• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ರಿಷಬ್ ಶೆಟ್ಟಿ ಇನ್ನು ಛತ್ರಪತಿ ಶಿವಾಜಿ!

Tulunadu News Posted On December 3, 2024
0


0
Shares
  • Share On Facebook
  • Tweet It

ಈಗಾಗಲೇ ಕನ್ನಡ ಭಾಷೆಯಲ್ಲಿ ಹಲವು ಸಿನೆಮಾಗಳನ್ನು ನಿರ್ದೇಶಿಸಿ, ನಟಿಸಿ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದರೂ ಕಾಂತಾರಾ ಸಿನೆಮಾದಿಂದ ಖ್ಯಾತಿಯ ತುದಿಗೇರಿರುವ ರಿಷಬ್ ಶೆಟ್ಟಿಯವರು ಈಗಾಗಲೇ ಕಾಂತಾರಾ ಪ್ರೀಕ್ವೆಲ್ ನಲ್ಲಿ ಬ್ಯುಸಿಯಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅವರು ಇಡೀ ಭಾರತಾದ್ಯಂತ ಪ್ರಸಿದ್ಧರಾಗಿರುವುದರಿಂದ ಅವರನ್ನು ಸಹಜವಾಗಿ ಬಾಲಿವುಡ್ ಕೂಡ ತನ್ನ ಸಿನೆಮಾದಲ್ಲಿ ನಟಿಸಲು ಕಾತರದಿಂದ ಕಾಯುತ್ತದೆ. ಈಗ ಆ ನಿರೀಕ್ಷೆ ಈಡೇರಿದೆ.

ತೆಲುಗಿನ ಜೈ ಹನುಮಾನ್ ಸಿನೆಮಾಗೆ ಓಕೆ ಹೇಳಿರುವ ರಿಷಬ್ ಈಗ ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾಗೂ ಜೈ ಎಂದಿದ್ದಾರೆ. ಈ ಐತಿಹಾಸಿಕ ವ್ಯಕ್ತಿಯ ಕತೆಯುಳ್ಳ ಬಾಲಿವುಡ್ ಸಿನೆಮಾವನ್ನು ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ. ಈ ಕುರಿತು ಮಾತನಾಡಿದ ಅವರು ” ಈ ಸಿನೆಮಾ ಮಾಡುವುದು ನನ್ನ ಬಹುಕಾಲದ ಕನಸು. ಛತ್ರಪತಿ ಶಿವಾಜಿ ಪಾತ್ರಕ್ಕೆ ರಿಷಬ್ ಶೆಟ್ಟಿಯವರೇ ನನ್ನ ಏಕೈಕ ಆಯ್ಕೆಯಾಗಿದ್ದರು. ಸಿನೆಮಾದ ತಂತ್ರಜ್ಞಾನ ಬಹಳ ಅತ್ಯುತ್ತಮವಾಗಿ ಮೂಡಿಬರಲಿದೆ” ಎಂದು ಅವರು ಹೇಳಿದರು.

ಈ ಬಗ್ಗೆ ಮಾತನಾಡಿರುವ ರಿಷಬ್ ಶೆಟ್ಟಿಯವರು ” ದಿ ಫ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾವನ್ನು ನಿರ್ದೇಶಕ ಸಂದೀಪ್ ಸಿಂಗ್ ಕಲ್ಪಿಸಿಕೊಂಡಿರುವ ರೀತಿ ಅದ್ಭುತವಾಗಿದೆ. ಆದ್ದರಿಂದ ತಕ್ಷಣ ಒಪ್ಪಿಕೊಂಡು ಬಿಟ್ಟಿದ್ದೇನೆ. ಶಿವಾಜಿ ಮಹಾರಾಜರು ರಾಷ್ಟ್ರೀಯ ಹೀರೋ. ಅಂತಹ ಮಹಾನ್ ನಾಯಕನ ಪಾತ್ರಕ್ಕೆ ಜೀವ ತುಂಬುತ್ತಿರುವುದು ನನಗೆ ದೊರಕಿದ ಶ್ರೇಷ್ಟ ಅವಕಾಶ ಮತ್ತು ಗೌರವ” ಎಂದು ಹೇಳಿದ್ದಾರೆ.
ದಿ ಫ್ರೈಡ್ ಆಫ್ ಭಾರತ್ : ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾ 2027 ಜನವರಿ 21 ರಂದು ವಿಶ್ವಮಟ್ಟದಲ್ಲಿ ಬಿಡುಗಡೆಯಾಗಲಿದೆ.

0
Shares
  • Share On Facebook
  • Tweet It




Trending Now
ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
Tulunadu News September 9, 2025
ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
Tulunadu News September 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ
    • ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ
  • Popular Posts

    • 1
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 2
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • 3
      ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • 4
      ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • 5
      ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ

  • Privacy Policy
  • Contact
© Tulunadu Infomedia.

Press enter/return to begin your search