• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಿ.ವಿ.ಸಿಂಧೂ ಮದುವೆಯಾಗುತ್ತಿರುವ ಗಂಡು ಯಾರು?

Tulunadu News Posted On December 3, 2024
0


0
Shares
  • Share On Facebook
  • Tweet It

ಒಲಿಂಪಿಕ್ಸ್ ವಿಜೇತೆ ಪಿ.ವಿ.ಸಿಂಧೂ ಶೀಘ್ರದಲ್ಲಿ ಹಸೆಮಣೆ ಏರಲಿದ್ದಾರೆ. ಅವರು ರಾಜಾಸ್ಥಾನದ ಉದಯಪುರದಲ್ಲಿ ಮದುವೆಯಾಗಲಿದ್ದಾರೆ. ಮದುವೆಯ ದಿನಾಂಕ ಕೂಡ ಘೋಷಣೆಯಾಗಿದ್ದು ಡಿಸೆಂಬರ್ 22 ರಂದು ಮದುವೆ ನಡೆಯಲಿದೆ. ಅದರ ನಂತರ ಹೈದ್ರಾಬಾದಿನಲ್ಲಿ ಡಿಸೆಂಬರ್ 24 ರಂದು ಗ್ರ್ಯಾಂಡ್ ರಿಸೆಪ್ಷನ್ ಕೂಡ ನಡೆಯಲಿದೆ. ಹಾಗಾದ್ರೆ ಎಲ್ಲರಲ್ಲಿಯೂ ಇದ್ದ ಪ್ರಶ್ನೆ ಏನೆಂದರೆ ಸಿಂಧೂ ಮದುವೆಯಾಗುತ್ತಿರುವ ಗಂಡು ಕ್ರೀಡಾ ಕ್ಷೇತ್ರದವರಾ? ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಮದುವೆ ಗಂಡಿನ ಹೆಸರು ವೆಂಕಟ ದತ್ತ ಸಾಯಿ. ಮದುಮಗ ಐಟಿ ಕ್ಷೇತ್ರದಲ್ಲಿದ್ದಾರೆ.

29 ವರ್ಷ ವಯಸ್ಸಿನ ಸಿಂಧೂ ಮದುವೆಯನ್ನು ಅವರ ತಂದೆ ಪಿ.ವಿ.ರಮಣ್ ಅವರೇ ಬಹಿರಂಗಪಡಿಸಿದ್ದಾರೆ. ಎರಡೂ ಕುಟುಂಬಗಳು ಕೆಲವು ವರ್ಷಗಳಿಂದ ಪರಿಚಯಸ್ಥರಾಗಿದ್ದು, ತಿಂಗಳ ಹಿಂದೆಯಷ್ಟೇ ಮದುವೆ ನಿಶ್ಚಿತವಾಗಿದೆ. ಇನ್ನು 2025 ಜನವರಿಯಿಂದ ಸಿಂಧೂ ಬಿಡುವಿಲ್ಲದ ಸ್ಪರ್ಧಾಕೂಟದಲ್ಲಿ ಭಾಗವಹಿಸಬೇಕಾಗಿರುವುದರಿಂದ ಡಿಸೆಂಬರ್ ನಲ್ಲಿಯೇ ಮದುವೆ ನಡೆಸಲು ಎರಡೂ ಕುಟುಂಬದವರು ನಿರ್ಧರಿಸಿದ್ದಾರೆ.

ವೆಂಕಟ ದತ್ತ ಸಾಯಿ ಪೊಸಿಡೆಕ್ಸ್ ಟೆಕ್ನಾಲಜಿಯಲ್ಲಿ ಕಾರ್ಯಕಾರಿ ನಿರ್ದೇಶಕರಾಗಿ ಉದ್ಯೋಗದಲ್ಲಿದ್ದಾರೆ. ವೆಂಕಟ ದತ್ತ ಸಾಯಿ ಅವರ ತಂದೆ ಭಾರತೀಯ ಕಂದಾಯ ಇಲಾಖೆಯಲ್ಲಿ ಸೇವೆಯಲ್ಲಿದ್ದು ಪ್ರಸ್ತುತ ನಿವೃತ್ತರಾಗಿದ್ದಾರೆ. ಅವರು ಮಗನ ಕಂಪೆನಿಯಲ್ಲಿಯೇ ಆಡಳಿತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನೂತನ ವಧು ವರರಿಗೆ ಶುಭ ಹಾರೈಸೋಣ ಅಲ್ಲವೇ?

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search