• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎಸ್ ಎಂ ಕೆ ನಿಧನದ ಹಿನ್ನಲೆಯಲ್ಲಿ ರಾಜ್ಯ ಸರಕಾರದಿಂದ ಬುಧವಾರ ರಜೆ ಘೋಷಣೆ…

Tulunadu News Posted On December 10, 2024
0


0
Shares
  • Share On Facebook
  • Tweet It

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ತಮ್ಮ 92 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. 1999 ರಿಂದ 2004 ರ ತನಕ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕೃಷ್ಣ ಅವರು ರಾಜ್ಯದ ಅಭಿವೃದ್ಧಿಯಲ್ಲಿ ತಮ್ಮದೇ ಕೊಡುಗೆ ನೀಡಿದ್ದಾರೆ. ಬೆಂಗಳೂರನ್ನು ಐಟಿ – ಬಿಟಿ ಹಬ್ಬ ಮಾಡುವಲ್ಲಿ ಕೃಷ್ಣ ಅವರ ಪಾತ್ರ ದೊಡ್ಡದು. ಕಾಂಗ್ರೆಸ್ಸಿನ ಅಗ್ರಗಣ್ಯ ನಾಯಕರಲ್ಲಿ ಒಬ್ಬರಾಗಿದ್ದ ಕೃಷ್ಣ ಅವರು ಕೇಂದ್ರ ಸಚಿವರಾಗಿಯೂ, ಕೇಂದ್ರದ ಕಾಂಗ್ರೆಸ್ ಮುಖಂಡರಿಗೆ ಆಪ್ತರಾಗಿಯೂ ಇದ್ದವರು. ಒಂದು ಹಂತದಲ್ಲಿ ಕೇಂದ್ರದ ಕಾಂಗ್ರೆಸ್ ನಾಯಕರುಗಳಿಗೆ ಆರ್ಥಿಕ ಶಕ್ತಿಯನ್ನು ಒದಗಿಸುವಲ್ಲಿ ಕೃಷ್ಣ ಅವರು ಶ್ರಮಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಅನೇಕ ನಾಯಕರು ಕೃಷ್ಣ ಅವರ ನಿಧನಕ್ಕೆ ಶ್ರದ್ಧಾಂಜಲಿ ಕೋರಿದ್ದಾರೆ.
ಕೃಷ್ಣ ಅವರ ಕೆಲವು ಸಂಬಂಧಿಕರು ವಿದೇಶದಲ್ಲಿದ್ದ ಕಾರಣ ಅಂತ್ಯ ಸಂಸ್ಕಾರ ಕಾರ್ಯವನ್ನು ಬುಧವಾರ ನಡೆಸಲು ಅವರ ಕುಟುಂಬ ವರ್ಗದವರು ತೀರ್ಮಾನಿಸಿದ್ದಾರೆ.

ಡಿಸೆಂಬರ್ 11 ರಂದು ಬುಧವಾರ ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಆದ್ದರಿಂದ ಡಿಸೆಂಬರ್ 11 ರಂದು ರಾಜ್ಯಾದ್ಯಂತ ಎಲ್ಲಾ ಸರಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಸರಕಾರಿ ಶಾಲಾ ಕಾಲೇಜುಗಳಿಗೆ ( ಎಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ. ಡಿಸೆಂಬರ್ 10 ರಿಂದ 12 ರ ತನಕ ಒಟ್ಟು ಮೂರು ದಿನಗಳು ರಾಜ್ಯಾದ್ಯಂತ ಶೋಕಾಚರಣೆ ಮಾಡಲು ತೀರ್ಮಾನವಾಗಿದ್ದು, ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯಮಿತವಾಗಿ ರಾಜ್ಯ ಸರಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು ಸೂಚಿಸಲಾಗಿದೆ.

0
Shares
  • Share On Facebook
  • Tweet It




Trending Now
ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
Tulunadu News August 20, 2025
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
Tulunadu News August 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
  • Popular Posts

    • 1
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 2
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • 3
      ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • 4
      ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!

  • Privacy Policy
  • Contact
© Tulunadu Infomedia.

Press enter/return to begin your search