• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೃಷಿ ಮಾಡ್ಬೇಕು, ಪೆರೋಲ್ ಕೊಡಿ ವಿನಂತಿಗೆ ಹೈಕೋರ್ಟ್ ಅಸ್ತು!

Tulunadu News Posted On December 2, 2024


  • Share On Facebook
  • Tweet It

ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳಿಗೆ ಕೆಲವೊಂದು ಅಗತ್ಯ ಸಂದರ್ಭಗಳಲ್ಲಿ ನ್ಯಾಯಾಲಯ ಪೆರೋಲ್ ನೀಡುತ್ತದೆ. ಅದರಲ್ಲಿ ನಿಗದಿತ ಅವಧಿ ಮುಗಿಸಿದ ಬಳಿಕ ಕೈದಿಗಳು ಜೈಲಿಗೆ ಮರಳಬೇಕು. ಸಾಮಾನ್ಯವಾಗಿ ವಿಶೇಷ ಸಂದರ್ಭಗಳು ಎಂದರೆ ಅನಾರೋಗ್ಯ ತಾಯಿಗೆ ಚಿಕಿತ್ಸೆ ನೀಡಲು, ತಂದೆಯ ಆರೋಗ್ಯ ಕಾಳಜಿ ವಹಿಸಲು ಹಾಗೂ ಪತ್ನಿಯಿಂದ ಸಂತಾನ ಪಡೆಯಲು, ಇನ್ನು ಪೋಷಕರ ನಿಧನದ ಸಮಯದಲ್ಲಿ ಪೆರೋಲ್ ಸಿಗುತ್ತದೆ. ಆದರೆ ಇಲ್ಲೊಬ್ಬ ಅಪರಾಧಿಗೆ ಕೃಷಿ ಚಟುವಟಿಕೆ ನೋಡಿಕೊಳ್ಳಲು ಮಾನ್ಯ ಉಚ್ಚ ನ್ಯಾಯಾಲಯ 90 ದಿನಗಳ ಪೆರೋಲ್ ನೀಡಿದೆ.

ಅಪರೂಪದ ಆದೇಶ ಇದಾಗಿದ್ದು, ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಿದ್ದಿದೇವರಹಳ್ಳಿ ನಿವಾಸಿ ಚಂದ್ರ ಎಂಬಾತ ಈ ಅವಕಾಶ ಪಡೆದ ಕೈದಿಯಾಗಿದ್ದಾನೆ. ತನ್ನ ತಂದೆಯ ಹೆಸರಿನಲ್ಲಿರುವ ಭೂಮಿಯಲ್ಲಿ ಕೃಷಿ ಚಟುವಟಿಕೆ ಮಾಡಬೇಕಿದೆ. ತಂದೆಗೆ 78 ವರ್ಷ ವಯಸ್ಸಾಗಿದೆ. ಕೃಷಿ ಚಟುವಟಿಕೆ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕುಟುಂಬದಲ್ಲಿ ಮತ್ಯಾವ ಸದಸ್ಯರೂ ಇಲ್ಲದ ಕಾರಣ ಕೃಷಿ ಚಟುವಟಿಕೆ ನೋಡಿಕೊಳ್ಳಲು ತನಗೆ 90 ದಿನಗಳ ಅವಕಾಶ ನೀಡಿ ಎಂದು ಅವನು ವಿನಂತಿಸಿಕೊಂಡಿದ್ದ.
ಈತನ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ ಚಂದ್ರನಿಗೆ ಪೆರೋಲ್ ನೀಡಿದೆ. ಶಿಕ್ಷಾವಧಿಯಲ್ಲಿ ಸಜಾಬಂಧಿಯನ್ನು ಗರಿಷ್ಟ 90 ದಿನ ಪೆರೋಲ್ ಮೇಲೆ ಬಿಡುಗಡೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಜೈಲಿನಿಂದ ಹೊರಬಂದು ಕುಟುಂಬದವರೊಂದಿಗೆ ಒಂದಿಷ್ಟು ದಿನ ಇದ್ದರೆ, ತನ್ನ ಕಾರಣಕ್ಕೆ ಕುಟುಂಬದವರು ಅನುಭವಿಸುತ್ತಿರುವ ಸಂಕಟವನ್ನು ಕೈದಿಯ ಅರಿವಿಗೆ ಬರುತ್ತದೆ. ಇದು ಮನಪರಿವರ್ತನೆಗೆ ಕೈದಿಗೂ ನೆರವಾಗುತ್ತದೆ, ಕೃಷಿ ಪವಿತ್ರ ಕೆಲಸವಾಗಿರುವುದರಿಂದ ಚಂದ್ರನ ಮೊರೆಯನ್ನು ಹೈಕೋರ್ಟ್ ಪರಿಗಣಿಸಿದೆ.

ಅಪರಾಧಿ ಚಂದ್ರ ಗೃಹಿಣಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಆಕೆಯ ಗಂಡ ಇದಕ್ಕೆ ವಿರೋಧವಾಗುತ್ತಾನೆ ಎನ್ನುವ ಕೊಲೆ ಮಾಡಿದ್ದ. 2014 ರ ಡಿಸೆಂಬರ್ 23 ರಂದು ರಾಮನಗರ ಜಿಲ್ಲೆಯ ಕನಕಪುರದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಈತ 11 ವರ್ಷಗಳಿಂದ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search