• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೂಗಲ್ ಮ್ಯಾಪ್ ಎಡವಟ್ಟು, ರಾತ್ರಿಯೀಡಿ ಕಾಡಿನಲ್ಲಿ ಕಳೆದ ಕುಟುಂಬ!

Tulunadu News Posted On December 6, 2024
0


0
Shares
  • Share On Facebook
  • Tweet It

ಒಂದು ಕಾಲದಲ್ಲಿ ಎಲ್ಲಿಯಾದರೂ ಅಪರಿಚಿತ ಜಾಗಕ್ಕೆ ಹೋಗಬೇಕಾದರೆ ದಾರಿಯಲ್ಲಿ ಸಿಕ್ಕಿದವರನ್ನೆಲ್ಲಾ ಕೇಳಿ ಕೇಳಿ ಆ ಪ್ರದೇಶವನ್ನು ತಲುಪಬೇಕಾಗಿತ್ತು. ಇದರಿಂದ ಅನೇಕ ಬಾರಿ ಸಮಯವೂ ವ್ಯರ್ಥವಾಗುತ್ತಿತ್ತು. ಇನ್ನೊಂದಿಷ್ಟು ಸಲ ಅವರು ಹೇಳಿದ್ದು ಅರ್ಥವಾಗದೇ, ಗೊಂದಲಕ್ಕೆ ಬಿದ್ದು ಚಾಲಕರು ತಪ್ಪು ದಾರಿಯಲ್ಲಿಯೂ ಹೋಗುತ್ತಿದ್ದರು. ಆದರೆ ನಂತರ ಗೂಗಲ್ ಮ್ಯಾಪ್ ತರಹದ್ದು ಬಂದ ಬಳಿಕ ನಮ್ಮ ಮೊಬೈಲಿನಲ್ಲಿ ಲೋಕೇಶನ್ ಹಾಕಿ ಅದರ ಸೂಚನೆಯಂತೆ ದಾರಿಯನ್ನು ಕ್ರಮಿಸಬಹುದಿತ್ತು. ಆದರೆ ಗೂಗಲ್ ಮ್ಯಾಪ್ ಅನ್ನು ಪ್ರತಿ ಸಲ ನಂಬಬಹುದೇ ಎನ್ನುವ ಪ್ರಶ್ನೆ ಈಗ ಕೆಲವು ದಿನಗಳಿಂದ ನಿರಂತರವಾಗಿ ಉದ್ಭವವಾಗುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶದಲ್ಲಿ ಮದುವೆ ಮಂಟಪಕ್ಕೆ ಕಾರಿನಲ್ಲಿ ಹೋಗುತ್ತಿದ್ದ ಮೂವರು ಪ್ರವಾಹಕ್ಕೆ ಅರ್ಧ ಕೊಚ್ಚಿ ಹೋಗಿದ್ದ ಸೇತುವೆಯ ಮೇಲೆ ಗೂಗಲ್ ಮ್ಯಾಪ್ ನಂಬಿ ಹೋದ ಪರಿಣಾಮ ಅರ್ಧ ಸೇತುವೆಯ ಬಳಿಕ ಸೀದಾ ನದಿಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಕರ್ನಾಟಕದ ಬೆಳಗಾವಿಯ ದಟ್ಟಾರಣ್ಯದ ನಡುವೆ ಕುಟುಂಬವೊಂದು ಭಯದಲ್ಲಿಯೇ ರಾತ್ರಿ ಕಳೆದ ಘಟನೆ ನಡೆದಿದೆ.

ಬಿಹಾರ ಮೂಲದ ರಣಜಿತ್ ದಾಸ್ ಎನ್ನುವವರ ಕುಟುಂಬ ಕಾರಿನಲ್ಲಿ ಗೋವಾಕ್ಕೆ ತೆರಳುತ್ತಿತು. ಅವರು ಕಾರಿನಲ್ಲಿ ಹೋಗುತ್ತಾ ದಾರಿ ತಿಳಿಯಲು ಗೂಗಲ್ ಮ್ಯಾಪ್ ಹಾಕಿದ್ದಾರೆ. ಅವರಿಗೆ ಅದು ಬೆಳಗಾವಿಯ ಶಿರೋಲಿ ಮತ್ತು ಹೆಮ್ಮಡಗಾ ಮಾರ್ಗ ಸಮೀಪದ ದಾರಿ ತೋರಿಸಿದೆ. ಹೀಗೆ ಬಿಹಾರದ ಕುಟುಂಬ ಕಾರಿನಲ್ಲಿ ಬೆಳಗಾವಿಯ ಖಾನಾಪುರ ಭೀಮಗಢ ಅರಣ್ಯದ ಒಳಗೆ ಸುಮಾರು 7 ರಿಂದ 8 ಕಿ.ಲೋ ಮೀಟರ್ ದೂರ ಒಳಗೆ ಹೋಗಿದೆ. ಬೆಳಗಾವಿಯ ದಟ್ಟಾರಣ್ಯದ ಒಳಗೆ ಹೋಗುತ್ತಿದ್ದಂತೆ ಕತ್ತಲು ಕವಿದ ಕಾರಣ ಅವರಿಗೆ ವಾಪಾಸು ಬರಲು ಹೆದರಿಕೆ ಆಗಿದೆ. ಅರಣ್ಯ ಪ್ರದೇಶದಲ್ಲಿ ಮೊಬೈಲ್ ನೆಟ್ ವರ್ಕ್ ಕೂಡ ಸಿಗುವುದು ನಿಂತು ಹೋಗಿದೆ. ಕಾರಿನಲ್ಲಿ ಇಡೀ ಕುಟುಂಬ ಹೆದರಿಕೆಯಿಂದ ಇಡೀ ರಾತ್ರಿ ಕಳೆದಿದೆ.

ಒಂದಿಷ್ಟು ಬೆಳಕಾದ ಬಳಿಕ ನಾಲ್ಕು ಕಿಲೋ ಮೀಟರ್ ಹಿಂದಕ್ಕೆ ಬಂದ ಬಳಿಕ ಮೊಬೈಲ್ ನೆಟ್ ವರ್ಕ್ ಸಿಕ್ಕಿದೆ. ತಕ್ಷಣ ಸಹಾಯಕ್ಕಾಗಿ ಪೊಲೀಸರಿಗೆ (112) ನಂಬರಿಗೆ ಕರೆ ಮಾಡಿದ್ದಾರೆ. ಪೊಲೀಸರಿಗೆ ತಮ್ಮ ಸಮಸ್ಯೆಯನ್ನು ವಿವರಿಸಿದ್ದಾರೆ. ಮಾಹಿತಿ ತಿಳಿದು ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕಾಡಿನಿಂದ ಕುಟುಂಬಸ್ಥರನ್ನು ಸುರಕ್ಷಿತವಾಗಿ ಗೋವಾಕ್ಕೆ ಹೋಗುವ ಮುಖ್ಯ ರಸ್ತೆಗೆ ತಂದು ತಲುಪಿಸಿದ್ದಾರೆ. ಜೀವ ಉಳಿದ ಖುಷಿಯಲ್ಲಿ ಆ ಕುಟುಂಬ ಪೊಲೀಸರಿಗೆ ಧನ್ಯವಾದ ಅರ್ಪಿಸಿ ತೆರಳಿದೆ.

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search