• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಾಯಿಯಲ್ಲಿ ನವಜಾತ ಶಿಶು ಕಚ್ಚಿ ಓಡಿದ ನಾಯಿ!

Tulunadu News Posted On November 20, 2024


  • Share On Facebook
  • Tweet It

ಪಶ್ಚಿಮ ಬಂಗಾಲದ ಸೋನಾಮುಖಿಯಲ್ಲಿ ನಡೆದ ಘಟನೆ ನಿಜಕ್ಕೂ ಹೃದಯ ವಿದ್ರಾವಕವಾಗಿದೆ. ಭಾಜಪಾ ಮುಖಂಡ ಅಮಿತ್ ಮಾಳವೀಯ ಅವರು ಫೋಟೋ ಹಾಕಿ ನೀಡಿರುವ ಮಾಹಿತಿ ನಿಜಕ್ಕೂ ತುಂಬಾ ನೋವು ತರುವಂತದ್ದು.  “ಉತ್ತಮ ವೈದ್ಯಕೀಯ ಸೌಲಭ್ಯ ಇದೆ ಎಂದು ಎದೆಯುಬ್ಬಿಸಿ ಹೇಳಿಕೊಂಡು ಬರುತ್ತಿರುವ ಮಮತಾ ಬ್ಯಾನರ್ಜಿಯವರೇ, ನಿಮ್ಮ ರಾಜ್ಯದಲ್ಲಿ ಗರ್ಭಿಣಿ ಆಸ್ಪತ್ರೆಯ ಶೌಚಾಲಯದಲ್ಲಿ ಹೆರಿಗೆ ಆಗುವ ಪರಿಸ್ಥಿತಿ ಬಂದಿದೆ. ಆಕೆಗೆ ಅಲ್ಲಿ ಯಾವುದೇ ಚಿಕಿತ್ಸೆ ನೀಡಲು ವೈದ್ಯರು, ಸಿಬ್ಬಂದಿಗಳು ಇರದೇ ಆಕೆ ಒದ್ದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ದುರಾದೃಷ್ಟವಶಾತ್ ತಾಯಿಯಿಂದ ಮಗು ಭೂಮಿಗೆ ಬರುವಾಗ ಅಲ್ಲಿ ಬೀದಿಬದಿ ನಾಯಿಯೊಂದು ಅಡ್ಡಾಡುತ್ತಿದ್ದು, ಅದು ಮಗುವನ್ನು ಬಾಯಿಯಲ್ಲಿ ಕಚ್ಚಿ ಓಡಿಹೋಗಿದೆ. ಇದು ನಿಜಕ್ಕೂ ಚಿಂತಾಜನಕವಾಗಿರುವ ಘಟನೆ” ಎಂದು ಅವರು ಬರೆದುಕೊಂಡಿದ್ದಾರೆ.

ನವೆಂಬರ್ 18 ರಂದು ಈ ಘಟನೆ ನಡೆದಿದೆ. ಆರು ತಿಂಗಳ ಅವಧಿಪೂರ್ವ ಹೆರಿಗೆ ಆಗಿದ್ದು, ಗರ್ಭಿಣಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದರು. ಅವರಿಗೆ ಮೂತ್ರ ತರಲು ವೈದ್ಯರು ಸೂಚಿಸಿದಾಗ ಆಕೆ ಶೌಚಾಲಯಕ್ಕೆ ಹೋಗಿದ್ದಳು. ಆಕೆಯೊಂದಿಗೆ ಸಂಬಂಧಿಕ ಮಹಿಳೆಯೊಬ್ಬಳು ಇದ್ದಳು. ಶೌಚಾಲಯದಲ್ಲಿ ಅಚಾನಕ್ ಆಗಿ ಹೊಟ್ಟೆ ನೋವು ಜಾಸ್ತಿಯಾಗಿ ಅಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ತಕ್ಷಣ ಆಕೆಯ ಜೊತೆಗಿದ್ದ ಮಹಿಳೆ ವೈದ್ಯರನ್ನು ಮತ್ತು ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆಯಲು ಓಡಿದ್ದಾಳೆ. ಆದರೆ ಆಕೆಯ ಮನವಿಗೆ ಯಾರೂ ಕೂಡ ಸೂಕ್ತವಾಗಿ ಸ್ಪಂದಿಸಲಿಲ್ಲ. ಆಕೆ ಮತ್ತೊಮ್ಮೆ ಓಡಿ ಶೌಚಾಲಯಕ್ಕೆ ಬಂದಾಗ ಮಗು ಕಾಣೆಯಾಗಿತ್ತು. ಮಗು ಎಲ್ಲಿ ಎಂದು ಅತ್ತಿತ್ತ ಹುಡುಕಿದಾಗ ನಾಯಿಯೊಂದು ಬಾಯಿಯಲ್ಲಿ ಕಚ್ಚಿ ಓಡುತ್ತಿರುವುದು ಎಲ್ಲರಿಗೂ ಕಂಡುಬಂದಿದೆ. ಇನ್ನು ಅಲ್ಲಿರುವ ಜನರು ಹೇಳುವ ಪ್ರಕಾರ ಆ ನಾಯಿ ಈ ಘಟನೆ ಆದ ನಂತರವೂ ಅಲ್ಲಿಯೇ ಸುತ್ತಾಡುತ್ತಿತ್ತು ಎನ್ನುವ ಮಾಹಿತಿ ತಿಳಿದುಬಂದಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search