• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಾಟ್ಸಾಪ್ ಗ್ರೂಪ್ ನಲ್ಲಿ ಮಾಹಿತಿ ನೋಡಿ ಪತ್ನಿಗೆ ಹೆರಿಗೆ, ಪ್ರಕರಣ ದಾಖಲು!

Tulunadu News Posted On November 22, 2024
0


0
Shares
  • Share On Facebook
  • Tweet It

ಈ ಘಟನೆ ನಡೆದಿರುವುದು ತಮಿಳುನಾಡಿನ ಕುಂಡ್ರತೂರ್ ಎಂಬಲ್ಲಿ. ಸುಕನ್ಯಾ ಮತ್ತು ಮನೋಹರ್ ದಂಪತಿಗಳ ಭಂಡ ಧೈರ್ಯ ಈಗ ಅವರ ವಿರುದ್ಧ ಪ್ರಕರಣ ದಾಖಲಾಗುವಂತೆ ಮಾಡಿದೆ. ಇವರು ” ಹೋಂ ಡೆಲಿವರಿ ಎಕ್ಸರೀಯನ್ಸ್ ” ಎಂಬ ವಾಟ್ಸಾಪ್ ಗ್ರೂಪಿನ ಸದಸ್ಯರಾಗಿದ್ದರು. ಅದು ಹೆರಿಗೆಯ ಸಂಬಂಧಿತ ಮಾಹಿತಿ ನೀಡುವ ಗ್ರೂಪ್ ಆಗಿತ್ತು. ಅದರಲ್ಲಿ ಬಂದದ್ದನ್ನು ಇವರು ಪಾಲಿಸುತ್ತಿದ್ದರು. ಸುಕನ್ಯಾ ಗರ್ಭಿಣಿಯಾದ ನಂತರ ಇವರು ಒಮ್ಮೆಯೂ ವೈದ್ಯರ ಬಳಿ ಹೋಗಿರಲಿಲ್ಲ. ಎಲ್ಲಿಯ ತನಕ ಅಂದರೆ ನವೆಂಬರ್ 17 ರಂದು ಸುಕನ್ಯಾಗೆ ಹೆರಿಗೆ ನೋವು ಕಾಣಿಸಿಕೊಂಡ ಬಳಿಕವೂ ಇವರು ಆಸ್ಪತ್ರೆಗೆ ತೆರಳಲಿಲ್ಲ. ಅದರ ಬದಲು ಈ ಮಾಹಿತಿಯನ್ನು ಗ್ರೂಪಿನಲ್ಲಿ ಹಾಕಿ ಅವರಿಂದ ಮಾಹಿತಿ ಕೇಳಿದ್ದಾರೆ. ಅದರಲ್ಲಿ ಬಂದ ಮಾಹಿತಿಯಂತೆ ಪತ್ನಿಗೆ ಹೆರಿಗೆ ಮಾಡಿಸಿದ್ದಾರೆ. ನಂತರ ತಾಯಿ, ಮಗುವಿನೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ವಾಟ್ಸಾಪ್ ನಲ್ಲಿ ಹಂಚಿಕೊಂಡಿದ್ದಾರೆ. ಇವರ ಫೋಟೋಗಳು ಆರೋಗ್ಯ ಇಲಾಖೆಯ ಕೈ ಸೇರಿದೆ. ಈಗ ಇಡೀ ವಾಟ್ಸಾಪ್ ಗ್ರೂಪ್ ವಿರುದ್ಧ ಪ್ರಕರಣ ದಾಖಲಾಗಿದೆ.

ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎನ್ನುವ ಕಾರಣಕ್ಕೆ ಈ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳುವಂತಿಲ್ಲ. ಹೀಗೆ ವಾಟ್ಸಾಪ್ ನಲ್ಲಿ ಮಾಹಿತಿ ಪಡೆದು ಅತಿರೇಕದ ಹೆಜ್ಜೆ ಇಟ್ಟರೆ ಅದರಿಂದ ಒಂದು ವೇಳೆ ತಾಯಿ, ಮಗುವಿಗೆ ಹೆಚ್ಚು ಕಡಿಮೆ ಆದರೆ ಯಾರು ಕಾರಣ? ಇನ್ನು ಎಲ್ಲರೂ ಹೀಗೆ ಮಾಡಿ ಹೆರಿಗೆ ಮಾಡಿದರೆ ಉತ್ತಮ ಎಂದು ಅಂದುಕೊಂಡು ಹಾಗೆ ಮಾಡಲು ಹೋದರೆ ತಾಯಿ, ಮಗುವಿನ ಜೀವಕ್ಕೆ ಅಪಾಯ ಆದರೆ ಕಾರಣ ಯಾರು?

ಆದ್ದರಿಂದ ವಾಟ್ಸಾಪ್ ವಿಶ್ವವಿದ್ಯಾನಿಲಯದಿಂದ ಬಂದಿರುವ ಎಲ್ಲಾ ಮಾಹಿತಿಗಳು ಯಾವ ಕಾಲಕ್ಕೂ ನಿಜವೇ ಆಗಿರುವುದಿಲ್ಲ. ಈಗ ಈ ವಾಟ್ಸಾಪ್ ಗ್ರೂಪ್ ನಲ್ಲಿ ಯಾರಾದರೂ ಪರಿಣಿತರು ಇದ್ದು ಅವರು ಸೂಕ್ತ ಮಾಹಿತಿಯನ್ನು ಕೊಟ್ಟಿರಬಹುದು. ಆದರೆ ಮುಂದಿನ ದಿನಗಳಲ್ಲಿ ಯಾರೋ ಅರ್ಧಂಬರ್ದ ತಿಳಿದವರು ಏನಾದರೂ ಸಾಹಸ ಮಾಡಲು ಹೋಗಿ ಗಂಡಾಂತರ ತಂದುಕೊಂಡರೆ. ಒಟ್ಟಿನಲ್ಲಿ ಆಧುನಿಕ ತಂತ್ರಜ್ಞಾನಗಳು ಹೇಗೆ ಜೀವ ಉಳಿಸಬಲ್ಲದು ಮತ್ತು ಅರೆಬೆಂದ ಮಾಹಿತಿಗಳು ಜೀವ ತೆಗೆಯಬಲ್ಲದು ಎನ್ನುವುದನ್ನು ನಾವು ಅನುಭವಗಳಿಂದ ಪಾಠ ಕಲಿತಿದ್ದೇವೆ. ಆದರೂ ಕೆಲವರಿಗೆ ಬುದ್ಧಿ ಬರುವುದಿಲ್ಲ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search