• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಿ.ವಿ.ಸಿಂಧೂ ಮದುವೆಯಾಗುತ್ತಿರುವ ಗಂಡು ಯಾರು?

Tulunadu News Posted On December 3, 2024


  • Share On Facebook
  • Tweet It

ಒಲಿಂಪಿಕ್ಸ್ ವಿಜೇತೆ ಪಿ.ವಿ.ಸಿಂಧೂ ಶೀಘ್ರದಲ್ಲಿ ಹಸೆಮಣೆ ಏರಲಿದ್ದಾರೆ. ಅವರು ರಾಜಾಸ್ಥಾನದ ಉದಯಪುರದಲ್ಲಿ ಮದುವೆಯಾಗಲಿದ್ದಾರೆ. ಮದುವೆಯ ದಿನಾಂಕ ಕೂಡ ಘೋಷಣೆಯಾಗಿದ್ದು ಡಿಸೆಂಬರ್ 22 ರಂದು ಮದುವೆ ನಡೆಯಲಿದೆ. ಅದರ ನಂತರ ಹೈದ್ರಾಬಾದಿನಲ್ಲಿ ಡಿಸೆಂಬರ್ 24 ರಂದು ಗ್ರ್ಯಾಂಡ್ ರಿಸೆಪ್ಷನ್ ಕೂಡ ನಡೆಯಲಿದೆ. ಹಾಗಾದ್ರೆ ಎಲ್ಲರಲ್ಲಿಯೂ ಇದ್ದ ಪ್ರಶ್ನೆ ಏನೆಂದರೆ ಸಿಂಧೂ ಮದುವೆಯಾಗುತ್ತಿರುವ ಗಂಡು ಕ್ರೀಡಾ ಕ್ಷೇತ್ರದವರಾ? ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಮದುವೆ ಗಂಡಿನ ಹೆಸರು ವೆಂಕಟ ದತ್ತ ಸಾಯಿ. ಮದುಮಗ ಐಟಿ ಕ್ಷೇತ್ರದಲ್ಲಿದ್ದಾರೆ.

29 ವರ್ಷ ವಯಸ್ಸಿನ ಸಿಂಧೂ ಮದುವೆಯನ್ನು ಅವರ ತಂದೆ ಪಿ.ವಿ.ರಮಣ್ ಅವರೇ ಬಹಿರಂಗಪಡಿಸಿದ್ದಾರೆ. ಎರಡೂ ಕುಟುಂಬಗಳು ಕೆಲವು ವರ್ಷಗಳಿಂದ ಪರಿಚಯಸ್ಥರಾಗಿದ್ದು, ತಿಂಗಳ ಹಿಂದೆಯಷ್ಟೇ ಮದುವೆ ನಿಶ್ಚಿತವಾಗಿದೆ. ಇನ್ನು 2025 ಜನವರಿಯಿಂದ ಸಿಂಧೂ ಬಿಡುವಿಲ್ಲದ ಸ್ಪರ್ಧಾಕೂಟದಲ್ಲಿ ಭಾಗವಹಿಸಬೇಕಾಗಿರುವುದರಿಂದ ಡಿಸೆಂಬರ್ ನಲ್ಲಿಯೇ ಮದುವೆ ನಡೆಸಲು ಎರಡೂ ಕುಟುಂಬದವರು ನಿರ್ಧರಿಸಿದ್ದಾರೆ.

ವೆಂಕಟ ದತ್ತ ಸಾಯಿ ಪೊಸಿಡೆಕ್ಸ್ ಟೆಕ್ನಾಲಜಿಯಲ್ಲಿ ಕಾರ್ಯಕಾರಿ ನಿರ್ದೇಶಕರಾಗಿ ಉದ್ಯೋಗದಲ್ಲಿದ್ದಾರೆ. ವೆಂಕಟ ದತ್ತ ಸಾಯಿ ಅವರ ತಂದೆ ಭಾರತೀಯ ಕಂದಾಯ ಇಲಾಖೆಯಲ್ಲಿ ಸೇವೆಯಲ್ಲಿದ್ದು ಪ್ರಸ್ತುತ ನಿವೃತ್ತರಾಗಿದ್ದಾರೆ. ಅವರು ಮಗನ ಕಂಪೆನಿಯಲ್ಲಿಯೇ ಆಡಳಿತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನೂತನ ವಧು ವರರಿಗೆ ಶುಭ ಹಾರೈಸೋಣ ಅಲ್ಲವೇ?

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search