• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ಆಯ್ಕೆ ಮಾಡಲು ನಮಗೆ ಒಂದೇ ದಿನ ಸಾಕು – ಸಚಿನ್ ಪೈಲೆಟ್

Tulunadu News Posted On November 22, 2024
0


0
Shares
  • Share On Facebook
  • Tweet It

ಮಹಾರಾಷ್ಟ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎರಡೂ ಮೈತ್ರಿಕೂಟದ ಪಕ್ಷಗಳಿಗೆ ತಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭಾರಿ ನಿರೀಕ್ಷೆ ಇದೆ. ಅದಕ್ಕೆ ಸರಿಯಾಗಿ ಸಮೀಕ್ಷೆಗಳಲ್ಲಿ ಕೆಲವು ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ ಎನ್ನುವ ಊಹೆ ಮಾಡಿದ್ದರೆ ಕೆಲವು ಭಾಜಪಾ ನೇತೃತ್ವದ ಮೈತ್ರಿಕೂಟ ಅಧಿಕಾರದಲ್ಲಿ ಮುಂದುವರೆಯಲಿದೆ ಎಂದು ಹೇಳಿದೆ. ಹೀಗಿರುವಾಗ ಒಂದು ವೇಳೆ ಭಾಜಪಾ ಮೈತ್ರಿಕೂಟ ಅಧಿಕಾರಕ್ಕೆ ಮರಳಿದರೆ ಏಕನಾಥ್ ಶಿಂಧೆ ತಾವು ಮುಖ್ಯಮಂತ್ರಿ ರೇಸ್ ನಲ್ಲಿ ಇಲ್ಲ ಎಂದಿದ್ದಾರೆ. ಹಾಗಾದರೆ ಅಲ್ಲಿ ಯಾರು ಸಿಎಂ ಆಗುತ್ತಾರೆ ಎನ್ನುವ ಪ್ರಶ್ನೆಯ ನಡುವೆ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ನಾವು ಒಂದೇ ದಿನದಲ್ಲಿ ಸಿಎಂ ಯಾರೆಂದು ನಿರ್ಧರಿಸುತ್ತೇವೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಸಚಿನ್ ಪೈಲೆಟ್ ಹೇಳಿದ್ದಾರೆ.

ಆದರೆ ಪೈಲೆಟ್ ಹೇಳಿದಷ್ಟು ಈ ಲೆಕ್ಕಾಚಾರಗಳು ಸುಲಭವಾಗಿಲ್ಲ ಎನ್ನುವುದು ನಿಜ. ಕಾಂಗ್ರೆಸ್ ಮೈತ್ರಿಕೂಟದಲ್ಲಿ ಇರುವ ಮೂರು ಪಕ್ಷಗಳಲ್ಲಿ ಹಿರಿಯಣ್ಣ ಅಂದರೆ ಎನ್ ಸಿಪಿ ನಾಯಕ ಶರದ್ ಪವಾರ್. ಅವರು ಯಾರನ್ನು ಸಿಎಂ ಎಂದು ಕರೆಯುತ್ತಾರೆಯೋ ಅವರೇ ಈ ಮೈತ್ರಿಕೂಟದ ಸಿಎಂ ಎನ್ನುವುದು ಅಲಿಖಿತ ನಿಯಮ. ಇನ್ನು ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಕೂಡ ತಕ್ಷಣ ಯಾರನ್ನೋ ಸಿಎಂ ಎಂದು ಒಪ್ಪಿಕೊಳ್ಳುವುದಿಲ್ಲ. ಇನ್ನು ಅದರಲ್ಲಿ ಕಾಂಗ್ರೆಸ್ ಎಷ್ಟು ಶಾಸಕರನ್ನು ಗೆಲ್ಲಿಸಿಕೊಳ್ಳಲಿದೆ ಎನ್ನುವುದು ಕೂಡ ಇಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ.

ಈ ಎಲ್ಲದರ ಮಧ್ಯದಲ್ಲಿ ಒಂದು ವೇಳೆ ಒಂದಿಷ್ಟು ಸ್ಥಾನಗಳು ಯಾವುದೇ ಮೈತ್ರಿಕೂಟಕ್ಕೆ ಬರದೇ ಹೋದರೆ ಆಗ ಪರಸ್ಪರ ಕುದುರೆ ವ್ಯಾಪಾರ, ಕತ್ತೆ ವ್ಯಾಪಾರ ನಡೆಯಲಿದೆ. ಆದ್ದರಿಂದ ಮಹಾರಾಷ್ಟ್ರದ ಮುಖ್ಯಮಂತ್ರಿಯನ್ನು ಮೈತ್ರಿಕೂಟಗಳು ಸರಳ ಬಹುಮತವನ್ನು ಪಡೆದು ಅಧಿಕಾರಕ್ಕೆ ಬಂದಾಗ ಆಯ್ಕೆ ಮಾಡುವುದು ಅಷ್ಟು ಸುಲಭವೂ ಅಲ್ಲ, ಸಾಧ್ಯವೂ ಅಲ್ಲ. ಆದರೆ ರಾಜಕೀಯದಲ್ಲಿ ಮಿಂದು ಎದ್ದಿರುವ ಶರದ್ ಪವಾರ್ ನಂತಹ ಮುತ್ಸದ್ದಿಗಳು ಮನಸ್ಸು ಮಾಡಿದರೆ ಅದು ಕಷ್ಟವೂ ಅಲ್ಲ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search