• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಮಾನ ನಿಲ್ದಾಣದಲ್ಲಿ ಸಮೋಸಕ್ಕೆ 350 ರೂಪಾಯಿ ಆದ್ರೆ ಹೇಗೆ ಎಂದ ಸಂಸದ!

Tulunadu News Posted On December 6, 2024
0


0
Shares
  • Share On Facebook
  • Tweet It

ದೇಶದ ಸಂಸತ್ತಿನಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಲೇ ಇರುತ್ತದೆ. ಇಪ್ಪತ್ತು ರೂಪಾಯಿಯ ನೀರಿನ ಬಾಟಲಿಯಿಂದ ಹಿಡಿದು ಸಾವಿರಾರು ಕೋಟಿ ರೂಪಾಯಿಗಳ ಭದ್ರತಾ ವ್ಯವಸ್ಥೆಗಳ ಬಗ್ಗೆಯೂ ಸಂಸದರು ಚರ್ಚೆ ಮಾಡುತ್ತಾರೆ. ಈ ಬಾರಿಯ ಸಂಸತ್ತಿನ ರಾಜ್ಯ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಸಂಸದ, ನಟಿ ಪರಿಣಿತಿ ಚೋಪ್ರಾ ಪತಿ ರಾಘವ್ ಚಡ್ಡಾ ವಿಮಾನ ನಿಲ್ದಾಣದಲ್ಲಿ ಆಹಾರ ಮತ್ತು ಪಾನೀಯಗಳ ಬೆಲೆಗಳ ಬಗ್ಗೆ ಧ್ವನಿ ಎತ್ತಿದ್ದಾರೆ.

ಹೊರಗೆ 20 ರೂಪಾಯಿಗಳಿಗೆ ಸಿಗುವ ನೀರಿನ ಬಾಟಲಿಗೆ ವಿಮಾನ ನಿಲ್ದಾಣದಲ್ಲಿ ನೂರು ರೂಪಾಯಿ ಮೌಲ್ಯ ಹಾಕಲಾಗುತ್ತದೆ. ಇನ್ನು ಒಂದು ಕಪ್ ಟೀ ಬೇಕಾದರೆ 250 ರೂಪಾಯಿ ನೀಡಬೇಕು, ಒಂದು ಸಮೋಸಕ್ಕೆ 350 ರೂಪಾಯಿ ಚಾರ್ಜ್ ಮಾಡುತ್ತಾರೆ. ಹೀಗಿರುವಾಗ ವಿಮಾನ ನಿಲ್ದಾಣದಲ್ಲಿ ವಿಮಾನಕ್ಕೆ ಕಾಯುವ ಪ್ರಯಾಣಿಗ ಇಷ್ಟು ದುಬಾರಿ ಬೆಲೆಯನ್ನು ಆಹಾರ ಸೇವಿಸಲು ಹಿಂದೇಟು ಹಾಕುತ್ತಾನೆ. ಇನ್ನು ಆತ ಕೇವಲ ಅಲ್ಲಿ ಸಿಗುವ ನೀರನ್ನು ಮಾತ್ರ ಕುಡಿದು ಸಮಯ ಕಳೆಯಬೇಕಾಗುತ್ತದೆ. ಇದನ್ನು ಸರಕಾರ ಗಮನಿಸಬೇಕು. ಈ ಮೂಲಕ ಜನಸಾಮಾನ್ಯರಿಗೆ ಈ ಹೊರೆ ಆಗದ ರೀತಿಯಲ್ಲಿ ನೋಡಬೇಕು ಎಂದು ಆಗ್ರಹಿಸಿದ್ದಾರೆ.

ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವವರೆಲ್ಲರೂ ಶ್ರೀಮಂತರು ಎಂಬ ಭಾವನೆ ಎಲ್ಲರಲ್ಲಿಯೂ ಇದೆ. ಅದು ಪೂರ್ಣ ಸುಳ್ಳಲ್ಲ, ಹಾಗಂತ ಎಲ್ಲರೂ ಶ್ರೀಮಂತರೂ ಅಲ್ಲ. ಇನ್ನು ವಿಮಾನ ನಿಲ್ದಾಣದಲ್ಲಿ ಸಿಗುವ ಟೀ, ಸಮೂಸಕ್ಕೆ ಅಷ್ಟು ಬೆಲೆ ಕೊಡುವಷ್ಟು ಅದು ಶ್ರೇಷ್ಟವೂ ಅಲ್ಲ. ಆದ್ದರಿಂದ ಈ ಬೆಲೆ ನಿಗದಿಗೆ ಒಂದು ಮಾನದಂಡ ಅನುಸರಿಸಬೇಕಾಗಿದೆ. ಒಂದು ನಿರ್ದಿಷ್ಟ ಬೆಲೆಗಿಂತ ಜಾಸ್ತಿ ವಸೂಲಿ ಮಾಡಬಾರದು ಎಂದು ನಿಯಮ ತಂದರೆ ಆಗ ಮಧ್ಯಮ ವರ್ಗದವರು ಕೂಡ ಅನಿವಾರ್ಯವಾದ್ದಲ್ಲಿ ವಿಮಾನ ನಿಲ್ದಾಣದಲ್ಲಿ ಸಿಗುವ ಆಹಾರ ವಸ್ತುಗಳನ್ನು ಸೇವಿಸಲು ಸಾಧ್ಯವಾಗುತ್ತದೆ. ಇನ್ನು ಈ ಮಾನದಂಡವನ್ನು ಮಲ್ಟಿಫ್ಲೆಕ್ಸ್ ನಲ್ಲಿಯೂ ಅಳವಡಿಸಿದರೆ ಅಲ್ಲಿಯೂ ಪಾಪ್ ಕಾರ್ನ್ , ಕೋಲ್ಡ್ ಡಿಂಕ್ರ್ಸ್ ಬೆಲೆಯೂ ಕೈಗೆಟಕಲು ಸಾಧ್ಯವಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search