• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ರಿಷಬ್ ಶೆಟ್ಟಿ ಇನ್ನು ಛತ್ರಪತಿ ಶಿವಾಜಿ!

Tulunadu News Posted On December 3, 2024
0


0
Shares
  • Share On Facebook
  • Tweet It

ಈಗಾಗಲೇ ಕನ್ನಡ ಭಾಷೆಯಲ್ಲಿ ಹಲವು ಸಿನೆಮಾಗಳನ್ನು ನಿರ್ದೇಶಿಸಿ, ನಟಿಸಿ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದರೂ ಕಾಂತಾರಾ ಸಿನೆಮಾದಿಂದ ಖ್ಯಾತಿಯ ತುದಿಗೇರಿರುವ ರಿಷಬ್ ಶೆಟ್ಟಿಯವರು ಈಗಾಗಲೇ ಕಾಂತಾರಾ ಪ್ರೀಕ್ವೆಲ್ ನಲ್ಲಿ ಬ್ಯುಸಿಯಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅವರು ಇಡೀ ಭಾರತಾದ್ಯಂತ ಪ್ರಸಿದ್ಧರಾಗಿರುವುದರಿಂದ ಅವರನ್ನು ಸಹಜವಾಗಿ ಬಾಲಿವುಡ್ ಕೂಡ ತನ್ನ ಸಿನೆಮಾದಲ್ಲಿ ನಟಿಸಲು ಕಾತರದಿಂದ ಕಾಯುತ್ತದೆ. ಈಗ ಆ ನಿರೀಕ್ಷೆ ಈಡೇರಿದೆ.

ತೆಲುಗಿನ ಜೈ ಹನುಮಾನ್ ಸಿನೆಮಾಗೆ ಓಕೆ ಹೇಳಿರುವ ರಿಷಬ್ ಈಗ ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾಗೂ ಜೈ ಎಂದಿದ್ದಾರೆ. ಈ ಐತಿಹಾಸಿಕ ವ್ಯಕ್ತಿಯ ಕತೆಯುಳ್ಳ ಬಾಲಿವುಡ್ ಸಿನೆಮಾವನ್ನು ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ. ಈ ಕುರಿತು ಮಾತನಾಡಿದ ಅವರು ” ಈ ಸಿನೆಮಾ ಮಾಡುವುದು ನನ್ನ ಬಹುಕಾಲದ ಕನಸು. ಛತ್ರಪತಿ ಶಿವಾಜಿ ಪಾತ್ರಕ್ಕೆ ರಿಷಬ್ ಶೆಟ್ಟಿಯವರೇ ನನ್ನ ಏಕೈಕ ಆಯ್ಕೆಯಾಗಿದ್ದರು. ಸಿನೆಮಾದ ತಂತ್ರಜ್ಞಾನ ಬಹಳ ಅತ್ಯುತ್ತಮವಾಗಿ ಮೂಡಿಬರಲಿದೆ” ಎಂದು ಅವರು ಹೇಳಿದರು.

ಈ ಬಗ್ಗೆ ಮಾತನಾಡಿರುವ ರಿಷಬ್ ಶೆಟ್ಟಿಯವರು ” ದಿ ಫ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾವನ್ನು ನಿರ್ದೇಶಕ ಸಂದೀಪ್ ಸಿಂಗ್ ಕಲ್ಪಿಸಿಕೊಂಡಿರುವ ರೀತಿ ಅದ್ಭುತವಾಗಿದೆ. ಆದ್ದರಿಂದ ತಕ್ಷಣ ಒಪ್ಪಿಕೊಂಡು ಬಿಟ್ಟಿದ್ದೇನೆ. ಶಿವಾಜಿ ಮಹಾರಾಜರು ರಾಷ್ಟ್ರೀಯ ಹೀರೋ. ಅಂತಹ ಮಹಾನ್ ನಾಯಕನ ಪಾತ್ರಕ್ಕೆ ಜೀವ ತುಂಬುತ್ತಿರುವುದು ನನಗೆ ದೊರಕಿದ ಶ್ರೇಷ್ಟ ಅವಕಾಶ ಮತ್ತು ಗೌರವ” ಎಂದು ಹೇಳಿದ್ದಾರೆ.
ದಿ ಫ್ರೈಡ್ ಆಫ್ ಭಾರತ್ : ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾ 2027 ಜನವರಿ 21 ರಂದು ವಿಶ್ವಮಟ್ಟದಲ್ಲಿ ಬಿಡುಗಡೆಯಾಗಲಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search