪಟ್ಟಣ ಇಡೀ ರಾಜ್ಯವನ್ನು ಆವರಿಸಿಕೊಂಡು ಬಿಟ್ಟಿದೆ. ಇದೇ ನವೆಂಬರ್ 23 ರಂದು ಫಲಿತಾಂಶ ಹೊರಬೀಳಲಿದ್ದು, ರಾಜ್ಯ ರಾಜಕೀಯದಲ್ಲಿ ಸೋಲು, ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಮತದಾನದ ದಿನ ಒಂದಿಷ್ಟು ನೀರಸ ಹೇಳಿಕೆ ನೀಡುತ್ತಿದ್ದ ಸಿ.ಪಿ.ಯೋಗೇಶ್ವರ್ ಈಗ ಸಡನ್ ಫಾರ್ಮಿಗೆ ಬಂದಂತೆ ಕಾಣುತ್ತಿದ್ದಾರೆ. ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್ ಮುಂದೆ ತಾವೇ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿಪಿವೈ ಪ್ರಕಾರ ಅವರು ಕನಿಷ್ಟ 30 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ.

ಯೋಗೇಶ್ವರ್ ಅವರು ಭಾಜಪಾ ಶಾಸಕ ಎಸ್ ಟಿ. ಸೋಮಶೇಖರ್ ಜೊತೆ ತೆರಳಿ ಸಿಎಂ ಹಾಗೂ ಡಿಸಿಎಂ ಜೊತೆ ಕುಳಿತು ಹೋಬಳಿವಾರು ಲೆಕ್ಕ ಹೇಳಿದ್ದಾರೆ. ಯೋಗೇಶ್ವರ್ ಅಂಕಿ ಅಂಶಗಳ ಪ್ರಕಾರ ಏನಿಲ್ಲ ಎಂದರೂ ಹದಿನೈದು ಸಾವಿರ ಅಂತರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ. ಆದರೆ ಇದು ವಾಸ್ತವದಲ್ಲಿ ನಿಜವಾಗುತ್ತಾ ಎನ್ನುವುದು ಈಗ ಇರುವ ಪ್ರಶ್ನೆ.

ಒಂದು ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ “ಕರಿಯ” ಹೇಳಿಕೆ ನೀಡದಿದ್ದರೆ ವಿಷಯವೇ ಬೇರೆ ಇರುತ್ತಿತ್ತು. ಆದರೆ ಆ ಹೇಳಿಕೆ ಒಕ್ಕಲಿಗ ಸಮುದಾಯವನ್ನು ಬೇಸರಕ್ಕೆ ಈಡು ಮಾಡಿದ್ದು, ಅದು ಎಷ್ಟರಮಟ್ಟಿಗೆ ಯೋಗೇಶ್ವರ್ ವಿರುದ್ಧ ಅಲೆಯಾಗಿ ಪರಿವರ್ತನೆಗೊಳ್ಳುತ್ತದೆ ಎನ್ನುವುದು ಈಗ ಇರುವ ವಿಷಯ. ಒಂದು ವೇಳೆ ಒಕ್ಕಲಿಗ ಸಮುದಾಯದ ಜನರು ಆ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಂಡು ಜಾತ್ಯತೀತ ಜನತಾದಳದ ಬೆನ್ನಿಗೆ ನಿಂತರೆ ಆಗ ನಿಜವಾದ ಫೈಟ್ ನಡೆದಿದೆ ಎಂದೇ ಲೆಕ್ಕ. ಹಾಗೆ ಆಗಿರುತ್ತಾ? ಯೋಗೇಶ್ವರ್ ಆರನೇ ಬಾರಿ ವಿಧಾನಸಭೆ ಪ್ರವೇಶಿಸುತ್ತಾರಾ? ನಿಖಿಲ್ ಚುನಾವಣಾ ರಾಜಕಾರಣದಲ್ಲಿ ಚೊಚ್ಚಲ ಗೆಲುವು ದಾಖಲಿಸುತ್ತಾರಾ? 23 ಕ್ಕೆ ಉತ್ತರ ಸಿಗಲಿದೆ.

0
Shares
  • Share On Facebook
  • Tweet It




Trending Now
ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
Tulunadu News August 20, 2025
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
Tulunadu News August 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
  • Popular Posts

    • 1
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 2
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • 3
      ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • 4
      ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!

  • Privacy Policy
  • Contact
© Tulunadu Infomedia.

Press enter/return to begin your search