• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಪ್ರಧಾನಿಯಾದ ಬಳಿಕ ಮೋದಿ ನೋಡಿದ ಮೊದಲ ಸಿನೆಮಾ ಇದು!

Tulunadu News Posted On December 3, 2024
0


0
Shares
  • Share On Facebook
  • Tweet It

ಖ್ಯಾತ ನಟ ಜಿತೇಂದ್ರ ಅವರು ಪಾರ್ಲಿಮೆಂಟಿನಲ್ಲಿ “ಸಾಬರಮತಿ ರಿಪೋರ್ಟ್” ಸಿನೆಮಾದ ಪ್ರದರ್ಶನವನ್ನು ವೀಕ್ಷಿಸಿ ಹೊರಗೆ ಬಂದ ಬಳಿಕ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮಾತನಾಡಿದ ಜಿತೇಂದ್ರ ” ನನ್ನ 50 ವರ್ಷಗಳ ಚಿತ್ರ ಬದುಕಿನಲ್ಲಿ ಪ್ರಧಾನ ಮಂತ್ರಿಯವರೊಂದಿಗೆ ಕುಳಿತು ಸಿನೆಮಾ ವೀಕ್ಷಿಸುವ ಅವಕಾಶ ಸಿಕ್ಕಿರಲಿಲ್ಲ. ನನ್ನ ಮಗಳ ಕಾರಣದಿಂದ ಇದು ಸಾಧ್ಯವಾಯಿತು ಎಂದು ಪ್ರಧಾನಿಯವರಿಗೆ ಹೇಳಿದೆ. ಅದಕ್ಕೆ ಅವರು ನಾನು ಕೂಡ ಪ್ರಧಾನ ಮಂತ್ರಿಯಾದ ಬಳಿಕ ನೋಡುತ್ತಿರುವ ಮೊದಲ ಸಿನೆಮಾ ಇದು ಎಂದು ಹೇಳಿದರು” ಎಂದು ಹರ್ಷಚಿತ್ತರಾಗಿ ಪ್ರತಿಕ್ರಿಯಿಸಿದರು.

ನರೇಂದ್ರ ಮೋದಿಯವರು ಪ್ರಧಾನಿಯಾಗುವ ಮೊದಲು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅವರ ರಾಜಕೀಯ ಜೀವನದಲ್ಲಿ ಸಾಬರಮತಿ ಎಕ್ಸಪ್ರೆಸ್ ದುರಂತದ ಕರಾಳತೆ ಯಾವತ್ತೂ ಮರೆಯಲಾಗುವುದಿಲ್ಲ. ಸಾಬರಮತಿ ರೈಲಿಗೆ ಮತಾಂಧರು ಬೆಂಕಿ ಹಚ್ಚಿದ್ದು, ಅದರ ನಂತರ ನಡೆದ ಕೋಮು ಗಲಭೆಗಳು, ಅದರ ಬಳಿಕ ಗುಜರಾತ್ ಪೊಲೀಸರು ಮುಸಲಿಯರ ಗುಂಪೊಂದು ಬೆಂಕಿ ಹಚ್ಚಿದ್ದು ಎಂದು ಆರೋಪಿಸಿದ್ದು, ಚಾರ್ಜ್ ಶೀಟ್ ನಲ್ಲಿ ಹಾಗೆ ಉಲ್ಲೇಖಿಸಲ್ಪಟ್ಟಿದ್ದು, ನಂತರ ಆ ಬಗ್ಗೆ ಆಯೋಗದ ನೇಮಕ, ಆಗ ಲಾಲು ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದದ್ದು, ಆಗ ಅದು ಅಪಘಾತ ಎಂದು ಬಿಂಬಿತವಾದದ್ದು, ಗುಜರಾತ್ ಹೈಕೋರ್ಟ್ ಆ ಆಯೋಗವೇ ಅಸಂವಿಧಾನಿಕ ಎಂದು ಘೋಷಿಸಿದ್ದು ಹೀಗೆ ಅನೇಕ ಘಟನೆಗಳ ಸುತ್ತ ಈ ಸಿನೆಮಾ ಸುತ್ತುತ್ತದೆ.

ಈ ಸಿನೆಮಾವನ್ನು ಜಿತೇಂದ್ರ ಅವರ ಮಗಳು ಏಕ್ತಾ ಕಪೂರ್ ಹಾಗೂ ಪತ್ನಿ ಶೋಭಾ ಕಪೂರ್ ಅವರು ಬಾಲಾಜಿ ಮೋಶನ್ ಫಿಚ್ಚರ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಅವರೊಂದಿಗೆ ವಿಪಿನ್ ಅಗ್ನಿಹೋತ್ರಿ ಫಿಲಂ ಹಾಗೂ ವಿಖಿರ್ ಫಿಲಂ ಪ್ರೋಡಕ್ಷನ್ ಅವರು ಜೊತೆಯಾಗಿದ್ದಾರೆ. ಆರಂಭದಲ್ಲಿ ರಂಜನ್ ಚಂಡೆಲ್ ಅವರು ನಿರ್ದೇಶನದ ಹೊಣೆಯನ್ನು ಹೊತ್ತಿದ್ದು ನಂತರ ವಿವಿಧ ಕಾರಣಗಳಿಂದಾಗಿ ಸಿನೆಮಾದಿಂದ ಹೊರಬಂದಿದ್ದರು. ಆ ಬಳಿಕ ದೀರಜ್ ಸರ್ಣಾ ಅವರು ಈ ಸಿನೆಮಾದ ನಿರ್ದೇಶಕರಾದರು. 12 ಥ್ ಫೇಲ್ ಸಿನೆಮಾದಿಂದ ಖ್ಯಾತರಾಗಿದ್ದ ವಿಕ್ರಾಂತ್ ಮೆಸ್ಸಿ ಇದರ ನಾಯಕನಟರಾಗಿದ್ದರೆ, ರಾಶಿ ಖನ್ನಾ ಇದರ ನಾಯಕಿನಟಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • 2
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 3
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 4
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search