• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಿ.ವಿ.ಸಿಂಧೂ ಮದುವೆಯಾಗುತ್ತಿರುವ ಗಂಡು ಯಾರು?

Tulunadu News Posted On December 3, 2024
0


0
Shares
  • Share On Facebook
  • Tweet It

ಒಲಿಂಪಿಕ್ಸ್ ವಿಜೇತೆ ಪಿ.ವಿ.ಸಿಂಧೂ ಶೀಘ್ರದಲ್ಲಿ ಹಸೆಮಣೆ ಏರಲಿದ್ದಾರೆ. ಅವರು ರಾಜಾಸ್ಥಾನದ ಉದಯಪುರದಲ್ಲಿ ಮದುವೆಯಾಗಲಿದ್ದಾರೆ. ಮದುವೆಯ ದಿನಾಂಕ ಕೂಡ ಘೋಷಣೆಯಾಗಿದ್ದು ಡಿಸೆಂಬರ್ 22 ರಂದು ಮದುವೆ ನಡೆಯಲಿದೆ. ಅದರ ನಂತರ ಹೈದ್ರಾಬಾದಿನಲ್ಲಿ ಡಿಸೆಂಬರ್ 24 ರಂದು ಗ್ರ್ಯಾಂಡ್ ರಿಸೆಪ್ಷನ್ ಕೂಡ ನಡೆಯಲಿದೆ. ಹಾಗಾದ್ರೆ ಎಲ್ಲರಲ್ಲಿಯೂ ಇದ್ದ ಪ್ರಶ್ನೆ ಏನೆಂದರೆ ಸಿಂಧೂ ಮದುವೆಯಾಗುತ್ತಿರುವ ಗಂಡು ಕ್ರೀಡಾ ಕ್ಷೇತ್ರದವರಾ? ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಮದುವೆ ಗಂಡಿನ ಹೆಸರು ವೆಂಕಟ ದತ್ತ ಸಾಯಿ. ಮದುಮಗ ಐಟಿ ಕ್ಷೇತ್ರದಲ್ಲಿದ್ದಾರೆ.

29 ವರ್ಷ ವಯಸ್ಸಿನ ಸಿಂಧೂ ಮದುವೆಯನ್ನು ಅವರ ತಂದೆ ಪಿ.ವಿ.ರಮಣ್ ಅವರೇ ಬಹಿರಂಗಪಡಿಸಿದ್ದಾರೆ. ಎರಡೂ ಕುಟುಂಬಗಳು ಕೆಲವು ವರ್ಷಗಳಿಂದ ಪರಿಚಯಸ್ಥರಾಗಿದ್ದು, ತಿಂಗಳ ಹಿಂದೆಯಷ್ಟೇ ಮದುವೆ ನಿಶ್ಚಿತವಾಗಿದೆ. ಇನ್ನು 2025 ಜನವರಿಯಿಂದ ಸಿಂಧೂ ಬಿಡುವಿಲ್ಲದ ಸ್ಪರ್ಧಾಕೂಟದಲ್ಲಿ ಭಾಗವಹಿಸಬೇಕಾಗಿರುವುದರಿಂದ ಡಿಸೆಂಬರ್ ನಲ್ಲಿಯೇ ಮದುವೆ ನಡೆಸಲು ಎರಡೂ ಕುಟುಂಬದವರು ನಿರ್ಧರಿಸಿದ್ದಾರೆ.

ವೆಂಕಟ ದತ್ತ ಸಾಯಿ ಪೊಸಿಡೆಕ್ಸ್ ಟೆಕ್ನಾಲಜಿಯಲ್ಲಿ ಕಾರ್ಯಕಾರಿ ನಿರ್ದೇಶಕರಾಗಿ ಉದ್ಯೋಗದಲ್ಲಿದ್ದಾರೆ. ವೆಂಕಟ ದತ್ತ ಸಾಯಿ ಅವರ ತಂದೆ ಭಾರತೀಯ ಕಂದಾಯ ಇಲಾಖೆಯಲ್ಲಿ ಸೇವೆಯಲ್ಲಿದ್ದು ಪ್ರಸ್ತುತ ನಿವೃತ್ತರಾಗಿದ್ದಾರೆ. ಅವರು ಮಗನ ಕಂಪೆನಿಯಲ್ಲಿಯೇ ಆಡಳಿತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನೂತನ ವಧು ವರರಿಗೆ ಶುಭ ಹಾರೈಸೋಣ ಅಲ್ಲವೇ?

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search