• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದುಬೈಗೆ ಹೊರಡುವ ಯೋಚನೆ ಇದ್ದರೆ ಈ ನಿಯಮ ಕಡ್ಡಾಯ!

Tulunadu News Posted On November 22, 2024
0


0
Shares
  • Share On Facebook
  • Tweet It

ಭಾರತೀಯರಿಗೆ ದುಬೈ ಯಾವತ್ತೂ ಒಂದು ಆಕರ್ಷಣೆಯಾಗಿಯೇ ಇಂದಿಗೂ ಉಳಿದಿದೆ. ದುಬೈಗೆ ಹೋಗಬೇಕು ಮತ್ತು ಅಲ್ಲಿ ಎಂಜಾಯ್ ಮಾಡಬೇಕು ಎನ್ನುವುದು ಹೆಚ್ಚಿನ ಪ್ರವಾಸಿ ಪ್ರಿಯರ ಹಂಬಲ. ಆದರೆ ಇನ್ನು ಮುಂದೆ ಟೂರಿಸ್ಟ್ ವೀಸಾ ಪಡೆದು ದುಬೈಗೆ ಹೋಗಬಯಸುವ ಪ್ರವಾಸಿಗರಿಗೆ ಹೊಸ ನಿಯಮ ರೂಪಿಸಲಾಗಿದೆ. ಈ ಸಂಬಂಧ ಅಲ್ಲಿನ ವಲಸೆ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ ಪ್ರವಾಸಿಗರು ವೀಸಾಗೆ ಅರ್ಜಿ ಸಲ್ಲಿಸುವ ವೇಳೆ ಹೋಟೇಲ್ ಕಾಯ್ದಿರಿಸಿದ ಬಗೆಗಿನ ಮಾಹಿತಿ ಹಾಗೂ ಮರಳುವ ಟಿಕೆಟಿನ ಪ್ರತಿ ಸಲ್ಲಿಸುವುದು ಕಡ್ಡಾಯ.

ಈ ಹಿಂದೆ ಪಾಕಿಸ್ತಾನ ಮತ್ತು ಕೆಲ ಆಫ್ರಿಕನ್ ದೇಶಗಳ ಪ್ರವಾಸಿಗರಿಗೆ ಮಾತ್ರ ಈ ನಿಯಮ ಜಾರಿಯಲ್ಲಿತ್ತು. ಈಗ ಈ ನಿಯಮವನ್ನು ಎಲ್ಲರಿಗೂ ವಿಸ್ತರಣೆ ಮಾಡಲಾಗುತ್ತಿದೆ. ಅಕ್ರಮವಾಗಿ ದುಬೈಗೆ ವಲಸೆ ಬರುವವರನ್ನು ತಡೆಯಲು ಈ ನಿಯಮ ಜಾರಿಗೆ ತರಲಾಗಿದೆ. ಈ ಹಿಂದೆ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಕೇಳಿದರಷ್ಟೇ ಈ ದಾಖಲೆಗಳನ್ನು ತೋರಿಸಬೇಕಿತ್ತು.

ಆದರೆ ಇದೀಗ ಎರಡು ತಿಂಗಳ ವೀಸಾ ಪಡೆಯುವವರು ಕ್ರೆಡಿಟ್/ ಡೆಬಿಟ್ ಕಾರ್ಡ್ ಗಳು ಕನಿಷ್ಟ 5000 ದಿರಾಂ ಹಾಗೂ 3 ತಿಂಗಳ ವೀಸಾ ಪಡೆಯಬಯಸುವವರು 3000 ದಿರಾಂ ಇರುವುದು ಕಡ್ಡಾಯವಾಗಿದೆ. ಈ ಮೂಲಕ ಅಕ್ರಮ ವಲಸೆಗಾರರನ್ನು ತಡೆಯುವುದು ದುಬೈ ಆಡಳಿತದ ಉದ್ದೇಶವಾಗಿದೆ. ಈ ಹೊಸ ನಿಯಮ ಜಾರಿಗೆ ತಂದು ಎಷ್ಟರಮಟ್ಟಿಗೆ ಅವರು ಯಶಸ್ವಿಯಾಗುತ್ತಾರೋ ಎನ್ನುವುದನ್ನು ಕಾಲವೇ ನಿರ್ಧರಿಸಲಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search