• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದುಬೈಗೆ ಹೊರಡುವ ಯೋಚನೆ ಇದ್ದರೆ ಈ ನಿಯಮ ಕಡ್ಡಾಯ!

Tulunadu News Posted On November 22, 2024


  • Share On Facebook
  • Tweet It

ಭಾರತೀಯರಿಗೆ ದುಬೈ ಯಾವತ್ತೂ ಒಂದು ಆಕರ್ಷಣೆಯಾಗಿಯೇ ಇಂದಿಗೂ ಉಳಿದಿದೆ. ದುಬೈಗೆ ಹೋಗಬೇಕು ಮತ್ತು ಅಲ್ಲಿ ಎಂಜಾಯ್ ಮಾಡಬೇಕು ಎನ್ನುವುದು ಹೆಚ್ಚಿನ ಪ್ರವಾಸಿ ಪ್ರಿಯರ ಹಂಬಲ. ಆದರೆ ಇನ್ನು ಮುಂದೆ ಟೂರಿಸ್ಟ್ ವೀಸಾ ಪಡೆದು ದುಬೈಗೆ ಹೋಗಬಯಸುವ ಪ್ರವಾಸಿಗರಿಗೆ ಹೊಸ ನಿಯಮ ರೂಪಿಸಲಾಗಿದೆ. ಈ ಸಂಬಂಧ ಅಲ್ಲಿನ ವಲಸೆ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಕಾರ ಪ್ರವಾಸಿಗರು ವೀಸಾಗೆ ಅರ್ಜಿ ಸಲ್ಲಿಸುವ ವೇಳೆ ಹೋಟೇಲ್ ಕಾಯ್ದಿರಿಸಿದ ಬಗೆಗಿನ ಮಾಹಿತಿ ಹಾಗೂ ಮರಳುವ ಟಿಕೆಟಿನ ಪ್ರತಿ ಸಲ್ಲಿಸುವುದು ಕಡ್ಡಾಯ.

ಈ ಹಿಂದೆ ಪಾಕಿಸ್ತಾನ ಮತ್ತು ಕೆಲ ಆಫ್ರಿಕನ್ ದೇಶಗಳ ಪ್ರವಾಸಿಗರಿಗೆ ಮಾತ್ರ ಈ ನಿಯಮ ಜಾರಿಯಲ್ಲಿತ್ತು. ಈಗ ಈ ನಿಯಮವನ್ನು ಎಲ್ಲರಿಗೂ ವಿಸ್ತರಣೆ ಮಾಡಲಾಗುತ್ತಿದೆ. ಅಕ್ರಮವಾಗಿ ದುಬೈಗೆ ವಲಸೆ ಬರುವವರನ್ನು ತಡೆಯಲು ಈ ನಿಯಮ ಜಾರಿಗೆ ತರಲಾಗಿದೆ. ಈ ಹಿಂದೆ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಕೇಳಿದರಷ್ಟೇ ಈ ದಾಖಲೆಗಳನ್ನು ತೋರಿಸಬೇಕಿತ್ತು.

ಆದರೆ ಇದೀಗ ಎರಡು ತಿಂಗಳ ವೀಸಾ ಪಡೆಯುವವರು ಕ್ರೆಡಿಟ್/ ಡೆಬಿಟ್ ಕಾರ್ಡ್ ಗಳು ಕನಿಷ್ಟ 5000 ದಿರಾಂ ಹಾಗೂ 3 ತಿಂಗಳ ವೀಸಾ ಪಡೆಯಬಯಸುವವರು 3000 ದಿರಾಂ ಇರುವುದು ಕಡ್ಡಾಯವಾಗಿದೆ. ಈ ಮೂಲಕ ಅಕ್ರಮ ವಲಸೆಗಾರರನ್ನು ತಡೆಯುವುದು ದುಬೈ ಆಡಳಿತದ ಉದ್ದೇಶವಾಗಿದೆ. ಈ ಹೊಸ ನಿಯಮ ಜಾರಿಗೆ ತಂದು ಎಷ್ಟರಮಟ್ಟಿಗೆ ಅವರು ಯಶಸ್ವಿಯಾಗುತ್ತಾರೋ ಎನ್ನುವುದನ್ನು ಕಾಲವೇ ನಿರ್ಧರಿಸಲಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search