• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೃಷಿ ಮಾಡ್ಬೇಕು, ಪೆರೋಲ್ ಕೊಡಿ ವಿನಂತಿಗೆ ಹೈಕೋರ್ಟ್ ಅಸ್ತು!

Tulunadu News Posted On December 2, 2024
0


0
Shares
  • Share On Facebook
  • Tweet It

ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳಿಗೆ ಕೆಲವೊಂದು ಅಗತ್ಯ ಸಂದರ್ಭಗಳಲ್ಲಿ ನ್ಯಾಯಾಲಯ ಪೆರೋಲ್ ನೀಡುತ್ತದೆ. ಅದರಲ್ಲಿ ನಿಗದಿತ ಅವಧಿ ಮುಗಿಸಿದ ಬಳಿಕ ಕೈದಿಗಳು ಜೈಲಿಗೆ ಮರಳಬೇಕು. ಸಾಮಾನ್ಯವಾಗಿ ವಿಶೇಷ ಸಂದರ್ಭಗಳು ಎಂದರೆ ಅನಾರೋಗ್ಯ ತಾಯಿಗೆ ಚಿಕಿತ್ಸೆ ನೀಡಲು, ತಂದೆಯ ಆರೋಗ್ಯ ಕಾಳಜಿ ವಹಿಸಲು ಹಾಗೂ ಪತ್ನಿಯಿಂದ ಸಂತಾನ ಪಡೆಯಲು, ಇನ್ನು ಪೋಷಕರ ನಿಧನದ ಸಮಯದಲ್ಲಿ ಪೆರೋಲ್ ಸಿಗುತ್ತದೆ. ಆದರೆ ಇಲ್ಲೊಬ್ಬ ಅಪರಾಧಿಗೆ ಕೃಷಿ ಚಟುವಟಿಕೆ ನೋಡಿಕೊಳ್ಳಲು ಮಾನ್ಯ ಉಚ್ಚ ನ್ಯಾಯಾಲಯ 90 ದಿನಗಳ ಪೆರೋಲ್ ನೀಡಿದೆ.

ಅಪರೂಪದ ಆದೇಶ ಇದಾಗಿದ್ದು, ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಿದ್ದಿದೇವರಹಳ್ಳಿ ನಿವಾಸಿ ಚಂದ್ರ ಎಂಬಾತ ಈ ಅವಕಾಶ ಪಡೆದ ಕೈದಿಯಾಗಿದ್ದಾನೆ. ತನ್ನ ತಂದೆಯ ಹೆಸರಿನಲ್ಲಿರುವ ಭೂಮಿಯಲ್ಲಿ ಕೃಷಿ ಚಟುವಟಿಕೆ ಮಾಡಬೇಕಿದೆ. ತಂದೆಗೆ 78 ವರ್ಷ ವಯಸ್ಸಾಗಿದೆ. ಕೃಷಿ ಚಟುವಟಿಕೆ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕುಟುಂಬದಲ್ಲಿ ಮತ್ಯಾವ ಸದಸ್ಯರೂ ಇಲ್ಲದ ಕಾರಣ ಕೃಷಿ ಚಟುವಟಿಕೆ ನೋಡಿಕೊಳ್ಳಲು ತನಗೆ 90 ದಿನಗಳ ಅವಕಾಶ ನೀಡಿ ಎಂದು ಅವನು ವಿನಂತಿಸಿಕೊಂಡಿದ್ದ.
ಈತನ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ ಚಂದ್ರನಿಗೆ ಪೆರೋಲ್ ನೀಡಿದೆ. ಶಿಕ್ಷಾವಧಿಯಲ್ಲಿ ಸಜಾಬಂಧಿಯನ್ನು ಗರಿಷ್ಟ 90 ದಿನ ಪೆರೋಲ್ ಮೇಲೆ ಬಿಡುಗಡೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಜೈಲಿನಿಂದ ಹೊರಬಂದು ಕುಟುಂಬದವರೊಂದಿಗೆ ಒಂದಿಷ್ಟು ದಿನ ಇದ್ದರೆ, ತನ್ನ ಕಾರಣಕ್ಕೆ ಕುಟುಂಬದವರು ಅನುಭವಿಸುತ್ತಿರುವ ಸಂಕಟವನ್ನು ಕೈದಿಯ ಅರಿವಿಗೆ ಬರುತ್ತದೆ. ಇದು ಮನಪರಿವರ್ತನೆಗೆ ಕೈದಿಗೂ ನೆರವಾಗುತ್ತದೆ, ಕೃಷಿ ಪವಿತ್ರ ಕೆಲಸವಾಗಿರುವುದರಿಂದ ಚಂದ್ರನ ಮೊರೆಯನ್ನು ಹೈಕೋರ್ಟ್ ಪರಿಗಣಿಸಿದೆ.

ಅಪರಾಧಿ ಚಂದ್ರ ಗೃಹಿಣಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಆಕೆಯ ಗಂಡ ಇದಕ್ಕೆ ವಿರೋಧವಾಗುತ್ತಾನೆ ಎನ್ನುವ ಕೊಲೆ ಮಾಡಿದ್ದ. 2014 ರ ಡಿಸೆಂಬರ್ 23 ರಂದು ರಾಮನಗರ ಜಿಲ್ಲೆಯ ಕನಕಪುರದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಈತ 11 ವರ್ಷಗಳಿಂದ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

0
Shares
  • Share On Facebook
  • Tweet It




Trending Now
ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
Tulunadu News August 20, 2025
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
Tulunadu News August 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
  • Popular Posts

    • 1
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 2
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • 3
      ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • 4
      ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!

  • Privacy Policy
  • Contact
© Tulunadu Infomedia.

Press enter/return to begin your search