• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೃಷಿ ಮಾಡ್ಬೇಕು, ಪೆರೋಲ್ ಕೊಡಿ ವಿನಂತಿಗೆ ಹೈಕೋರ್ಟ್ ಅಸ್ತು!

Tulunadu News Posted On December 2, 2024
0


0
Shares
  • Share On Facebook
  • Tweet It

ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳಿಗೆ ಕೆಲವೊಂದು ಅಗತ್ಯ ಸಂದರ್ಭಗಳಲ್ಲಿ ನ್ಯಾಯಾಲಯ ಪೆರೋಲ್ ನೀಡುತ್ತದೆ. ಅದರಲ್ಲಿ ನಿಗದಿತ ಅವಧಿ ಮುಗಿಸಿದ ಬಳಿಕ ಕೈದಿಗಳು ಜೈಲಿಗೆ ಮರಳಬೇಕು. ಸಾಮಾನ್ಯವಾಗಿ ವಿಶೇಷ ಸಂದರ್ಭಗಳು ಎಂದರೆ ಅನಾರೋಗ್ಯ ತಾಯಿಗೆ ಚಿಕಿತ್ಸೆ ನೀಡಲು, ತಂದೆಯ ಆರೋಗ್ಯ ಕಾಳಜಿ ವಹಿಸಲು ಹಾಗೂ ಪತ್ನಿಯಿಂದ ಸಂತಾನ ಪಡೆಯಲು, ಇನ್ನು ಪೋಷಕರ ನಿಧನದ ಸಮಯದಲ್ಲಿ ಪೆರೋಲ್ ಸಿಗುತ್ತದೆ. ಆದರೆ ಇಲ್ಲೊಬ್ಬ ಅಪರಾಧಿಗೆ ಕೃಷಿ ಚಟುವಟಿಕೆ ನೋಡಿಕೊಳ್ಳಲು ಮಾನ್ಯ ಉಚ್ಚ ನ್ಯಾಯಾಲಯ 90 ದಿನಗಳ ಪೆರೋಲ್ ನೀಡಿದೆ.

ಅಪರೂಪದ ಆದೇಶ ಇದಾಗಿದ್ದು, ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಿದ್ದಿದೇವರಹಳ್ಳಿ ನಿವಾಸಿ ಚಂದ್ರ ಎಂಬಾತ ಈ ಅವಕಾಶ ಪಡೆದ ಕೈದಿಯಾಗಿದ್ದಾನೆ. ತನ್ನ ತಂದೆಯ ಹೆಸರಿನಲ್ಲಿರುವ ಭೂಮಿಯಲ್ಲಿ ಕೃಷಿ ಚಟುವಟಿಕೆ ಮಾಡಬೇಕಿದೆ. ತಂದೆಗೆ 78 ವರ್ಷ ವಯಸ್ಸಾಗಿದೆ. ಕೃಷಿ ಚಟುವಟಿಕೆ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕುಟುಂಬದಲ್ಲಿ ಮತ್ಯಾವ ಸದಸ್ಯರೂ ಇಲ್ಲದ ಕಾರಣ ಕೃಷಿ ಚಟುವಟಿಕೆ ನೋಡಿಕೊಳ್ಳಲು ತನಗೆ 90 ದಿನಗಳ ಅವಕಾಶ ನೀಡಿ ಎಂದು ಅವನು ವಿನಂತಿಸಿಕೊಂಡಿದ್ದ.
ಈತನ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ ಚಂದ್ರನಿಗೆ ಪೆರೋಲ್ ನೀಡಿದೆ. ಶಿಕ್ಷಾವಧಿಯಲ್ಲಿ ಸಜಾಬಂಧಿಯನ್ನು ಗರಿಷ್ಟ 90 ದಿನ ಪೆರೋಲ್ ಮೇಲೆ ಬಿಡುಗಡೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಜೈಲಿನಿಂದ ಹೊರಬಂದು ಕುಟುಂಬದವರೊಂದಿಗೆ ಒಂದಿಷ್ಟು ದಿನ ಇದ್ದರೆ, ತನ್ನ ಕಾರಣಕ್ಕೆ ಕುಟುಂಬದವರು ಅನುಭವಿಸುತ್ತಿರುವ ಸಂಕಟವನ್ನು ಕೈದಿಯ ಅರಿವಿಗೆ ಬರುತ್ತದೆ. ಇದು ಮನಪರಿವರ್ತನೆಗೆ ಕೈದಿಗೂ ನೆರವಾಗುತ್ತದೆ, ಕೃಷಿ ಪವಿತ್ರ ಕೆಲಸವಾಗಿರುವುದರಿಂದ ಚಂದ್ರನ ಮೊರೆಯನ್ನು ಹೈಕೋರ್ಟ್ ಪರಿಗಣಿಸಿದೆ.

ಅಪರಾಧಿ ಚಂದ್ರ ಗೃಹಿಣಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಆಕೆಯ ಗಂಡ ಇದಕ್ಕೆ ವಿರೋಧವಾಗುತ್ತಾನೆ ಎನ್ನುವ ಕೊಲೆ ಮಾಡಿದ್ದ. 2014 ರ ಡಿಸೆಂಬರ್ 23 ರಂದು ರಾಮನಗರ ಜಿಲ್ಲೆಯ ಕನಕಪುರದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಈತ 11 ವರ್ಷಗಳಿಂದ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search