• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೃಷಿ ಮಾಡ್ಬೇಕು, ಪೆರೋಲ್ ಕೊಡಿ ವಿನಂತಿಗೆ ಹೈಕೋರ್ಟ್ ಅಸ್ತು!

Tulunadu News Posted On December 2, 2024
0


0
Shares
  • Share On Facebook
  • Tweet It

ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳಿಗೆ ಕೆಲವೊಂದು ಅಗತ್ಯ ಸಂದರ್ಭಗಳಲ್ಲಿ ನ್ಯಾಯಾಲಯ ಪೆರೋಲ್ ನೀಡುತ್ತದೆ. ಅದರಲ್ಲಿ ನಿಗದಿತ ಅವಧಿ ಮುಗಿಸಿದ ಬಳಿಕ ಕೈದಿಗಳು ಜೈಲಿಗೆ ಮರಳಬೇಕು. ಸಾಮಾನ್ಯವಾಗಿ ವಿಶೇಷ ಸಂದರ್ಭಗಳು ಎಂದರೆ ಅನಾರೋಗ್ಯ ತಾಯಿಗೆ ಚಿಕಿತ್ಸೆ ನೀಡಲು, ತಂದೆಯ ಆರೋಗ್ಯ ಕಾಳಜಿ ವಹಿಸಲು ಹಾಗೂ ಪತ್ನಿಯಿಂದ ಸಂತಾನ ಪಡೆಯಲು, ಇನ್ನು ಪೋಷಕರ ನಿಧನದ ಸಮಯದಲ್ಲಿ ಪೆರೋಲ್ ಸಿಗುತ್ತದೆ. ಆದರೆ ಇಲ್ಲೊಬ್ಬ ಅಪರಾಧಿಗೆ ಕೃಷಿ ಚಟುವಟಿಕೆ ನೋಡಿಕೊಳ್ಳಲು ಮಾನ್ಯ ಉಚ್ಚ ನ್ಯಾಯಾಲಯ 90 ದಿನಗಳ ಪೆರೋಲ್ ನೀಡಿದೆ.

ಅಪರೂಪದ ಆದೇಶ ಇದಾಗಿದ್ದು, ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಿದ್ದಿದೇವರಹಳ್ಳಿ ನಿವಾಸಿ ಚಂದ್ರ ಎಂಬಾತ ಈ ಅವಕಾಶ ಪಡೆದ ಕೈದಿಯಾಗಿದ್ದಾನೆ. ತನ್ನ ತಂದೆಯ ಹೆಸರಿನಲ್ಲಿರುವ ಭೂಮಿಯಲ್ಲಿ ಕೃಷಿ ಚಟುವಟಿಕೆ ಮಾಡಬೇಕಿದೆ. ತಂದೆಗೆ 78 ವರ್ಷ ವಯಸ್ಸಾಗಿದೆ. ಕೃಷಿ ಚಟುವಟಿಕೆ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕುಟುಂಬದಲ್ಲಿ ಮತ್ಯಾವ ಸದಸ್ಯರೂ ಇಲ್ಲದ ಕಾರಣ ಕೃಷಿ ಚಟುವಟಿಕೆ ನೋಡಿಕೊಳ್ಳಲು ತನಗೆ 90 ದಿನಗಳ ಅವಕಾಶ ನೀಡಿ ಎಂದು ಅವನು ವಿನಂತಿಸಿಕೊಂಡಿದ್ದ.
ಈತನ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ ಚಂದ್ರನಿಗೆ ಪೆರೋಲ್ ನೀಡಿದೆ. ಶಿಕ್ಷಾವಧಿಯಲ್ಲಿ ಸಜಾಬಂಧಿಯನ್ನು ಗರಿಷ್ಟ 90 ದಿನ ಪೆರೋಲ್ ಮೇಲೆ ಬಿಡುಗಡೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಜೈಲಿನಿಂದ ಹೊರಬಂದು ಕುಟುಂಬದವರೊಂದಿಗೆ ಒಂದಿಷ್ಟು ದಿನ ಇದ್ದರೆ, ತನ್ನ ಕಾರಣಕ್ಕೆ ಕುಟುಂಬದವರು ಅನುಭವಿಸುತ್ತಿರುವ ಸಂಕಟವನ್ನು ಕೈದಿಯ ಅರಿವಿಗೆ ಬರುತ್ತದೆ. ಇದು ಮನಪರಿವರ್ತನೆಗೆ ಕೈದಿಗೂ ನೆರವಾಗುತ್ತದೆ, ಕೃಷಿ ಪವಿತ್ರ ಕೆಲಸವಾಗಿರುವುದರಿಂದ ಚಂದ್ರನ ಮೊರೆಯನ್ನು ಹೈಕೋರ್ಟ್ ಪರಿಗಣಿಸಿದೆ.

ಅಪರಾಧಿ ಚಂದ್ರ ಗೃಹಿಣಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಆಕೆಯ ಗಂಡ ಇದಕ್ಕೆ ವಿರೋಧವಾಗುತ್ತಾನೆ ಎನ್ನುವ ಕೊಲೆ ಮಾಡಿದ್ದ. 2014 ರ ಡಿಸೆಂಬರ್ 23 ರಂದು ರಾಮನಗರ ಜಿಲ್ಲೆಯ ಕನಕಪುರದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಈತ 11 ವರ್ಷಗಳಿಂದ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search