• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಎಂಎಫ್ ಎಂಡಿ ಜಗದೀಶ್ ಅವರ ದಿಢೀರ್ ವರ್ಗಾವಣೆಯ ಹಿಂದಿದೆಯಾ ಕೇರಳ ಲಾಬಿ?

Tulunadu News Posted On December 5, 2024
0


0
Shares
  • Share On Facebook
  • Tweet It

ಕೆಎಂಎಫ್ ಎಂಡಿ ಜಗದೀಶ್ ಅವರನ್ನು ಅಚಾನಕ್ ಆಗಿ ಅವರ ಸ್ಥಾನದಿಂದ ವರ್ಗಾಯಿಸಲಾಗಿದೆ. ಇದರ ವಿರುದ್ಧ ಸಾಮಾಜಿಕ ಜಾಲತಾಣ “ಎಕ್ಸ್”ನಲ್ಲಿ ಹಲವರು ಧ್ವನಿ ಎತ್ತಿದ್ದಾರೆ. ವಿಧಾನಸಭಾ ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ಶಾಸಕ ಸುನೀಲ್ ಕುಮಾರ್ ಸಹಿತ ಕೆಲವರು ಇದರ ಹಿಂದೆ ಇರುವ ಷಡ್ಯಂತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಸರಕಾರಿ ಇಲಾಖೆಯಲ್ಲಿರುವವರಿಗೆ ವರ್ಗಾವಣೆ ವಿಶೇಷ ಅಲ್ಲ. ಆದರೆ ಕೆಎಂಎಫ್ ಎಂಡಿ ಜಗದೀಶರ ವರ್ಗಾವಣೆಯ ವಿಷಯದಲ್ಲಿ ಈಗ ಸಾಕಷ್ಟು ಚರ್ಚೆಗಳು ನಡೆಯುತ್ತಿರುವುದರ ಬಗ್ಗೆ ಪ್ರಬಲವಾದ ಕಾರಣಗಳಿವೆ. ಮೊದಲನೇಯದಾಗಿ ನಂದಿನಿ ಉತ್ಪನ್ನಗಳಿಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ಸಿಗುವುದರ ಹಿಂದೆ ಜಗದೀಶ್ ಅವರ ಫಲವಿದೆ ಎನ್ನಲಾಗುತ್ತಿದೆ. ಅವರು ಎಂಡಿ ಆಗಿದ್ದರೂ ಸುಮ್ಮನೆ ಕಚೇರಿಯಲ್ಲಿ ಕುಳಿತು ಛೇರ್ ಬಿಸಿ ಮಾಡಲಿಲ್ಲ. ನಂದಿನಿಯ ಮಾರುಕಟ್ಟೆಯನ್ನು ವಿಸ್ತರಿಸುವುದರ ಬಗ್ಗೆ ಏನು ಮಾಡಬಹುದು ಎಂದು ಯೋಚನೆ ಮಾಡಿದರು.

ಅವರು ಟಿ20 ಕ್ರಿಕೆಟ್, ಐಎಸ್ ಎಲ್ ಫುಟ್ ಬಾಲ್ ಟೂರ್ನಮೆಂಟ್, ಪ್ರೊ ಕಬಡ್ಡಿ ಪಂದ್ಯಾಟಗಳಿಗೆ ನಂದಿನಿಯ ಪ್ರಾಯೋಜಕತ್ವ ನೀಡಿ ನಂದಿನಿಯ ಬ್ರಾಂಡ್ ಹಿಗ್ಗಿಸಲು ತಂತ್ರ ರೂಪಿಸಿದರು. ನವದೆಹಲಿಯಲ್ಲಿ ನಂದಿನಿಯ ತಾಜಾ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ, ದುಬೈಯಲ್ಲಿ ನಂದಿನಿ ಉತ್ಪನ್ನಗಳ ಔಟ್ ಲೆಟ್, ತಿರುಪತಿ ದೇವಸ್ಥಾನಕ್ಕೆ ಮತ್ತೆ ನಂದಿನಿಯ ತುಪ್ಪ ಪೂರೈಸುವ ಒಪ್ಪಂದ ಮತ್ತು ಈಗ ಇಡ್ಲಿ ಮತ್ತು ದೋಸೆಯ ಹಿಟ್ಟು ಮಾರುಕಟ್ಟೆಗೆ ತರುವವರಿದ್ದರು. ಹೀಗೆ ನಿರಂತರವಾಗಿ ನಂದಿನಿಯ ಮಾರುಕಟ್ಟೆ ವಿಸ್ತರಿಸಲು ಜಗದೀಶ್ ಏನಾದರೊಂದು ಕಾರ್ಯತಂತ್ರ ರೂಪಿಸುತ್ತಿದ್ದರು. ಅಂತಹ ಅಧಿಕಾರಿಯನ್ನು ಅವಧಿಪೂರ್ವ ದಿಢೀರವಾಗಿ ಎತ್ತಂಗಡಿ ಮಾಡುವ ಮೂಲಕ ಕಾಂಗ್ರೆಸ್ ಸರಕಾರದ ನಿರ್ಧಾರ ಅನುಮಾನಗಳಿಗೆ ಕಾರಣವಾಗಿದೆ.

ಕೇರಳದ ಬ್ರಾಂಡಿನ ಇಡ್ಲಿ/ದೋಸೆ ಹಿಟ್ಟಿನ ಕಂಪೆನಿಯೊಂದರ ಲಾಬಿಗೆ ಮಣಿದ ರಾಜ್ಯದ ಕಾಂಗ್ರೆಸ್ ಸರಕಾರ ಜಗದೀಶ್ ಅವರನ್ನು ಎಂಡಿ ಸ್ಥಾನದಿಂದ ವರ್ಗಾವಣೆ ಮಾಡಿದೆ ಎನ್ನುವ ಆರೋಪ ಇದೆ. ಕೇರಳದಲ್ಲಿ ಇದೇ ಉತ್ಪನ್ನಗಳನ್ನು ಮಾರುವ ಸಂಸ್ಥೆಯೊಂದು ದೆಹಲಿ ನಾಯಕರ ಮೂಲಕ ರಾಜ್ಯ ಕಾಂಗ್ರೆಸ್ಸಿನ ಮೇಲೆ ಒತ್ತಡ ತಂದು ಜಗದೀಶ್ ಅವರನ್ನು ಎತ್ತಂಗಡಿ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಕೇರಳದ ಕಂಪೆನಿಯ ಲಾಬಿ ಇದೆ ಎಂದು ಹೇಳಲಾಗುತ್ತದೆ. ಒಟ್ಟಿನಲ್ಲಿ ಈ ವಿಷಯದ ಬಗ್ಗೆ ರಾಜ್ಯದ ಸಿಎಂ ಅಥವಾ ಸಚಿವರೇ ಉತ್ತರ ನೀಡಬೇಕಿದೆ. ಒಂದು ವೇಳೆ ಯಾರದ್ದೋ ಒತ್ತಡಕ್ಕೆ ಮಣಿದಿರುವುದು ನಿಜವಾದರೆ ಅದು ಕೆಎಂಎಫ್ ವಿಸ್ತರಣೆಯ ಬಾಗಿಲು ಮುಚ್ಚಿದಂತೆ ಎನ್ನುವುದು ಹಲವರ ಅಂಬೋಣ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search