• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ಆಯ್ಕೆ ಮಾಡಲು ನಮಗೆ ಒಂದೇ ದಿನ ಸಾಕು – ಸಚಿನ್ ಪೈಲೆಟ್

Tulunadu News Posted On November 22, 2024
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎರಡೂ ಮೈತ್ರಿಕೂಟದ ಪಕ್ಷಗಳಿಗೆ ತಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭಾರಿ ನಿರೀಕ್ಷೆ ಇದೆ. ಅದಕ್ಕೆ ಸರಿಯಾಗಿ ಸಮೀಕ್ಷೆಗಳಲ್ಲಿ ಕೆಲವು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ ಎನ್ನುವ ಊಹೆ ಮಾಡಿದ್ದರೆ ಕೆಲವು ಭಾಜಪಾ ನೇತೃತ್ವದ ಮೈತ್ರಿಕೂಟ ಅಧಿಕಾರದಲ್ಲಿ ಮುಂದುವರೆಯಲಿದೆ ಎಂದು ಹೇಳಿದೆ. ಹೀಗಿರುವಾಗ ಒಂದು ವೇಳೆ ಭಾಜಪಾ ಮೈತ್ರಿಕೂಟ ಅಧಿಕಾರಕ್ಕೆ ಮರಳಿದರೆ ಏಕನಾಥ್ ಶಿಂಧೆ ತಾವು ಮುಖ್ಯಮಂತ್ರಿ ರೇಸ್ ನಲ್ಲಿ ಇಲ್ಲ ಎಂದಿದ್ದಾರೆ. ಹಾಗಾದರೆ ಅಲ್ಲಿ ಯಾರು ಸಿಎಂ ಆಗುತ್ತಾರೆ ಎನ್ನುವ ಪ್ರಶ್ನೆಯ ನಡುವೆ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ನಾವು ಒಂದೇ ದಿನದಲ್ಲಿ ಸಿಎಂ ಯಾರೆಂದು ನಿರ್ಧರಿಸುತ್ತೇವೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಸಚಿನ್ ಪೈಲೆಟ್ ಹೇಳಿದ್ದಾರೆ.

ಆದರೆ ಪೈಲೆಟ್ ಹೇಳಿದಷ್ಟು ಈ ಲೆಕ್ಕಾಚಾರಗಳು ಸುಲಭವಾಗಿಲ್ಲ ಎನ್ನುವುದು ನಿಜ. ಕಾಂಗ್ರೆಸ್ ಮೈತ್ರಿಕೂಟದಲ್ಲಿ ಇರುವ ಮೂರು ಪಕ್ಷಗಳಲ್ಲಿ ಹಿರಿಯಣ್ಣ ಅಂದರೆ ಎನ್ ಸಿಪಿ ನಾಯಕ ಶರದ್ ಪವಾರ್. ಅವರು ಯಾರನ್ನು ಸಿಎಂ ಎಂದು ಕರೆಯುತ್ತಾರೆಯೋ ಅವರೇ ಈ ಮೈತ್ರಿಕೂಟದ ಸಿಎಂ ಎನ್ನುವುದು ಅಲಿಖಿತ ನಿಯಮ. ಇನ್ನು ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಕೂಡ ತಕ್ಷಣ ಯಾರನ್ನೋ ಸಿಎಂ ಎಂದು ಒಪ್ಪಿಕೊಳ್ಳುವುದಿಲ್ಲ. ಇನ್ನು ಅದರಲ್ಲಿ ಕಾಂಗ್ರೆಸ್ ಎಷ್ಟು ಶಾಸಕರನ್ನು ಗೆಲ್ಲಿಸಿಕೊಳ್ಳಲಿದೆ ಎನ್ನುವುದು ಕೂಡ ಇಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ.

ಈ ಎಲ್ಲದರ ಮಧ್ಯದಲ್ಲಿ ಒಂದು ವೇಳೆ ಒಂದಿಷ್ಟು ಸ್ಥಾನಗಳು ಯಾವುದೇ ಮೈತ್ರಿಕೂಟಕ್ಕೆ ಬರದೇ ಹೋದರೆ ಆಗ ಪರಸ್ಪರ ಕುದುರೆ ವ್ಯಾಪಾರ, ಕತ್ತೆ ವ್ಯಾಪಾರ ನಡೆಯಲಿದೆ. ಆದ್ದರಿಂದ ಮಹಾರಾಷ್ಟ್ರದ ಮುಖ್ಯಮಂತ್ರಿಯನ್ನು ಮೈತ್ರಿಕೂಟಗಳು ಸರಳ ಬಹುಮತವನ್ನು ಪಡೆದು ಅಧಿಕಾರಕ್ಕೆ ಬಂದಾಗ ಆಯ್ಕೆ ಮಾಡುವುದು ಅಷ್ಟು ಸುಲಭವೂ ಅಲ್ಲ, ಸಾಧ್ಯವೂ ಅಲ್ಲ. ಆದರೆ ರಾಜಕೀಯದಲ್ಲಿ ಮಿಂದು ಎದ್ದಿರುವ ಶರದ್ ಪವಾರ್ ನಂತಹ ಮುತ್ಸದ್ದಿಗಳು ಮನಸ್ಸು ಮಾಡಿದರೆ ಅದು ಕಷ್ಟವೂ ಅಲ್ಲ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search