• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಸ್ ಎಂ ಕೆ ನಿಧನದ ಹಿನ್ನಲೆಯಲ್ಲಿ ರಾಜ್ಯ ಸರಕಾರದಿಂದ ಬುಧವಾರ ರಜೆ ಘೋಷಣೆ…

Tulunadu News Posted On December 10, 2024
0


0
Shares
  • Share On Facebook
  • Tweet It

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ತಮ್ಮ 92 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. 1999 ರಿಂದ 2004 ರ ತನಕ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕೃಷ್ಣ ಅವರು ರಾಜ್ಯದ ಅಭಿವೃದ್ಧಿಯಲ್ಲಿ ತಮ್ಮದೇ ಕೊಡುಗೆ ನೀಡಿದ್ದಾರೆ. ಬೆಂಗಳೂರನ್ನು ಐಟಿ – ಬಿಟಿ ಹಬ್ಬ ಮಾಡುವಲ್ಲಿ ಕೃಷ್ಣ ಅವರ ಪಾತ್ರ ದೊಡ್ಡದು. ಕಾಂಗ್ರೆಸ್ಸಿನ ಅಗ್ರಗಣ್ಯ ನಾಯಕರಲ್ಲಿ ಒಬ್ಬರಾಗಿದ್ದ ಕೃಷ್ಣ ಅವರು ಕೇಂದ್ರ ಸಚಿವರಾಗಿಯೂ, ಕೇಂದ್ರದ ಕಾಂಗ್ರೆಸ್ ಮುಖಂಡರಿಗೆ ಆಪ್ತರಾಗಿಯೂ ಇದ್ದವರು. ಒಂದು ಹಂತದಲ್ಲಿ ಕೇಂದ್ರದ ಕಾಂಗ್ರೆಸ್ ನಾಯಕರುಗಳಿಗೆ ಆರ್ಥಿಕ ಶಕ್ತಿಯನ್ನು ಒದಗಿಸುವಲ್ಲಿ ಕೃಷ್ಣ ಅವರು ಶ್ರಮಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಅನೇಕ ನಾಯಕರು ಕೃಷ್ಣ ಅವರ ನಿಧನಕ್ಕೆ ಶ್ರದ್ಧಾಂಜಲಿ ಕೋರಿದ್ದಾರೆ.
ಕೃಷ್ಣ ಅವರ ಕೆಲವು ಸಂಬಂಧಿಕರು ವಿದೇಶದಲ್ಲಿದ್ದ ಕಾರಣ ಅಂತ್ಯ ಸಂಸ್ಕಾರ ಕಾರ್ಯವನ್ನು ಬುಧವಾರ ನಡೆಸಲು ಅವರ ಕುಟುಂಬ ವರ್ಗದವರು ತೀರ್ಮಾನಿಸಿದ್ದಾರೆ.

ಡಿಸೆಂಬರ್ 11 ರಂದು ಬುಧವಾರ ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಆದ್ದರಿಂದ ಡಿಸೆಂಬರ್ 11 ರಂದು ರಾಜ್ಯಾದ್ಯಂತ ಎಲ್ಲಾ ಸರಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಸರಕಾರಿ ಶಾಲಾ ಕಾಲೇಜುಗಳಿಗೆ ( ಎಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ಡಿಸೆಂಬರ್ 10 ರಿಂದ 12 ರ ತನಕ ಒಟ್ಟು ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲು ತೀರ್ಮಾನವಾಗಿದ್ದು, ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯಮಿತವಾಗಿ ರಾಜ್ಯ ಸರಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು ಸೂಚಿಸಲಾಗಿದೆ.

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search