• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ

ರಿಷಬ್ ಶೆಟ್ಟಿ ಇನ್ನು ಛತ್ರಪತಿ ಶಿವಾಜಿ!

Tulunadu News Posted On December 3, 2024
0


0
Shares
  • Share On Facebook
  • Tweet It

ಈಗಾಗಲೇ ಕನ್ನಡ ಭಾಷೆಯಲ್ಲಿ ಹಲವು ಸಿನೆಮಾಗಳನ್ನು ನಿರ್ದೇಶಿಸಿ, ನಟಿಸಿ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದರೂ ಕಾಂತಾರಾ ಸಿನೆಮಾದಿಂದ ಖ್ಯಾತಿಯ ತುದಿಗೇರಿರುವ ರಿಷಬ್ ಶೆಟ್ಟಿಯವರು ಈಗಾಗಲೇ ಕಾಂತಾರಾ ಪ್ರೀಕ್ವೆಲ್ ನಲ್ಲಿ ಬ್ಯುಸಿಯಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅವರು ಇಡೀ ಭಾರತಾದ್ಯಂತ ಪ್ರಸಿದ್ಧರಾಗಿರುವುದರಿಂದ ಅವರನ್ನು ಸಹಜವಾಗಿ ಬಾಲಿವುಡ್ ಕೂಡ ತನ್ನ ಸಿನೆಮಾದಲ್ಲಿ ನಟಿಸಲು ಕಾತರದಿಂದ ಕಾಯುತ್ತದೆ. ಈಗ ಆ ನಿರೀಕ್ಷೆ ಈಡೇರಿದೆ.

ತೆಲುಗಿನ ಜೈ ಹನುಮಾನ್ ಸಿನೆಮಾಗೆ ಓಕೆ ಹೇಳಿರುವ ರಿಷಬ್ ಈಗ ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾಗೂ ಜೈ ಎಂದಿದ್ದಾರೆ. ಈ ಐತಿಹಾಸಿಕ ವ್ಯಕ್ತಿಯ ಕತೆಯುಳ್ಳ ಬಾಲಿವುಡ್ ಸಿನೆಮಾವನ್ನು ಸಂದೀಪ್ ಸಿಂಗ್ ನಿರ್ದೇಶನ ಮಾಡಲಿದ್ದಾರೆ. ಈ ಕುರಿತು ಮಾತನಾಡಿದ ಅವರು ” ಈ ಸಿನೆಮಾ ಮಾಡುವುದು ನನ್ನ ಬಹುಕಾಲದ ಕನಸು. ಛತ್ರಪತಿ ಶಿವಾಜಿ ಪಾತ್ರಕ್ಕೆ ರಿಷಬ್ ಶೆಟ್ಟಿಯವರೇ ನನ್ನ ಏಕೈಕ ಆಯ್ಕೆಯಾಗಿದ್ದರು. ಸಿನೆಮಾದ ತಂತ್ರಜ್ಞಾನ ಬಹಳ ಅತ್ಯುತ್ತಮವಾಗಿ ಮೂಡಿಬರಲಿದೆ” ಎಂದು ಅವರು ಹೇಳಿದರು.

ಈ ಬಗ್ಗೆ ಮಾತನಾಡಿರುವ ರಿಷಬ್ ಶೆಟ್ಟಿಯವರು ” ದಿ ಫ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾವನ್ನು ನಿರ್ದೇಶಕ ಸಂದೀಪ್ ಸಿಂಗ್ ಕಲ್ಪಿಸಿಕೊಂಡಿರುವ ರೀತಿ ಅದ್ಭುತವಾಗಿದೆ. ಆದ್ದರಿಂದ ತಕ್ಷಣ ಒಪ್ಪಿಕೊಂಡು ಬಿಟ್ಟಿದ್ದೇನೆ. ಶಿವಾಜಿ ಮಹಾರಾಜರು ರಾಷ್ಟ್ರೀಯ ಹೀರೋ. ಅಂತಹ ಮಹಾನ್ ನಾಯಕನ ಪಾತ್ರಕ್ಕೆ ಜೀವ ತುಂಬುತ್ತಿರುವುದು ನನಗೆ ದೊರಕಿದ ಶ್ರೇಷ್ಟ ಅವಕಾಶ ಮತ್ತು ಗೌರವ” ಎಂದು ಹೇಳಿದ್ದಾರೆ.
ದಿ ಫ್ರೈಡ್ ಆಫ್ ಭಾರತ್ : ಛತ್ರಪತಿ ಶಿವಾಜಿ ಮಹಾರಾಜ್ ಸಿನೆಮಾ 2027 ಜನವರಿ 21 ರಂದು ವಿಶ್ವಮಟ್ಟದಲ್ಲಿ ಬಿಡುಗಡೆಯಾಗಲಿದೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 3
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..

  • Privacy Policy
  • Contact
© Tulunadu Infomedia.

Press enter/return to begin your search