• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಿ.ವಿ.ಸಿಂಧೂ ಮದುವೆಯಾಗುತ್ತಿರುವ ಗಂಡು ಯಾರು?

Tulunadu News Posted On December 3, 2024
0


0
Shares
  • Share On Facebook
  • Tweet It

ಒಲಿಂಪಿಕ್ಸ್ ವಿಜೇತೆ ಪಿ.ವಿ.ಸಿಂಧೂ ಶೀಘ್ರದಲ್ಲಿ ಹಸೆಮಣೆ ಏರಲಿದ್ದಾರೆ. ಅವರು ರಾಜಾಸ್ಥಾನದ ಉದಯಪುರದಲ್ಲಿ ಮದುವೆಯಾಗಲಿದ್ದಾರೆ. ಮದುವೆಯ ದಿನಾಂಕ ಕೂಡ ಘೋಷಣೆಯಾಗಿದ್ದು ಡಿಸೆಂಬರ್ 22 ರಂದು ಮದುವೆ ನಡೆಯಲಿದೆ. ಅದರ ನಂತರ ಹೈದ್ರಾಬಾದಿನಲ್ಲಿ ಡಿಸೆಂಬರ್ 24 ರಂದು ಗ್ರ್ಯಾಂಡ್ ರಿಸೆಪ್ಷನ್ ಕೂಡ ನಡೆಯಲಿದೆ. ಹಾಗಾದ್ರೆ ಎಲ್ಲರಲ್ಲಿಯೂ ಇದ್ದ ಪ್ರಶ್ನೆ ಏನೆಂದರೆ ಸಿಂಧೂ ಮದುವೆಯಾಗುತ್ತಿರುವ ಗಂಡು ಕ್ರೀಡಾ ಕ್ಷೇತ್ರದವರಾ? ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಮದುವೆ ಗಂಡಿನ ಹೆಸರು ವೆಂಕಟ ದತ್ತ ಸಾಯಿ. ಮದುಮಗ ಐಟಿ ಕ್ಷೇತ್ರದಲ್ಲಿದ್ದಾರೆ.

29 ವರ್ಷ ವಯಸ್ಸಿನ ಸಿಂಧೂ ಮದುವೆಯನ್ನು ಅವರ ತಂದೆ ಪಿ.ವಿ.ರಮಣ್ ಅವರೇ ಬಹಿರಂಗಪಡಿಸಿದ್ದಾರೆ. ಎರಡೂ ಕುಟುಂಬಗಳು ಕೆಲವು ವರ್ಷಗಳಿಂದ ಪರಿಚಯಸ್ಥರಾಗಿದ್ದು, ತಿಂಗಳ ಹಿಂದೆಯಷ್ಟೇ ಮದುವೆ ನಿಶ್ಚಿತವಾಗಿದೆ. ಇನ್ನು 2025 ಜನವರಿಯಿಂದ ಸಿಂಧೂ ಬಿಡುವಿಲ್ಲದ ಸ್ಪರ್ಧಾಕೂಟದಲ್ಲಿ ಭಾಗವಹಿಸಬೇಕಾಗಿರುವುದರಿಂದ ಡಿಸೆಂಬರ್ ನಲ್ಲಿಯೇ ಮದುವೆ ನಡೆಸಲು ಎರಡೂ ಕುಟುಂಬದವರು ನಿರ್ಧರಿಸಿದ್ದಾರೆ.

ವೆಂಕಟ ದತ್ತ ಸಾಯಿ ಪೊಸಿಡೆಕ್ಸ್ ಟೆಕ್ನಾಲಜಿಯಲ್ಲಿ ಕಾರ್ಯಕಾರಿ ನಿರ್ದೇಶಕರಾಗಿ ಉದ್ಯೋಗದಲ್ಲಿದ್ದಾರೆ. ವೆಂಕಟ ದತ್ತ ಸಾಯಿ ಅವರ ತಂದೆ ಭಾರತೀಯ ಕಂದಾಯ ಇಲಾಖೆಯಲ್ಲಿ ಸೇವೆಯಲ್ಲಿದ್ದು ಪ್ರಸ್ತುತ ನಿವೃತ್ತರಾಗಿದ್ದಾರೆ. ಅವರು ಮಗನ ಕಂಪೆನಿಯಲ್ಲಿಯೇ ಆಡಳಿತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನೂತನ ವಧು ವರರಿಗೆ ಶುಭ ಹಾರೈಸೋಣ ಅಲ್ಲವೇ?

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search