• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಯಿಯಲ್ಲಿ ನವಜಾತ ಶಿಶು ಕಚ್ಚಿ ಓಡಿದ ನಾಯಿ!

Tulunadu News Posted On November 20, 2024
0


0
Shares
  • Share On Facebook
  • Tweet It

ಪಶ್ಚಿಮ ಬಂಗಾಲದ ಸೋನಾಮುಖಿಯಲ್ಲಿ ನಡೆದ ಘಟನೆ ನಿಜಕ್ಕೂ ಹೃದಯ ವಿದ್ರಾವಕವಾಗಿದೆ. ಭಾಜಪಾ ಮುಖಂಡ ಅಮಿತ್ ಮಾಳವೀಯ ಅವರು ಫೋಟೋ ಹಾಕಿ ನೀಡಿರುವ ಮಾಹಿತಿ ನಿಜಕ್ಕೂ ತುಂಬಾ ನೋವು ತರುವಂತದ್ದು.  “ಉತ್ತಮ ವೈದ್ಯಕೀಯ ಸೌಲಭ್ಯ ಇದೆ ಎಂದು ಎದೆಯುಬ್ಬಿಸಿ ಹೇಳಿಕೊಂಡು ಬರುತ್ತಿರುವ ಮಮತಾ ಬ್ಯಾನರ್ಜಿಯವರೇ, ನಿಮ್ಮ ರಾಜ್ಯದಲ್ಲಿ ಗರ್ಭಿಣಿ ಆಸ್ಪತ್ರೆಯ ಶೌಚಾಲಯದಲ್ಲಿ ಹೆರಿಗೆ ಆಗುವ ಪರಿಸ್ಥಿತಿ ಬಂದಿದೆ. ಆಕೆಗೆ ಅಲ್ಲಿ ಯಾವುದೇ ಚಿಕಿತ್ಸೆ ನೀಡಲು ವೈದ್ಯರು, ಸಿಬ್ಬಂದಿಗಳು ಇರದೇ ಆಕೆ ಒದ್ದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ದುರಾದೃಷ್ಟವಶಾತ್ ತಾಯಿಯಿಂದ ಮಗು ಭೂಮಿಗೆ ಬರುವಾಗ ಅಲ್ಲಿ ಬೀದಿಬದಿ ನಾಯಿಯೊಂದು ಅಡ್ಡಾಡುತ್ತಿದ್ದು, ಅದು ಮಗುವನ್ನು ಬಾಯಿಯಲ್ಲಿ ಕಚ್ಚಿ ಓಡಿಹೋಗಿದೆ. ಇದು ನಿಜಕ್ಕೂ ಚಿಂತಾಜನಕವಾಗಿರುವ ಘಟನೆ” ಎಂದು ಅವರು ಬರೆದುಕೊಂಡಿದ್ದಾರೆ.

ನವೆಂಬರ್ 18 ರಂದು ಈ ಘಟನೆ ನಡೆದಿದೆ. ಆರು ತಿಂಗಳ ಅವಧಿಪೂರ್ವ ಹೆರಿಗೆ ಆಗಿದ್ದು, ಗರ್ಭಿಣಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದರು. ಅವರಿಗೆ ಮೂತ್ರ ತರಲು ವೈದ್ಯರು ಸೂಚಿಸಿದಾಗ ಆಕೆ ಶೌಚಾಲಯಕ್ಕೆ ಹೋಗಿದ್ದಳು. ಆಕೆಯೊಂದಿಗೆ ಸಂಬಂಧಿಕ ಮಹಿಳೆಯೊಬ್ಬಳು ಇದ್ದಳು. ಶೌಚಾಲಯದಲ್ಲಿ ಅಚಾನಕ್ ಆಗಿ ಹೊಟ್ಟೆ ನೋವು ಜಾಸ್ತಿಯಾಗಿ ಅಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ತಕ್ಷಣ ಆಕೆಯ ಜೊತೆಗಿದ್ದ ಮಹಿಳೆ ವೈದ್ಯರನ್ನು ಮತ್ತು ಆಸ್ಪತ್ರೆಯ ಸಿಬ್ಬಂದಿಗಳನ್ನು ಕರೆಯಲು ಓಡಿದ್ದಾಳೆ. ಆದರೆ ಆಕೆಯ ಮನವಿಗೆ ಯಾರೂ ಕೂಡ ಸೂಕ್ತವಾಗಿ ಸ್ಪಂದಿಸಲಿಲ್ಲ. ಆಕೆ ಮತ್ತೊಮ್ಮೆ ಓಡಿ ಶೌಚಾಲಯಕ್ಕೆ ಬಂದಾಗ ಮಗು ಕಾಣೆಯಾಗಿತ್ತು. ಮಗು ಎಲ್ಲಿ ಎಂದು ಅತ್ತಿತ್ತ ಹುಡುಕಿದಾಗ ನಾಯಿಯೊಂದು ಬಾಯಿಯಲ್ಲಿ ಕಚ್ಚಿ ಓಡುತ್ತಿರುವುದು ಎಲ್ಲರಿಗೂ ಕಂಡುಬಂದಿದೆ. ಇನ್ನು ಅಲ್ಲಿರುವ ಜನರು ಹೇಳುವ ಪ್ರಕಾರ ಆ ನಾಯಿ ಈ ಘಟನೆ ಆದ ನಂತರವೂ ಅಲ್ಲಿಯೇ ಸುತ್ತಾಡುತ್ತಿತ್ತು ಎನ್ನುವ ಮಾಹಿತಿ ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search