• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಯಿಯಲ್ಲಿ ನವಜಾತ ಶಿಶು ಕಚ್ಚಿ ಓಡಿದ ನಾಯಿ!

Tulunadu News Posted On November 20, 2024
0


0
Shares
  • Share On Facebook
  • Tweet It

ಪಶ್ಚಿಮ ಬಂಗಾಲದ ಸೋನಾಮುಖಿಯಲ್ಲಿ ನಡೆದ ಘಟನೆ ನಿಜಕ್ಕೂ ಹೃದಯ ವಿದ್ರಾವಕವಾಗಿದೆ. ಭಾಜಪಾ ಮುಖಂಡ ಅಮಿತ್ ಮಾಳವೀಯ ಅವರು ಫೋಟೋ ಹಾಕಿ ನೀಡಿರುವ ಮಾಹಿತಿ ನಿಜಕ್ಕೂ ತುಂಬಾ ನೋವು ತರುವಂತದ್ದು.  “ಉತ್ತಮ ವೈದ್ಯಕೀಯ ಸೌಲಭ್ಯ ಇದೆ ಎಂದು ಎದೆಯುಬ್ಬಿಸಿ ಹೇಳಿಕೊಂಡು ಬರುತ್ತಿರುವ ಮಮತಾ ಬ್ಯಾನರ್ಜಿಯವರೇ, ನಿಮ್ಮ ರಾಜ್ಯದಲ್ಲಿ ಗರ್ಭಿಣಿ ಆಸ್ಪತ್ರೆಯ ಶೌಚಾಲಯದಲ್ಲಿ ಹೆರಿಗೆ ಆಗುವ ಪರಿಸ್ಥಿತಿ ಬಂದಿದೆ. ಆಕೆಗೆ ಅಲ್ಲಿ ಯಾವುದೇ ಚಿಕಿತ್ಸೆ ನೀಡಲು ವೈದ್ಯರು, ಸಿಬ್ಬಂದಿಗಳು ಇರದೇ ಆಕೆ ಒದ್ದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ದುರಾದೃಷ್ಟವಶಾತ್ ತಾಯಿಯಿಂದ ಮಗು ಭೂಮಿಗೆ ಬರುವಾಗ ಅಲ್ಲಿ ಬೀದಿಬದಿ ನಾಯಿಯೊಂದು ಅಡ್ಡಾಡುತ್ತಿದ್ದು, ಅದು ಮಗುವನ್ನು ಬಾಯಿಯಲ್ಲಿ ಕಚ್ಚಿ ಓಡಿಹೋಗಿದೆ. ಇದು ನಿಜಕ್ಕೂ ಚಿಂತಾಜನಕವಾಗಿರುವ ಘಟನೆ” ಎಂದು ಅವರು ಬರೆದುಕೊಂಡಿದ್ದಾರೆ.

ನವೆಂಬರ್ 18 ರಂದು ಈ ಘಟನೆ ನಡೆದಿದೆ. ಆರು ತಿಂಗಳ ಅವಧಿಪೂರ್ವ ಹೆರಿಗೆ ಆಗಿದ್ದು, ಗರ್ಭಿಣಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದರು. ಅವರಿಗೆ ಮೂತ್ರ ತರಲು ವೈದ್ಯರು ಸೂಚಿಸಿದಾಗ ಆಕೆ ಶೌಚಾಲಯಕ್ಕೆ ಹೋಗಿದ್ದಳು. ಆಕೆಯೊಂದಿಗೆ ಸಂಬಂಧಿಕ ಮಹಿಳೆಯೊಬ್ಬಳು ಇದ್ದಳು. ಶೌಚಾಲಯದಲ್ಲಿ ಅಚಾನಕ್ ಆಗಿ ಹೊಟ್ಟೆ ನೋವು ಜಾಸ್ತಿಯಾಗಿ ಅಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ತಕ್ಷಣ ಆಕೆಯ ಜೊತೆಗಿದ್ದ ಮಹಿಳೆ ವೈದ್ಯರನ್ನು ಮತ್ತು ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆಯಲು ಓಡಿದ್ದಾಳೆ. ಆದರೆ ಆಕೆಯ ಮನವಿಗೆ ಯಾರೂ ಕೂಡ ಸೂಕ್ತವಾಗಿ ಸ್ಪಂದಿಸಲಿಲ್ಲ. ಆಕೆ ಮತ್ತೊಮ್ಮೆ ಓಡಿ ಶೌಚಾಲಯಕ್ಕೆ ಬಂದಾಗ ಮಗು ಕಾಣೆಯಾಗಿತ್ತು. ಮಗು ಎಲ್ಲಿ ಎಂದು ಅತ್ತಿತ್ತ ಹುಡುಕಿದಾಗ ನಾಯಿಯೊಂದು ಬಾಯಿಯಲ್ಲಿ ಕಚ್ಚಿ ಓಡುತ್ತಿರುವುದು ಎಲ್ಲರಿಗೂ ಕಂಡುಬಂದಿದೆ. ಇನ್ನು ಅಲ್ಲಿರುವ ಜನರು ಹೇಳುವ ಪ್ರಕಾರ ಆ ನಾಯಿ ಈ ಘಟನೆ ಆದ ನಂತರವೂ ಅಲ್ಲಿಯೇ ಸುತ್ತಾಡುತ್ತಿತ್ತು ಎನ್ನುವ ಮಾಹಿತಿ ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search