• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದುಬೈಗೆ ಹೊರಡುವ ಯೋಚನೆ ಇದ್ದರೆ ಈ ನಿಯಮ ಕಡ್ಡಾಯ!

Tulunadu News Posted On November 22, 2024
0


0
Shares
  • Share On Facebook
  • Tweet It

ಭಾರತೀಯರಿಗೆ ದುಬೈ ಯಾವತ್ತೂ ಒಂದು ಆಕರ್ಷಣೆಯಾಗಿಯೇ ಇಂದಿಗೂ ಉಳಿದಿದೆ. ದುಬೈಗೆ ಹೋಗಬೇಕು ಮತ್ತು ಅಲ್ಲಿ ಎಂಜಾಯ್ ಮಾಡಬೇಕು ಎನ್ನುವುದು ಹೆಚ್ಚಿನ ಪ್ರವಾಸಿ ಪ್ರಿಯರ ಹಂಬಲ. ಆದರೆ ಇನ್ನು ಮುಂದೆ ಟೂರಿಸ್ಟ್ ವೀಸಾ ಪಡೆದು ದುಬೈಗೆ ಹೋಗಬಯಸುವ ಪ್ರವಾಸಿಗರಿಗೆ ಹೊಸ ನಿಯಮ ರೂಪಿಸಲಾಗಿದೆ. ಈ ಸಂಬಂಧ ಅಲ್ಲಿನ ವಲಸೆ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ ಪ್ರವಾಸಿಗರು ವೀಸಾಗೆ ಅರ್ಜಿ ಸಲ್ಲಿಸುವ ವೇಳೆ ಹೋಟೇಲ್ ಕಾಯ್ದಿರಿಸಿದ ಬಗೆಗಿನ ಮಾಹಿತಿ ಹಾಗೂ ಮರಳುವ ಟಿಕೆಟಿನ ಪ್ರತಿ ಸಲ್ಲಿಸುವುದು ಕಡ್ಡಾಯ.

ಈ ಹಿಂದೆ ಪಾಕಿಸ್ತಾನ ಮತ್ತು ಕೆಲ ಆಫ್ರಿಕನ್ ದೇಶಗಳ ಪ್ರವಾಸಿಗರಿಗೆ ಮಾತ್ರ ಈ ನಿಯಮ ಜಾರಿಯಲ್ಲಿತ್ತು. ಈಗ ಈ ನಿಯಮವನ್ನು ಎಲ್ಲರಿಗೂ ವಿಸ್ತರಣೆ ಮಾಡಲಾಗುತ್ತಿದೆ. ಅಕ್ರಮವಾಗಿ ದುಬೈಗೆ ವಲಸೆ ಬರುವವರನ್ನು ತಡೆಯಲು ಈ ನಿಯಮ ಜಾರಿಗೆ ತರಲಾಗಿದೆ. ಈ ಹಿಂದೆ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಕೇಳಿದರಷ್ಟೇ ಈ ದಾಖಲೆಗಳನ್ನು ತೋರಿಸಬೇಕಿತ್ತು.

ಆದರೆ ಇದೀಗ ಎರಡು ತಿಂಗಳ ವೀಸಾ ಪಡೆಯುವವರು ಕ್ರೆಡಿಟ್/ ಡೆಬಿಟ್ ಕಾರ್ಡ್ ಗಳು ಕನಿಷ್ಟ 5000 ದಿರಾಂ ಹಾಗೂ 3 ತಿಂಗಳ ವೀಸಾ ಪಡೆಯಬಯಸುವವರು 3000 ದಿರಾಂ ಇರುವುದು ಕಡ್ಡಾಯವಾಗಿದೆ. ಈ ಮೂಲಕ ಅಕ್ರಮ ವಲಸೆಗಾರರನ್ನು ತಡೆಯುವುದು ದುಬೈ ಆಡಳಿತದ ಉದ್ದೇಶವಾಗಿದೆ. ಈ ಹೊಸ ನಿಯಮ ಜಾರಿಗೆ ತಂದು ಎಷ್ಟರಮಟ್ಟಿಗೆ ಅವರು ಯಶಸ್ವಿಯಾಗುತ್ತಾರೋ ಎನ್ನುವುದನ್ನು ಕಾಲವೇ ನಿರ್ಧರಿಸಲಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search