• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೃಷಿ ಮಾಡ್ಬೇಕು, ಪೆರೋಲ್ ಕೊಡಿ ವಿನಂತಿಗೆ ಹೈಕೋರ್ಟ್ ಅಸ್ತು!

Tulunadu News Posted On December 2, 2024
0


0
Shares
  • Share On Facebook
  • Tweet It

ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳಿಗೆ ಕೆಲವೊಂದು ಅಗತ್ಯ ಸಂದರ್ಭಗಳಲ್ಲಿ ನ್ಯಾಯಾಲಯ ಪೆರೋಲ್ ನೀಡುತ್ತದೆ. ಅದರಲ್ಲಿ ನಿಗದಿತ ಅವಧಿ ಮುಗಿಸಿದ ಬಳಿಕ ಕೈದಿಗಳು ಜೈಲಿಗೆ ಮರಳಬೇಕು. ಸಾಮಾನ್ಯವಾಗಿ ವಿಶೇಷ ಸಂದರ್ಭಗಳು ಎಂದರೆ ಅನಾರೋಗ್ಯ ತಾಯಿಗೆ ಚಿಕಿತ್ಸೆ ನೀಡಲು, ತಂದೆಯ ಆರೋಗ್ಯ ಕಾಳಜಿ ವಹಿಸಲು ಹಾಗೂ ಪತ್ನಿಯಿಂದ ಸಂತಾನ ಪಡೆಯಲು, ಇನ್ನು ಪೋಷಕರ ನಿಧನದ ಸಮಯದಲ್ಲಿ ಪೆರೋಲ್ ಸಿಗುತ್ತದೆ. ಆದರೆ ಇಲ್ಲೊಬ್ಬ ಅಪರಾಧಿಗೆ ಕೃಷಿ ಚಟುವಟಿಕೆ ನೋಡಿಕೊಳ್ಳಲು ಮಾನ್ಯ ಉಚ್ಚ ನ್ಯಾಯಾಲಯ 90 ದಿನಗಳ ಪೆರೋಲ್ ನೀಡಿದೆ.

ಅಪರೂಪದ ಆದೇಶ ಇದಾಗಿದ್ದು, ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಿದ್ದಿದೇವರಹಳ್ಳಿ ನಿವಾಸಿ ಚಂದ್ರ ಎಂಬಾತ ಈ ಅವಕಾಶ ಪಡೆದ ಕೈದಿಯಾಗಿದ್ದಾನೆ. ತನ್ನ ತಂದೆಯ ಹೆಸರಿನಲ್ಲಿರುವ ಭೂಮಿಯಲ್ಲಿ ಕೃಷಿ ಚಟುವಟಿಕೆ ಮಾಡಬೇಕಿದೆ. ತಂದೆಗೆ 78 ವರ್ಷ ವಯಸ್ಸಾಗಿದೆ. ಕೃಷಿ ಚಟುವಟಿಕೆ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕುಟುಂಬದಲ್ಲಿ ಮತ್ಯಾವ ಸದಸ್ಯರೂ ಇಲ್ಲದ ಕಾರಣ ಕೃಷಿ ಚಟುವಟಿಕೆ ನೋಡಿಕೊಳ್ಳಲು ತನಗೆ 90 ದಿನಗಳ ಅವಕಾಶ ನೀಡಿ ಎಂದು ಅವನು ವಿನಂತಿಸಿಕೊಂಡಿದ್ದ.
ಈತನ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ ಚಂದ್ರನಿಗೆ ಪೆರೋಲ್ ನೀಡಿದೆ. ಶಿಕ್ಷಾವಧಿಯಲ್ಲಿ ಸಜಾಬಂಧಿಯನ್ನು ಗರಿಷ್ಟ 90 ದಿನ ಪೆರೋಲ್ ಮೇಲೆ ಬಿಡುಗಡೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಜೈಲಿನಿಂದ ಹೊರಬಂದು ಕುಟುಂಬದವರೊಂದಿಗೆ ಒಂದಿಷ್ಟು ದಿನ ಇದ್ದರೆ, ತನ್ನ ಕಾರಣಕ್ಕೆ ಕುಟುಂಬದವರು ಅನುಭವಿಸುತ್ತಿರುವ ಸಂಕಟವನ್ನು ಕೈದಿಯ ಅರಿವಿಗೆ ಬರುತ್ತದೆ. ಇದು ಮನಪರಿವರ್ತನೆಗೆ ಕೈದಿಗೂ ನೆರವಾಗುತ್ತದೆ, ಕೃಷಿ ಪವಿತ್ರ ಕೆಲಸವಾಗಿರುವುದರಿಂದ ಚಂದ್ರನ ಮೊರೆಯನ್ನು ಹೈಕೋರ್ಟ್ ಪರಿಗಣಿಸಿದೆ.

ಅಪರಾಧಿ ಚಂದ್ರ ಗೃಹಿಣಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಆಕೆಯ ಗಂಡ ಇದಕ್ಕೆ ವಿರೋಧವಾಗುತ್ತಾನೆ ಎನ್ನುವ ಕೊಲೆ ಮಾಡಿದ್ದ. 2014 ರ ಡಿಸೆಂಬರ್ 23 ರಂದು ರಾಮನಗರ ಜಿಲ್ಲೆಯ ಕನಕಪುರದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಈತ 11 ವರ್ಷಗಳಿಂದ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search