• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಾಟ್ಸಾಪ್ ಗ್ರೂಪ್ ನಲ್ಲಿ ಮಾಹಿತಿ ನೋಡಿ ಪತ್ನಿಗೆ ಹೆರಿಗೆ, ಪ್ರಕರಣ ದಾಖಲು!

Tulunadu News Posted On November 22, 2024
0


0
Shares
  • Share On Facebook
  • Tweet It

ಈ ಘಟನೆ ನಡೆದಿರುವುದು ತಮಿಳುನಾಡಿನ ಕುಂಡ್ರತೂರ್ ಎಂಬಲ್ಲಿ. ಸುಕನ್ಯಾ ಮತ್ತು ಮನೋಹರ್ ದಂಪತಿಗಳ ಭಂಡ ಧೈರ್ಯ ಈಗ ಅವರ ವಿರುದ್ಧ ಪ್ರಕರಣ ದಾಖಲಾಗುವಂತೆ ಮಾಡಿದೆ. ಇವರು ” ಹೋಂ ಡೆಲಿವರಿ ಎಕ್ಸರೀಯನ್ಸ್ ” ಎಂಬ ವಾಟ್ಸಾಪ್ ಗ್ರೂಪಿನ ಸದಸ್ಯರಾಗಿದ್ದರು. ಅದು ಹೆರಿಗೆಯ ಸಂಬಂಧಿತ ಮಾಹಿತಿ ನೀಡುವ ಗ್ರೂಪ್ ಆಗಿತ್ತು. ಅದರಲ್ಲಿ ಬಂದದ್ದನ್ನು ಇವರು ಪಾಲಿಸುತ್ತಿದ್ದರು. ಸುಕನ್ಯಾ ಗರ್ಭಿಣಿಯಾದ ನಂತರ ಇವರು ಒಮ್ಮೆಯೂ ವೈದ್ಯರ ಬಳಿ ಹೋಗಿರಲಿಲ್ಲ. ಎಲ್ಲಿಯ ತನಕ ಅಂದರೆ ನವೆಂಬರ್ 17 ರಂದು ಸುಕನ್ಯಾಗೆ ಹೆರಿಗೆ ನೋವು ಕಾಣಿಸಿಕೊಂಡ ಬಳಿಕವೂ ಇವರು ಆಸ್ಪತ್ರೆಗೆ ತೆರಳಲಿಲ್ಲ. ಅದರ ಬದಲು ಈ ಮಾಹಿತಿಯನ್ನು ಗ್ರೂಪಿನಲ್ಲಿ ಹಾಕಿ ಅವರಿಂದ ಮಾಹಿತಿ ಕೇಳಿದ್ದಾರೆ. ಅದರಲ್ಲಿ ಬಂದ ಮಾಹಿತಿಯಂತೆ ಪತ್ನಿಗೆ ಹೆರಿಗೆ ಮಾಡಿಸಿದ್ದಾರೆ. ನಂತರ ತಾಯಿ, ಮಗುವಿನೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ವಾಟ್ಸಾಪ್ ನಲ್ಲಿ ಹಂಚಿಕೊಂಡಿದ್ದಾರೆ. ಇವರ ಫೋಟೋಗಳು ಆರೋಗ್ಯ ಇಲಾಖೆಯ ಕೈ ಸೇರಿದೆ. ಈಗ ಇಡೀ ವಾಟ್ಸಾಪ್ ಗ್ರೂಪ್ ವಿರುದ್ಧ ಪ್ರಕರಣ ದಾಖಲಾಗಿದೆ.

ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎನ್ನುವ ಕಾರಣಕ್ಕೆ ಈ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳುವಂತಿಲ್ಲ. ಹೀಗೆ ವಾಟ್ಸಾಪ್ ನಲ್ಲಿ ಮಾಹಿತಿ ಪಡೆದು ಅತಿರೇಕದ ಹೆಜ್ಜೆ ಇಟ್ಟರೆ ಅದರಿಂದ ಒಂದು ವೇಳೆ ತಾಯಿ, ಮಗುವಿಗೆ ಹೆಚ್ಚು ಕಡಿಮೆ ಆದರೆ ಯಾರು ಕಾರಣ? ಇನ್ನು ಎಲ್ಲರೂ ಹೀಗೆ ಮಾಡಿ ಹೆರಿಗೆ ಮಾಡಿದರೆ ಉತ್ತಮ ಎಂದು ಅಂದುಕೊಂಡು ಹಾಗೆ ಮಾಡಲು ಹೋದರೆ ತಾಯಿ, ಮಗುವಿನ ಜೀವಕ್ಕೆ ಅಪಾಯ ಆದರೆ ಕಾರಣ ಯಾರು?

ಆದ್ದರಿಂದ ವಾಟ್ಸಾಪ್ ವಿಶ್ವವಿದ್ಯಾನಿಲಯದಿಂದ ಬಂದಿರುವ ಎಲ್ಲಾ ಮಾಹಿತಿಗಳು ಯಾವ ಕಾಲಕ್ಕೂ ನಿಜವೇ ಆಗಿರುವುದಿಲ್ಲ. ಈಗ ಈ ವಾಟ್ಸಾಪ್ ಗ್ರೂಪ್ ನಲ್ಲಿ ಯಾರಾದರೂ ಪರಿಣಿತರು ಇದ್ದು ಅವರು ಸೂಕ್ತ ಮಾಹಿತಿಯನ್ನು ಕೊಟ್ಟಿರಬಹುದು. ಆದರೆ ಮುಂದಿನ ದಿನಗಳಲ್ಲಿ ಯಾರೋ ಅರ್ಧಂಬರ್ದ ತಿಳಿದವರು ಏನಾದರೂ ಸಾಹಸ ಮಾಡಲು ಹೋಗಿ ಗಂಡಾಂತರ ತಂದುಕೊಂಡರೆ. ಒಟ್ಟಿನಲ್ಲಿ ಆಧುನಿಕ ತಂತ್ರಜ್ಞಾನಗಳು ಹೇಗೆ ಜೀವ ಉಳಿಸಬಲ್ಲದು ಮತ್ತು ಅರೆಬೆಂದ ಮಾಹಿತಿಗಳು ಜೀವ ತೆಗೆಯಬಲ್ಲದು ಎನ್ನುವುದನ್ನು ನಾವು ಅನುಭವಗಳಿಂದ ಪಾಠ ಕಲಿತಿದ್ದೇವೆ. ಆದರೂ ಕೆಲವರಿಗೆ ಬುದ್ಧಿ ಬರುವುದಿಲ್ಲ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search