• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೂದಲೆಳೆ ಎಂದವರು ಈಗ 15 ಸಾವಿರ ಅಂತರದ ಗೆಲುವು ಎನ್ನುತ್ತಿರುವುದೇಕೆ?

Tulunadu News Posted On November 20, 2024
0


0
Shares
  • Share On Facebook
  • Tweet It

ರಾಜ್ಯದಲ್ಲಿ ಮೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಅತೀ ಹೆಚ್ಚು ಕುತೂಹಲ ಎಲ್ಲಾ ಕಡೆ ಕಾಣುತ್ತಿರುವುದು ಚೆನ್ನಪಟ್ಟಣದ ಬಗ್ಗೆ. ಸಂಡೂರು ಮತ್ತು ಶಿಗ್ಗಾವಿಯಲ್ಲಿ ಉಪಚುನಾವಣೆ ಆಗಿದೆಯೇ ಇಲ್ವೋ ಎನ್ನುವ ಮಟ್ಟಿಗೆ ಚನ್ನಪಟ್ಟಣ ಇಡೀ ರಾಜ್ಯವನ್ನು ಆವರಿಸಿಕೊಂಡು ಬಿಟ್ಟಿದೆ. ಇದೇ ನವೆಂಬರ್ 23 ರಂದು ಫಲಿತಾಂಶ ಹೊರಬೀಳಲಿದ್ದು, ರಾಜ್ಯ ರಾಜಕೀಯದಲ್ಲಿ ಸೋಲು, ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಮತದಾನದ ದಿನ ಒಂದಿಷ್ಟು ನೀರಸ ಹೇಳಿಕೆ ನೀಡುತ್ತಿದ್ದ ಸಿ.ಪಿ.ಯೋಗೇಶ್ವರ್ ಈಗ ಸಡನ್ ಫಾರ್ಮಿಗೆ ಬಂದಂತೆ ಕಾಣುತ್ತಿದ್ದಾರೆ. ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್ ಮುಂದೆ ತಾವೇ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿಪಿವೈ ಪ್ರಕಾರ ಅವರು ಕನಿಷ್ಟ 30 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ.

ಯೋಗೇಶ್ವರ್ ಅವರು ಭಾಜಪಾ ಶಾಸಕ ಎಸ್ ಟಿ. ಸೋಮಶೇಖರ್ ಜೊತೆ ತೆರಳಿ ಸಿಎಂ ಹಾಗೂ ಡಿಸಿಎಂ ಜೊತೆ ಕುಳಿತು ಹೋಬಳಿವಾರು ಲೆಕ್ಕ ಹೇಳಿದ್ದಾರೆ. ಯೋಗೇಶ್ವರ್ ಅಂಕಿ ಅಂಶಗಳ ಪ್ರಕಾರ ಏನಿಲ್ಲ ಎಂದರೂ ಹದಿನೈದು ಸಾವಿರ ಅಂತರದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ. ಆದರೆ ಇದು ವಾಸ್ತವದಲ್ಲಿ ನಿಜವಾಗುತ್ತಾ ಎನ್ನುವುದು ಈಗ ಇರುವ ಪ್ರಶ್ನೆ.

ಒಂದು ವೇಳೆ ಸಚಿವ ಜಮೀರ್ ಅಹ್ಮದ್ ಖಾನ್ “ಕರಿಯ” ಹೇಳಿಕೆ ನೀಡದಿದ್ದರೆ ವಿಷಯವೇ ಬೇರೆ ಇರುತ್ತಿತ್ತು. ಆದರೆ ಆ ಹೇಳಿಕೆ ಒಕ್ಕಲಿಗ ಸಮುದಾಯವನ್ನು ಬೇಸರಕ್ಕೆ ಈಡು ಮಾಡಿದ್ದು, ಅದು ಎಷ್ಟರಮಟ್ಟಿಗೆ ಯೋಗೇಶ್ವರ್ ವಿರುದ್ಧ ಅಲೆಯಾಗಿ ಪರಿವರ್ತನೆಗೊಳ್ಳುತ್ತದೆ ಎನ್ನುವುದು ಈಗ ಇರುವ ವಿಷಯ. ಒಂದು ವೇಳೆ ಒಕ್ಕಲಿಗ ಸಮುದಾಯದ ಜನರು ಆ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಂಡು ಜಾತ್ಯತೀತ ಜನತಾದಳದ ಬೆನ್ನಿಗೆ ನಿಂತರೆ ಆಗ ನಿಜವಾದ ಫೈಟ್ ನಡೆದಿದೆ ಎಂದೇ ಲೆಕ್ಕ. ಹಾಗೆ ಆಗಿರುತ್ತಾ? ಯೋಗೇಶ್ವರ್ ಆರನೇ ಬಾರಿ ವಿಧಾನಸಭೆ ಪ್ರವೇಶಿಸುತ್ತಾರಾ? ನಿಖಿಲ್ ಚುನಾವಣಾ ರಾಜಕಾರಣದಲ್ಲಿ ಚೊಚ್ಚಲ ಗೆಲುವು ದಾಖಲಿಸುತ್ತಾರಾ? 23 ಕ್ಕೆ ಉತ್ತರ ಸಿಗಲಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search