• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ರಿಷಬ್ ಶೆಟ್ಟಿ ಇನ್ನು ಛತ್ರಪತಿ ಶಿವಾಜಿ!

Tulunadu News Posted On December 3, 2024
0


0
Shares
  • Share On Facebook
  • Tweet It

ಈಗಾಗಲೇ ಕನ್ನಡ ಭಾಷೆಯಲ್ಲಿ ಹಲವು ಸಿನೆಮಾಗಳನ್ನು ನಿರ್ದೇಶಿಸಿ, ನಟಿಸಿ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದರೂ ಕಾಂತಾರಾ ಸಿನೆಮಾದಿಂದ ಖ್ಯಾತಿಯ ತುದಿಗೇರಿರುವ ರಿಷಬ್ ಶೆಟ್ಟಿಯವರು ಈಗಾಗಲೇ ಕಾಂತಾರಾ ಪ್ರೀಕ್ವೆಲ್ ನಲ್ಲಿ ಬ್ಯುಸಿಯಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅವರು ಇಡೀ ಭಾರತಾದ್ಯಂತ ಪ್ರಸಿದ್ಧರಾಗಿರುವುದರಿಂದ ಅವರನ್ನು ಸಹಜವಾಗಿ ಬಾಲಿವುಡ್ ಕೂಡ ತನ್ನ ಸಿನೆಮಾದಲ್ಲಿ ನಟಿಸಲು ಕಾತರದಿಂದ ಕಾಯುತ್ತದೆ. ಈಗ ಆ ನಿರೀಕ್ಷೆ ಈಡೇರಿದೆ.

ತೆಲುಗಿನ ಜೈ ಹನುಮಾನ್ ಸಿನೆಮಾಗೆ ಓಕೆ ಹೇಳಿರುವ ರಿಷಬ್ ಈಗ ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾಗೂ ಜೈ ಎಂದಿದ್ದಾರೆ. ಈ ಐತಿಹಾಸಿಕ ವ್ಯಕ್ತಿಯ ಕತೆಯುಳ್ಳ ಬಾಲಿವುಡ್ ಸಿನೆಮಾವನ್ನು ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ. ಈ ಕುರಿತು ಮಾತನಾಡಿದ ಅವರು ” ಈ ಸಿನೆಮಾ ಮಾಡುವುದು ನನ್ನ ಬಹುಕಾಲದ ಕನಸು. ಛತ್ರಪತಿ ಶಿವಾಜಿ ಪಾತ್ರಕ್ಕೆ ರಿಷಬ್ ಶೆಟ್ಟಿಯವರೇ ನನ್ನ ಏಕೈಕ ಆಯ್ಕೆಯಾಗಿದ್ದರು. ಸಿನೆಮಾದ ತಂತ್ರಜ್ಞಾನ ಬಹಳ ಅತ್ಯುತ್ತಮವಾಗಿ ಮೂಡಿಬರಲಿದೆ” ಎಂದು ಅವರು ಹೇಳಿದರು.

ಈ ಬಗ್ಗೆ ಮಾತನಾಡಿರುವ ರಿಷಬ್ ಶೆಟ್ಟಿಯವರು ” ದಿ ಫ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾವನ್ನು ನಿರ್ದೇಶಕ ಸಂದೀಪ್ ಸಿಂಗ್ ಕಲ್ಪಿಸಿಕೊಂಡಿರುವ ರೀತಿ ಅದ್ಭುತವಾಗಿದೆ. ಆದ್ದರಿಂದ ತಕ್ಷಣ ಒಪ್ಪಿಕೊಂಡು ಬಿಟ್ಟಿದ್ದೇನೆ. ಶಿವಾಜಿ ಮಹಾರಾಜರು ರಾಷ್ಟ್ರೀಯ ಹೀರೋ. ಅಂತಹ ಮಹಾನ್ ನಾಯಕನ ಪಾತ್ರಕ್ಕೆ ಜೀವ ತುಂಬುತ್ತಿರುವುದು ನನಗೆ ದೊರಕಿದ ಶ್ರೇಷ್ಟ ಅವಕಾಶ ಮತ್ತು ಗೌರವ” ಎಂದು ಹೇಳಿದ್ದಾರೆ.
ದಿ ಫ್ರೈಡ್ ಆಫ್ ಭಾರತ್ : ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾ 2027 ಜನವರಿ 21 ರಂದು ವಿಶ್ವಮಟ್ಟದಲ್ಲಿ ಬಿಡುಗಡೆಯಾಗಲಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search